AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ

India vs Australia Final: ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

Vinay Bhat
|

Updated on: Jun 07, 2023 | 9:19 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಇಂದು ಡಬ್ಲ್ಯೂಟಿಸಿ 2023 ಫೈನಲ್​ಗೆ ಚಾಲನೆ ಸಿಗಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಇಂದು ಡಬ್ಲ್ಯೂಟಿಸಿ 2023 ಫೈನಲ್​ಗೆ ಚಾಲನೆ ಸಿಗಲಿದೆ.

1 / 7
ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

2 / 7
2021ರ ಜೂನ್‌ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಭಾರತ 8 ವಿಕೆಟ್‌ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

2021ರ ಜೂನ್‌ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಭಾರತ 8 ವಿಕೆಟ್‌ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

3 / 7
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ನೆಟ್ಸ್​​ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾಗ ಅವರ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿದೆ. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಪ್ರಾಕ್ಟೀಸ್​ ಅನ್ನು ಅಂತ್ಯಗೊಳಿಸಿದರು. ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ನೆಟ್ಸ್​​ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾಗ ಅವರ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿದೆ. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಪ್ರಾಕ್ಟೀಸ್​ ಅನ್ನು ಅಂತ್ಯಗೊಳಿಸಿದರು. ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

4 / 7
ಭಾರತ ತಂಡದಲ್ಲಿ ಮ್ಯಾಚ್ ವಿನ್ನರ್‌ಗಳ ದಂಡೇ ಇದೆ. ಗಿಲ್ ಮತ್ತು ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಚೇತೇಶ್ವರ್‌ ಪೂಜಾರ ಮತ್ತು ರಹಾನೆ ಇದ್ದಾರೆ. ಆಲ್ರೌಂಡರ್​ಗಳಾಗಿ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಫಾಸ್ಟ್ ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್‌ ಶಮಿ ಮತ್ತು ಮೊಹಮ್ಮದ್‌ ಸಿರಾಜ್‌, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಸಜ್ಜಾಗಿ ನಿಂತಿದ್ದಾರೆ.

ಭಾರತ ತಂಡದಲ್ಲಿ ಮ್ಯಾಚ್ ವಿನ್ನರ್‌ಗಳ ದಂಡೇ ಇದೆ. ಗಿಲ್ ಮತ್ತು ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಚೇತೇಶ್ವರ್‌ ಪೂಜಾರ ಮತ್ತು ರಹಾನೆ ಇದ್ದಾರೆ. ಆಲ್ರೌಂಡರ್​ಗಳಾಗಿ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಫಾಸ್ಟ್ ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್‌ ಶಮಿ ಮತ್ತು ಮೊಹಮ್ಮದ್‌ ಸಿರಾಜ್‌, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಸಜ್ಜಾಗಿ ನಿಂತಿದ್ದಾರೆ.

5 / 7
143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!