AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ದ್ವಿತೀಯ ಏಕದಿನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಗೆದ್ದರೆ ಸರಣಿ ಕೈವಶ

IND vs WI 2nd ODI: ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್​ಗಳ ರೋಚಕ ಜಯ ಸಾಧಿಸಿತ್ತು.

TV9 Web
| Updated By: Vinay Bhat|

Updated on:Jul 24, 2022 | 11:31 AM

Share
ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್ ​ಗಳ ರೋಚಕ ಜಯ ಸಾಧಿಸಿತ್ತು.

ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್ ​ಗಳ ರೋಚಕ ಜಯ ಸಾಧಿಸಿತ್ತು.

1 / 6
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಈಗಾಗಲೇ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ವೆಸ್ಟ್​ ಇಂಡೀಸ್​ ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಉಳಿದ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ದ್ವಿತೀಯ ಏಕದಿನ (2nd ODI) ಸಾಕಷ್ಟು ಕುತೂಹಲ ಕೆರಳಿಸಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಈಗಾಗಲೇ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ವೆಸ್ಟ್​ ಇಂಡೀಸ್​ ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಉಳಿದ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ದ್ವಿತೀಯ ಏಕದಿನ (2nd ODI) ಸಾಕಷ್ಟು ಕುತೂಹಲ ಕೆರಳಿಸಿದೆ.

2 / 6
ಮೊದಲ ಪಂದ್ಯದಲ್ಲಿ ಭಾರತ ತಂಡದ ಸ್ಕೋರ್ 300ರ ಗಡಿ ದಾಟಿತ್ತು. ಇಂದುಕೂಡ ಇದೇ ಪ್ರದರ್ಶನ ನೀಡಬೇಕಿದೆ. ನಾಯಕ ಶಿಖರ್ ಧವನ್ ಭರ್ಜರಿ ಫಾರ್ಮ್​ನಲ್ಲಿದ್ದರೆ ಶುಭ್ಮನ್ ಗಿಲ್ ಕೂಡ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕಕ್ಕೆ ಫಿಟ್ ಆಗಿದ್ದಾರೆ.

ಮೊದಲ ಪಂದ್ಯದಲ್ಲಿ ಭಾರತ ತಂಡದ ಸ್ಕೋರ್ 300ರ ಗಡಿ ದಾಟಿತ್ತು. ಇಂದುಕೂಡ ಇದೇ ಪ್ರದರ್ಶನ ನೀಡಬೇಕಿದೆ. ನಾಯಕ ಶಿಖರ್ ಧವನ್ ಭರ್ಜರಿ ಫಾರ್ಮ್​ನಲ್ಲಿದ್ದರೆ ಶುಭ್ಮನ್ ಗಿಲ್ ಕೂಡ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕಕ್ಕೆ ಫಿಟ್ ಆಗಿದ್ದಾರೆ.

3 / 6
ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿರಲಿಲ್ಲ. ಸೂರ್ಯ 13 ಹಾಗೂ ಸಂಜು 12 ರನ್​ಗೆ ಬ್ಯಾಟ್ ಕೆಳಗಿಟ್ಟಿದ್ದರು. ಹೀಗಾಗಿ ಇವರು ಮಿಂಚಬೇಕಿದೆ.

ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿರಲಿಲ್ಲ. ಸೂರ್ಯ 13 ಹಾಗೂ ಸಂಜು 12 ರನ್​ಗೆ ಬ್ಯಾಟ್ ಕೆಳಗಿಟ್ಟಿದ್ದರು. ಹೀಗಾಗಿ ಇವರು ಮಿಂಚಬೇಕಿದೆ.

4 / 6
ಭಾರತದ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಮೊಹಮ್ಮದ್ ಸಿರಾಜ್ ಹಾಗೂ ಯುಜ್ವೇಂದ್ರ ಚಹಲ್ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆದರೆ, ಪ್ರಸಿದ್ಧ್ ಕೃಷ್ಣ ಕಳೆದ ಕೆಲವು ಪಂದ್ಯಗಳಿಂದ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಇಂದು ಪ್ರಸಿದ್ಧ್ ಬದಲಿಗೆ ಅರ್ಶ್​​ದೀಪ್ ಸಿಂಗ್ ಕಣಕ್ಕಿಳಿಯುವ ಸಂಭವವಿದೆ.

ಭಾರತದ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಮೊಹಮ್ಮದ್ ಸಿರಾಜ್ ಹಾಗೂ ಯುಜ್ವೇಂದ್ರ ಚಹಲ್ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆದರೆ, ಪ್ರಸಿದ್ಧ್ ಕೃಷ್ಣ ಕಳೆದ ಕೆಲವು ಪಂದ್ಯಗಳಿಂದ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಇಂದು ಪ್ರಸಿದ್ಧ್ ಬದಲಿಗೆ ಅರ್ಶ್​​ದೀಪ್ ಸಿಂಗ್ ಕಣಕ್ಕಿಳಿಯುವ ಸಂಭವವಿದೆ.

5 / 6
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್​ ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ ಚಾನೆಲ್​ ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್​ ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ ಚಾನೆಲ್​ ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

6 / 6

Published On - 11:31 am, Sun, 24 July 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ