AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ಗೂ ಮುನ್ನ 12 ಏಕದಿನ ಪಂದ್ಯಗಳನ್ನಾಡಲಿದೆ ಭಾರತ; ಯಾವ ತಂಡದೆದುರು ಎಷ್ಟು ಪಂದ್ಯ?

Team India: ಈ 12 ಪಂದ್ಯಗಳಲ್ಲಿ ಭಾರತ ತನ್ನ ಎಲ್ಲಾ ನ್ಯೂನತೆಗಳನ್ನು ನಿವಾರಿಸಿಕೊಳ್ಳಬೇಕು. ಇದರಲ್ಲೇ ಭಾರತ ಬಲಿಷ್ಠ ಆರಂಭಿಕ ಜೋಡಿಯಾಗಿರಲಿ ಅಥವಾ ಬಲಿಷ್ಠ ಮಧ್ಯಮ ಕ್ರಮಾಂಕವನ್ನು ಸಿದ್ಧಪಡಿಸಬೇಕು.

ಪೃಥ್ವಿಶಂಕರ
|

Updated on: Jun 19, 2023 | 8:19 AM

ಭಾರತ ಕ್ರಿಕೆಟ್ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಗೆದ್ದು ಐಸಿಸಿ ಟ್ರೋಫಿ ಗೆಲ್ಲುವ ಬರವನ್ನು ಕೊನೆಗೊಳಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. 10 ವರ್ಷಗಳಿಂದ ಐಸಿಸಿ ಟ್ರೋಫಿ ಬರವನ್ನು ಎದುರಿಸುತ್ತಿರುವ ಭಾರತಕ್ಕೆ ಈ ವರ್ಷವೇ ಅದರ ಬರವನ್ನು ನೀಗಿಸುವ ಅವಕಾಶ ಸಿಕ್ಕಿದೆ.

ಭಾರತ ಕ್ರಿಕೆಟ್ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಗೆದ್ದು ಐಸಿಸಿ ಟ್ರೋಫಿ ಗೆಲ್ಲುವ ಬರವನ್ನು ಕೊನೆಗೊಳಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. 10 ವರ್ಷಗಳಿಂದ ಐಸಿಸಿ ಟ್ರೋಫಿ ಬರವನ್ನು ಎದುರಿಸುತ್ತಿರುವ ಭಾರತಕ್ಕೆ ಈ ವರ್ಷವೇ ಅದರ ಬರವನ್ನು ನೀಗಿಸುವ ಅವಕಾಶ ಸಿಕ್ಕಿದೆ.

1 / 9
ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಭಾರತದಲ್ಲಿಯೇ ನಡೆಯಲಿದೆ. ಹೀಗಾಗಿ ತವರಿನ ಲಾಭ ಪಡೆಯಲ್ಲಿರುವ ಭಾರತಕ್ಕೆ ಐಸಿಸಿ ಟ್ರೋಫಿಯ ಬರವನ್ನು ನೀಗಿಸುವ ಅವಕಾಶವಿದೆ. ಆದರೆ ಅದಕ್ಕೂ ಮೊದಲು ಈ ಏಕದಿನ ಸರಣಿಗಾಗಿ ಪೂರ್ವ ತಯಾರಿ ನಡೆಸಿರುವ ಭಾರತ, ಈ 4 ತಿಂಗಳಲ್ಲಿ ಬರೋಬ್ಬರಿ 12 ಏಕದಿನ ಪಂದ್ಯಗಳನ್ನಾಡಲಿದೆ.

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಭಾರತದಲ್ಲಿಯೇ ನಡೆಯಲಿದೆ. ಹೀಗಾಗಿ ತವರಿನ ಲಾಭ ಪಡೆಯಲ್ಲಿರುವ ಭಾರತಕ್ಕೆ ಐಸಿಸಿ ಟ್ರೋಫಿಯ ಬರವನ್ನು ನೀಗಿಸುವ ಅವಕಾಶವಿದೆ. ಆದರೆ ಅದಕ್ಕೂ ಮೊದಲು ಈ ಏಕದಿನ ಸರಣಿಗಾಗಿ ಪೂರ್ವ ತಯಾರಿ ನಡೆಸಿರುವ ಭಾರತ, ಈ 4 ತಿಂಗಳಲ್ಲಿ ಬರೋಬ್ಬರಿ 12 ಏಕದಿನ ಪಂದ್ಯಗಳನ್ನಾಡಲಿದೆ.

2 / 9
ಸದ್ಯಕ್ಕೆ ನಿಗದಿಯಾಗಿರುವಂತೆ ಭಾರತ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಮಾಡಬೇಕಿದೆ. ಈ ಪ್ರವಾಸದಲ್ಲಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಇದರ ನಂತರ ಭಾರತವು ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ಏಷ್ಯಾಕಪ್ ಆಡಲು ಹೋಗಬೇಕಾಗಿದೆ. ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಈ ಬಾರಿಯ ಏಷ್ಯಾಕಪ್ ನಲ್ಲಿ ಭಾರತ ಫೈನಲ್ ತಲುಪಿದರೆ ಇಲ್ಲಿ ಆರು ಪಂದ್ಯಗಳನ್ನು ಆಡಬೇಕಾಗುತ್ತದೆ.

ಸದ್ಯಕ್ಕೆ ನಿಗದಿಯಾಗಿರುವಂತೆ ಭಾರತ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಮಾಡಬೇಕಿದೆ. ಈ ಪ್ರವಾಸದಲ್ಲಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಇದರ ನಂತರ ಭಾರತವು ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ಏಷ್ಯಾಕಪ್ ಆಡಲು ಹೋಗಬೇಕಾಗಿದೆ. ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಈ ಬಾರಿಯ ಏಷ್ಯಾಕಪ್ ನಲ್ಲಿ ಭಾರತ ಫೈನಲ್ ತಲುಪಿದರೆ ಇಲ್ಲಿ ಆರು ಪಂದ್ಯಗಳನ್ನು ಆಡಬೇಕಾಗುತ್ತದೆ.

3 / 9
ಗ್ರೂಪ್ ಹಂತದಲ್ಲಿ ಭಾರತ ಎರಡು ಪಂದ್ಯಗಳನ್ನು ಆಡಬೇಕಾಗುತ್ತದೆ. ಇದಾದ ನಂತರ ಭಾರತ ಸೂಪರ್-4 ಗೆ ಎಂಟ್ರಿಕೊಟ್ಟರೆ, ಅಲ್ಲಿ ಮೂರು ತಂಡಗಳೊಂದಿಗೆ ಮೂರು ಪಂದ್ಯಗಳನ್ನು ಆಡುತ್ತದೆ. ನಂತರ ಫೈನಲ್‌ಗೆ ಬಂದರೆ ಅಲ್ಲಿ ಒಂದು ಪಂದ್ಯವನ್ನಾಡಲಿದೆ. ಅಂದರೆ ಏಷ್ಯಾಕಪ್​ನಲ್ಲಿ ಭಾರತ ಒಟ್ಟು ಆರು ಪಂದ್ಯಗಳನ್ನಾಡುವ ಅವಕಾಶ ಹೊಂದಿದೆ.

ಗ್ರೂಪ್ ಹಂತದಲ್ಲಿ ಭಾರತ ಎರಡು ಪಂದ್ಯಗಳನ್ನು ಆಡಬೇಕಾಗುತ್ತದೆ. ಇದಾದ ನಂತರ ಭಾರತ ಸೂಪರ್-4 ಗೆ ಎಂಟ್ರಿಕೊಟ್ಟರೆ, ಅಲ್ಲಿ ಮೂರು ತಂಡಗಳೊಂದಿಗೆ ಮೂರು ಪಂದ್ಯಗಳನ್ನು ಆಡುತ್ತದೆ. ನಂತರ ಫೈನಲ್‌ಗೆ ಬಂದರೆ ಅಲ್ಲಿ ಒಂದು ಪಂದ್ಯವನ್ನಾಡಲಿದೆ. ಅಂದರೆ ಏಷ್ಯಾಕಪ್​ನಲ್ಲಿ ಭಾರತ ಒಟ್ಟು ಆರು ಪಂದ್ಯಗಳನ್ನಾಡುವ ಅವಕಾಶ ಹೊಂದಿದೆ.

4 / 9
ಇದರ ನಂತರ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆತಿಥ್ಯ ವಹಿಸಬೇಕಾಗಿದೆ. ಈ ಪ್ರವಾಸದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಬೇಕಿದೆ. ಇದರ ನಂತರ ಭಾರತ ವಿಶ್ವಕಪ್​ ಆಡಲು ಸಿದ್ಧವಾಗಬೇಕಿದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ಆಸ್ಟ್ರೇಲಿಯಾ ಸರಣಿಯವರೆಗೆ ಒಟ್ಟು 12 ಏಕದಿನ ಪಂದ್ಯಗಳನ್ನು ಆಡುವ ಅವಕಾಶ ಭಾರತಕ್ಕೆ ಸಿಗಲಿದೆ.

ಇದರ ನಂತರ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆತಿಥ್ಯ ವಹಿಸಬೇಕಾಗಿದೆ. ಈ ಪ್ರವಾಸದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಬೇಕಿದೆ. ಇದರ ನಂತರ ಭಾರತ ವಿಶ್ವಕಪ್​ ಆಡಲು ಸಿದ್ಧವಾಗಬೇಕಿದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ಆಸ್ಟ್ರೇಲಿಯಾ ಸರಣಿಯವರೆಗೆ ಒಟ್ಟು 12 ಏಕದಿನ ಪಂದ್ಯಗಳನ್ನು ಆಡುವ ಅವಕಾಶ ಭಾರತಕ್ಕೆ ಸಿಗಲಿದೆ.

5 / 9
ಈ 12 ಪಂದ್ಯಗಳಲ್ಲಿ ಭಾರತ ತನ್ನ ಎಲ್ಲಾ ನ್ಯೂನತೆಗಳನ್ನು ನಿವಾರಿಸಿಕೊಳ್ಳಬೇಕು. ಇದರಲ್ಲೇ ಭಾರತ ಬಲಿಷ್ಠ ಆರಂಭಿಕ ಜೋಡಿಯಾಗಿರಲಿ ಅಥವಾ ಬಲಿಷ್ಠ ಮಧ್ಯಮ ಕ್ರಮಾಂಕವನ್ನು ಸಿದ್ಧಪಡಿಸಬೇಕು. ತಂಡದ ಮಧ್ಯಮ ಕ್ರಮಾಂಕವನ್ನು ಸಿದ್ಧಪಡಿಸುವುದು ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮುಂದಿರುವ ಸವಾಲು.

ಈ 12 ಪಂದ್ಯಗಳಲ್ಲಿ ಭಾರತ ತನ್ನ ಎಲ್ಲಾ ನ್ಯೂನತೆಗಳನ್ನು ನಿವಾರಿಸಿಕೊಳ್ಳಬೇಕು. ಇದರಲ್ಲೇ ಭಾರತ ಬಲಿಷ್ಠ ಆರಂಭಿಕ ಜೋಡಿಯಾಗಿರಲಿ ಅಥವಾ ಬಲಿಷ್ಠ ಮಧ್ಯಮ ಕ್ರಮಾಂಕವನ್ನು ಸಿದ್ಧಪಡಿಸಬೇಕು. ತಂಡದ ಮಧ್ಯಮ ಕ್ರಮಾಂಕವನ್ನು ಸಿದ್ಧಪಡಿಸುವುದು ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮುಂದಿರುವ ಸವಾಲು.

6 / 9
ಶ್ರೇಯಸ್ ಅಯ್ಯರ್ ಈ ಮಧ್ಯಮ ಕ್ರಮಾಂಕವನ್ನು ಕೆಲಕಾಲ ಉತ್ತಮವಾಗಿ ನಿಭಾಯಿಸಿದ್ದಾರೆ. ಆದರೆ ಸದ್ಯಕ್ಕೆ ಅವರು ಗಾಯಗೊಂಡಿದ್ದಾರೆ. ಏಷ್ಯಾಕಪ್ ವೇಳೆಗೆ ಅವರು ಫಿಟ್ ಆಗುತ್ತಾರೆ ಎಂದು ನಿರೀಕ್ಷಿಸಲಾಗಿದ್ದರೂ ಇವರ ಹೊರತಾಗಿ ಮಧ್ಯಮ ಕ್ರಮಾಂಕವನ್ನು ಯಾರು ನಿಭಾಯಿಸುತ್ತಾರೆ ಎಂಬುದರ ಬಗ್ಗೆಯೂ ತಂಡ ಗಮನ ಹರಿಸಬೇಕಿದೆ.

ಶ್ರೇಯಸ್ ಅಯ್ಯರ್ ಈ ಮಧ್ಯಮ ಕ್ರಮಾಂಕವನ್ನು ಕೆಲಕಾಲ ಉತ್ತಮವಾಗಿ ನಿಭಾಯಿಸಿದ್ದಾರೆ. ಆದರೆ ಸದ್ಯಕ್ಕೆ ಅವರು ಗಾಯಗೊಂಡಿದ್ದಾರೆ. ಏಷ್ಯಾಕಪ್ ವೇಳೆಗೆ ಅವರು ಫಿಟ್ ಆಗುತ್ತಾರೆ ಎಂದು ನಿರೀಕ್ಷಿಸಲಾಗಿದ್ದರೂ ಇವರ ಹೊರತಾಗಿ ಮಧ್ಯಮ ಕ್ರಮಾಂಕವನ್ನು ಯಾರು ನಿಭಾಯಿಸುತ್ತಾರೆ ಎಂಬುದರ ಬಗ್ಗೆಯೂ ತಂಡ ಗಮನ ಹರಿಸಬೇಕಿದೆ.

7 / 9
ಏಕೆಂದರೆ ರಿಷಭ್ ಪಂತ್ ಕೂಡ ಗಾಯಗೊಂಡಿದ್ದು ಏಕದಿನ ವಿಶ್ವಕಪ್​ನಲ್ಲಿ ಆಡುವುದು ಬಹುತೇಕ ಅನುಮಾನವಾಗಿದೆ . ಇಂತಹ ಪರಿಸ್ಥಿತಿಯಲ್ಲಿ ಭಾರತವೂ ಅವರಿಗೆ ಪರ್ಯಾಯವನ್ನು ಹುಡುಕಬೇಕಾಗಿದೆ. ಇಲ್ಲಿಯವರೆಗೆ ಭಾರತವು ಕೆಎಲ್ ರಾಹುಲ್ ಅವರನ್ನು ಏಕದಿನದಲ್ಲಿ ವಿಕೆಟ್ ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಆಡಿಸುತ್ತಿತ್ತು.

ಏಕೆಂದರೆ ರಿಷಭ್ ಪಂತ್ ಕೂಡ ಗಾಯಗೊಂಡಿದ್ದು ಏಕದಿನ ವಿಶ್ವಕಪ್​ನಲ್ಲಿ ಆಡುವುದು ಬಹುತೇಕ ಅನುಮಾನವಾಗಿದೆ . ಇಂತಹ ಪರಿಸ್ಥಿತಿಯಲ್ಲಿ ಭಾರತವೂ ಅವರಿಗೆ ಪರ್ಯಾಯವನ್ನು ಹುಡುಕಬೇಕಾಗಿದೆ. ಇಲ್ಲಿಯವರೆಗೆ ಭಾರತವು ಕೆಎಲ್ ರಾಹುಲ್ ಅವರನ್ನು ಏಕದಿನದಲ್ಲಿ ವಿಕೆಟ್ ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಆಡಿಸುತ್ತಿತ್ತು.

8 / 9
ಆದರೆ ರಾಹುಲ್ ಅವರ ಫಾರ್ಮ್ ಉತ್ತಮವಾಗಿಲ್ಲ. ಅಲ್ಲದೆ ಅವರು ಕೂಡ ಗಾಯಗೊಂಡಿದ್ದಾರೆ. ಏಷ್ಯಾಕಪ್ ವೇಳೆಗೆ ಅವರು ಫಿಟ್ ಆಗುವ ನಿರೀಕ್ಷೆಯಿದೆಯಾದರೂ, ತಂಡಕ್ಕೆ ಮರಳಿದ ನಂತರ, ರಾಹುಲ್ ಲಯದಲ್ಲಿ ಕಾಣಿಸಿಕೊಳ್ಳದಿದ್ದರೆ, ಭಾರತವು ಅವರ ಬದಲಿ ಆಟಗಾರನನ್ನು ಸಿದ್ಧಪಡಿಸಬೇಕಾಗುತ್ತದೆ. ರೋಹಿತ್ ಮತ್ತು ರಾಹುಲ್ ಈ 12 ಪಂದ್ಯಗಳಲ್ಲಿ ಸರಿಯಾದ ತಂಡ ಕಟ್ಟಲು ಸಾಕಷ್ಟು ಶ್ರಮಿಸಬೇಕಿದೆ.

ಆದರೆ ರಾಹುಲ್ ಅವರ ಫಾರ್ಮ್ ಉತ್ತಮವಾಗಿಲ್ಲ. ಅಲ್ಲದೆ ಅವರು ಕೂಡ ಗಾಯಗೊಂಡಿದ್ದಾರೆ. ಏಷ್ಯಾಕಪ್ ವೇಳೆಗೆ ಅವರು ಫಿಟ್ ಆಗುವ ನಿರೀಕ್ಷೆಯಿದೆಯಾದರೂ, ತಂಡಕ್ಕೆ ಮರಳಿದ ನಂತರ, ರಾಹುಲ್ ಲಯದಲ್ಲಿ ಕಾಣಿಸಿಕೊಳ್ಳದಿದ್ದರೆ, ಭಾರತವು ಅವರ ಬದಲಿ ಆಟಗಾರನನ್ನು ಸಿದ್ಧಪಡಿಸಬೇಕಾಗುತ್ತದೆ. ರೋಹಿತ್ ಮತ್ತು ರಾಹುಲ್ ಈ 12 ಪಂದ್ಯಗಳಲ್ಲಿ ಸರಿಯಾದ ತಂಡ ಕಟ್ಟಲು ಸಾಕಷ್ಟು ಶ್ರಮಿಸಬೇಕಿದೆ.

9 / 9
Follow us
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್