AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಂಡರಿಗಳೊಂದಿಗೆ ಹೊಸ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಭಾರತ

India vs Bangladesh T20I: ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಮ್ಯಾಚ್​ನಲ್ಲಿ 7 ವಿಕೆಟ್​ಗಳ ಜಯ ಸಾಧಿಸಿದ್ದ ಭಾರತ ತಂಡವು ದ್ವಿತೀಯ ಪಂದ್ಯದಲ್ಲಿ 86 ರನ್​ಗಳ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 133 ರನ್​ಗಳ ಗೆಲುವು ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 10:30 AM

Share
ಹೈದರಾಬಾದ್​​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ಸೃಷ್ಟಿಯಾಗಿರುವುದು ಬೌಂಡರಿಗಳಿಂದ ಎಂಬುದು ವಿಶೇಷ. ಇಂತಹದೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಭಾರತೀಯ ಬ್ಯಾಟರ್​ಗಳು.

ಹೈದರಾಬಾದ್​​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ಸೃಷ್ಟಿಯಾಗಿರುವುದು ಬೌಂಡರಿಗಳಿಂದ ಎಂಬುದು ವಿಶೇಷ. ಇಂತಹದೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಭಾರತೀಯ ಬ್ಯಾಟರ್​ಗಳು.

1 / 6
ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೊದಲ ಓವರ್​ನಿಂದ ಶುರುವಾದ ಈ ಸಿಡಿಲಬ್ಬರ ಕೊನೆಗೊಂಡಿದ್ದು 20ನೇ ಓವರ್​ನ ಕೊನೆಯ ಎಸೆತದಲ್ಲಿನ ಸಿಕ್ಸ್​ನೊಂದಿಗೆ. ಅದು ಕೂಡ 20 ಓವರ್​ಗಳಲ್ಲಿ 297 ರನ್​ ಕಲೆಹಾಕುವ ಮೂಲಕ.

ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೊದಲ ಓವರ್​ನಿಂದ ಶುರುವಾದ ಈ ಸಿಡಿಲಬ್ಬರ ಕೊನೆಗೊಂಡಿದ್ದು 20ನೇ ಓವರ್​ನ ಕೊನೆಯ ಎಸೆತದಲ್ಲಿನ ಸಿಕ್ಸ್​ನೊಂದಿಗೆ. ಅದು ಕೂಡ 20 ಓವರ್​ಗಳಲ್ಲಿ 297 ರನ್​ ಕಲೆಹಾಕುವ ಮೂಲಕ.

2 / 6
ಈ 297 ರನ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು 47 ಬೌಂಡರಿಗಳನ್ನು ಬಾರಿಸಿದ್ದರು ಎಂಬುದು ವಿಶೇಷ. ಇದರಲ್ಲಿ 22 ಸಿಕ್ಸ್ ಹಾಗೂ 25 ಫೋರ್​ಗಳು ಒಳಗೊಂಡಿದ್ದವು. ಇದರೊಂದಿಗೆ ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಬೌಂಡರಿಗಳನ್ನು ಬಾರಿಸಿದ ವಿಶ್ವ ದಾಖಲೆ ಭಾರತ ತಂಡದ ಪಾಲಾಯಿತು.

ಈ 297 ರನ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು 47 ಬೌಂಡರಿಗಳನ್ನು ಬಾರಿಸಿದ್ದರು ಎಂಬುದು ವಿಶೇಷ. ಇದರಲ್ಲಿ 22 ಸಿಕ್ಸ್ ಹಾಗೂ 25 ಫೋರ್​ಗಳು ಒಳಗೊಂಡಿದ್ದವು. ಇದರೊಂದಿಗೆ ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಬೌಂಡರಿಗಳನ್ನು ಬಾರಿಸಿದ ವಿಶ್ವ ದಾಖಲೆ ಭಾರತ ತಂಡದ ಪಾಲಾಯಿತು.

3 / 6
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದು ಜೆಕ್ ರಿಪಬ್ಲಿಕ್ ತಂಡ. 2019 ರಲ್ಲಿ ಟರ್ಕಿ ವಿರುದ್ಧದ ಪಂದ್ಯದಲ್ಲಿ ಜೆಕ್ ರಿಪಬ್ಲಿಕ್ ತಂಡವು 43 ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿ ಈ ವಿಶ್ವ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದು ಜೆಕ್ ರಿಪಬ್ಲಿಕ್ ತಂಡ. 2019 ರಲ್ಲಿ ಟರ್ಕಿ ವಿರುದ್ಧದ ಪಂದ್ಯದಲ್ಲಿ ಜೆಕ್ ರಿಪಬ್ಲಿಕ್ ತಂಡವು 43 ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿ ಈ ವಿಶ್ವ ದಾಖಲೆ ಬರೆದಿದ್ದರು.

4 / 6
ಇದೀಗ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 5 ವರ್ಷಗಳ ಹಳೆಯ ದಾಖಲೆಯನ್ನು ಟೀಮ್ ಇಂಡಿಯಾ ಅಳಿಸಿ ಹಾಕಿದೆ. ಅಲ್ಲದೆ 22 ಸಿಕ್ಸ್ ಹಾಗೂ 25 ಫೋರ್​ಗಳೊಂದಿಗೆ ಒಟ್ಟು 47 ಬೌಂಡರಿ ಬಾರಿಸಿ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 5 ವರ್ಷಗಳ ಹಳೆಯ ದಾಖಲೆಯನ್ನು ಟೀಮ್ ಇಂಡಿಯಾ ಅಳಿಸಿ ಹಾಕಿದೆ. ಅಲ್ಲದೆ 22 ಸಿಕ್ಸ್ ಹಾಗೂ 25 ಫೋರ್​ಗಳೊಂದಿಗೆ ಒಟ್ಟು 47 ಬೌಂಡರಿ ಬಾರಿಸಿ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೂರನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 133 ರನ್​ಗಳಿಂದ ಗೆದ್ದುಕೊಂಡಿದೆ. ಅಲ್ಲದೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೂರನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 133 ರನ್​ಗಳಿಂದ ಗೆದ್ದುಕೊಂಡಿದೆ. ಅಲ್ಲದೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ