AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

Deepak Chahar Wedding: ಬುಧವಾರ ರಾತ್ರಿ ಒಂಬತ್ತು ಗಂಟೆಗೆ ಮದುವೆ ಸಮಾರಂಭ ಆರಂಭವಾಗಲಿದೆ. ದೀಪಕ್ ಚಹಾರ್ ಮತ್ತು ಜಯಾ ಅವರ ಕುಟುಂಬ ಸದಸ್ಯರು ಮತ್ತು ಇತರ ಆಪ್ತರು ಕೂಡ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on:Jun 01, 2022 | 10:06 PM

Share
ಭಾರತದ ಸ್ಟಾರ್ ಬೌಲರ್ ದೀಪಕ್ ಚಹಾರ್ ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆಯ ಆಚರಣೆಗಳಲ್ಲಿ ನಿರತರಾಗಿದ್ದಾರೆ. ಗಾಯದ ಸಮಸ್ಯೆಯಿಂದ ಕ್ರಿಕೆಟ್ ಮೈದಾನದಿಂದ ದೂರ ಉಳಿದಿರುವ ಚಹಾರ್ ಮೈದಾನದ ಹೊರಗೆ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಚಹಾರ್ ಇಂದು ಅಂದರೆ ಬುಧವಾರ ಮದುವೆಯಾಗಲಿದ್ದಾರೆ.

1 / 5
ಚಹಾರ್ ತನ್ನ ಗೆಳತಿ ಜಯಾ ಭಾರದ್ವಾಜ್ ಅವರನ್ನು ಮದುವೆಯಾಗಲಿದ್ದಾರೆ. ಮಂಗಳವಾರ ರಾತ್ರಿ ಆಗ್ರಾದ ಪಂಚತಾರಾ ಹೊಟೇಲ್‌ನಲ್ಲಿ ಡೊಳ್ಳು ಕುಣಿತದ ನಡುವೆ ಮೆಹಂದಿ ಕಾರ್ಯಕ್ರಮ ನಡೆಯಿತು. ಈವೆಂಟ್‌ನ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ದೀಪಕ್ ಡ್ಯಾನ್ಸ್ ಮಾಡಿದ್ದಾರೆ.

2 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ಬುಧವಾರ ಬೆಳಗ್ಗೆ ಇಬ್ಬರಿಗೂ ಹಳದಿ ಕಾರ್ಯಕ್ರಮ ನಡೆದಿತ್ತು. ಚಹಾರ್ ಬಿಳಿ ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದರು. ಚಹಾರ್ ಅವರ ಸಹೋದರ ಮತ್ತು ಪಂಜಾಬ್ ಕಿಂಗ್ಸ್ ಸ್ಟಾರ್ ಕ್ರಿಕೆಟಿಗ ರಾಹುಲ್ ಚಹಾರ್ ಸಮಾರಂಭದ ವೀಡಿಯೊಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ದೀಪಕ್ ಸ್ನೇಹಿತರು, ರಾಹುಲ್ ಜೊತೆ ಸೇರಿ ದೀಪಕ್​ಗೆ ಅರಿಶಿನ ಹಚ್ಚಿ ಡ್ಯಾನ್ಸ್ ಮಾಡಿದ್ದು ಕಂಡುಬಂತು.

3 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ಬುಧವಾರ ರಾತ್ರಿ ಒಂಬತ್ತು ಗಂಟೆಗೆ ಮದುವೆ ಸಮಾರಂಭ ಆರಂಭವಾಗಲಿದೆ. ದೀಪಕ್ ಚಹಾರ್ ಮತ್ತು ಜಯಾ ಅವರ ಕುಟುಂಬ ಸದಸ್ಯರು ಮತ್ತು ಇತರ ಆಪ್ತರು ಕೂಡ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ ತಮ್ಮ ಕುಟುಂಬದೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

4 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ದೀಪಕ್ ಬಹಳ ದಿನಗಳಿಂದ ಕ್ರಿಕೆಟ್ ಕ್ಷೇತ್ರದಿಂದ ದೂರ ಉಳಿದಿದ್ದರು. ಗಾಯದ ಕಾರಣ, ಅವರು IPL 2022 ರ ಭಾಗವಾಗಲು ಸಹ ಸಾಧ್ಯವಾಗಲಿಲ್ಲ. ಅವರು ಇನ್ನೂ ತಮ್ಮ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ, ಆದ್ದರಿಂದ ಅವರು ಯಾವಾಗ ಮರಳುತ್ತಾರೆ ಎಂಬುದು ಖಚಿತವಾಗಿಲ್ಲ.

5 / 5

Published On - 9:58 pm, Wed, 1 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ