AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

Deepak Chahar Wedding: ಬುಧವಾರ ರಾತ್ರಿ ಒಂಬತ್ತು ಗಂಟೆಗೆ ಮದುವೆ ಸಮಾರಂಭ ಆರಂಭವಾಗಲಿದೆ. ದೀಪಕ್ ಚಹಾರ್ ಮತ್ತು ಜಯಾ ಅವರ ಕುಟುಂಬ ಸದಸ್ಯರು ಮತ್ತು ಇತರ ಆಪ್ತರು ಕೂಡ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on:Jun 01, 2022 | 10:06 PM

Share
ಭಾರತದ ಸ್ಟಾರ್ ಬೌಲರ್ ದೀಪಕ್ ಚಹಾರ್ ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆಯ ಆಚರಣೆಗಳಲ್ಲಿ ನಿರತರಾಗಿದ್ದಾರೆ. ಗಾಯದ ಸಮಸ್ಯೆಯಿಂದ ಕ್ರಿಕೆಟ್ ಮೈದಾನದಿಂದ ದೂರ ಉಳಿದಿರುವ ಚಹಾರ್ ಮೈದಾನದ ಹೊರಗೆ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಚಹಾರ್ ಇಂದು ಅಂದರೆ ಬುಧವಾರ ಮದುವೆಯಾಗಲಿದ್ದಾರೆ.

1 / 5
ಚಹಾರ್ ತನ್ನ ಗೆಳತಿ ಜಯಾ ಭಾರದ್ವಾಜ್ ಅವರನ್ನು ಮದುವೆಯಾಗಲಿದ್ದಾರೆ. ಮಂಗಳವಾರ ರಾತ್ರಿ ಆಗ್ರಾದ ಪಂಚತಾರಾ ಹೊಟೇಲ್‌ನಲ್ಲಿ ಡೊಳ್ಳು ಕುಣಿತದ ನಡುವೆ ಮೆಹಂದಿ ಕಾರ್ಯಕ್ರಮ ನಡೆಯಿತು. ಈವೆಂಟ್‌ನ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ದೀಪಕ್ ಡ್ಯಾನ್ಸ್ ಮಾಡಿದ್ದಾರೆ.

2 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ಬುಧವಾರ ಬೆಳಗ್ಗೆ ಇಬ್ಬರಿಗೂ ಹಳದಿ ಕಾರ್ಯಕ್ರಮ ನಡೆದಿತ್ತು. ಚಹಾರ್ ಬಿಳಿ ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದರು. ಚಹಾರ್ ಅವರ ಸಹೋದರ ಮತ್ತು ಪಂಜಾಬ್ ಕಿಂಗ್ಸ್ ಸ್ಟಾರ್ ಕ್ರಿಕೆಟಿಗ ರಾಹುಲ್ ಚಹಾರ್ ಸಮಾರಂಭದ ವೀಡಿಯೊಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ದೀಪಕ್ ಸ್ನೇಹಿತರು, ರಾಹುಲ್ ಜೊತೆ ಸೇರಿ ದೀಪಕ್​ಗೆ ಅರಿಶಿನ ಹಚ್ಚಿ ಡ್ಯಾನ್ಸ್ ಮಾಡಿದ್ದು ಕಂಡುಬಂತು.

3 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ಬುಧವಾರ ರಾತ್ರಿ ಒಂಬತ್ತು ಗಂಟೆಗೆ ಮದುವೆ ಸಮಾರಂಭ ಆರಂಭವಾಗಲಿದೆ. ದೀಪಕ್ ಚಹಾರ್ ಮತ್ತು ಜಯಾ ಅವರ ಕುಟುಂಬ ಸದಸ್ಯರು ಮತ್ತು ಇತರ ಆಪ್ತರು ಕೂಡ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ ತಮ್ಮ ಕುಟುಂಬದೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

4 / 5
Deepak Chahar Wedding: ಹರಿಶಿಣ ಕಾರ್ಯಕ್ರಮದಲ್ಲಿ ಮಿಂಚಿದ ದೀಪಕ್- ಜಯಾ; ಫೋಟೋ ನೋಡಿ

ದೀಪಕ್ ಬಹಳ ದಿನಗಳಿಂದ ಕ್ರಿಕೆಟ್ ಕ್ಷೇತ್ರದಿಂದ ದೂರ ಉಳಿದಿದ್ದರು. ಗಾಯದ ಕಾರಣ, ಅವರು IPL 2022 ರ ಭಾಗವಾಗಲು ಸಹ ಸಾಧ್ಯವಾಗಲಿಲ್ಲ. ಅವರು ಇನ್ನೂ ತಮ್ಮ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ, ಆದ್ದರಿಂದ ಅವರು ಯಾವಾಗ ಮರಳುತ್ತಾರೆ ಎಂಬುದು ಖಚಿತವಾಗಿಲ್ಲ.

5 / 5

Published On - 9:58 pm, Wed, 1 June 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!