Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ವಿಶ್ವ ದಾಖಲೆಯ ಗೆಲುವಿನ ನಾಗಾಲೋಟ

India vs England, 4th T20I: ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 181 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 19.4 ಓವರ್​ಗಳಲ್ಲಿ 166 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 15 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 01, 2025 | 9:53 AM

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ತವರಿನಲ್ಲಿ ಟೀಮ್ ಇಂಡಿಯಾದ ಸರಣಿ ಗೆಲುವಿನ ನಾಗಾಲೋಟ ಮುಂದುವರೆದಿದೆ. ಅಂದರೆ ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ಟಿ20 ಸರಣಿ ಸೋತಿದ್ದು 2018 ರಲ್ಲಿ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ತವರಿನಲ್ಲಿ ಟೀಮ್ ಇಂಡಿಯಾದ ಸರಣಿ ಗೆಲುವಿನ ನಾಗಾಲೋಟ ಮುಂದುವರೆದಿದೆ. ಅಂದರೆ ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ಟಿ20 ಸರಣಿ ಸೋತಿದ್ದು 2018 ರಲ್ಲಿ.

1 / 5
2018-19 ರಲ್ಲಿ ಭಾರತ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಿಂದ ಟಿ20 ಸರಣಿ ಸೋತಿತ್ತು. ಇದಾದ ಬಳಿಕ ಟೀಮ್ ಇಂಡಿಯಾ ಹಿಂತಿರುಗಿ ನೋಡಿಲ್ಲ. 2019 ರಿಂದ ಗೆಲುವಿನ ನಾಗಾಲೋಟ ಆರಂಭಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಸತತ 17 ಸರಣಿಗಳನ್ನು ಗೆದ್ದುಕೊಂಡಿದೆ.

2018-19 ರಲ್ಲಿ ಭಾರತ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಿಂದ ಟಿ20 ಸರಣಿ ಸೋತಿತ್ತು. ಇದಾದ ಬಳಿಕ ಟೀಮ್ ಇಂಡಿಯಾ ಹಿಂತಿರುಗಿ ನೋಡಿಲ್ಲ. 2019 ರಿಂದ ಗೆಲುವಿನ ನಾಗಾಲೋಟ ಆರಂಭಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಸತತ 17 ಸರಣಿಗಳನ್ನು ಗೆದ್ದುಕೊಂಡಿದೆ.

2 / 5
ಇದು ಕೂಡ ವಿಶ್ವ ದಾಖಲೆಯಾಗಿದೆ. ಅಂದರೆ ತವರಿನಲ್ಲಿ ಸತತವಾಗಿ ಅತ್ಯಧಿಕ ಟಿ20 ಸರಣಿಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್​ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನದಲ್ಲಿದೆ. ವಿಶೇಷ ಎಂದರೆ ಭಾರತ ತಂಡವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ ತವರಿನಲ್ಲಿ ಸತತ 10 ಸರಣಿಗಳನ್ನು ಗೆದ್ದಿಲ್ಲ.

ಇದು ಕೂಡ ವಿಶ್ವ ದಾಖಲೆಯಾಗಿದೆ. ಅಂದರೆ ತವರಿನಲ್ಲಿ ಸತತವಾಗಿ ಅತ್ಯಧಿಕ ಟಿ20 ಸರಣಿಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್​ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನದಲ್ಲಿದೆ. ವಿಶೇಷ ಎಂದರೆ ಭಾರತ ತಂಡವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ ತವರಿನಲ್ಲಿ ಸತತ 10 ಸರಣಿಗಳನ್ನು ಗೆದ್ದಿಲ್ಲ.

3 / 5
2019 ರಿಂದ ಈವರೆಗೆ ಟೀಮ್ ಇಂಡಿಯಾ ತವರಿನಲ್ಲಿ 17 ಟಿ20 ಸರಣಿಗಳನ್ನು ಗೆದ್ದುಕೊಂಡಿದೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡ. 2006 ರಿಂದ 2010 ರ ನಡುವೆ ಆಸೀಸ್ ಪಡೆ ತವರಿನಲ್ಲಿ ಸತತವಾಗಿ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು. ಇನ್ನು ಸೌತ್ ಆಫ್ರಿಕಾ 2007 ರಿಂದ 2010ವರೆಗೆ ಸತತ 7 ಸರಣಿಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

2019 ರಿಂದ ಈವರೆಗೆ ಟೀಮ್ ಇಂಡಿಯಾ ತವರಿನಲ್ಲಿ 17 ಟಿ20 ಸರಣಿಗಳನ್ನು ಗೆದ್ದುಕೊಂಡಿದೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡ. 2006 ರಿಂದ 2010 ರ ನಡುವೆ ಆಸೀಸ್ ಪಡೆ ತವರಿನಲ್ಲಿ ಸತತವಾಗಿ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು. ಇನ್ನು ಸೌತ್ ಆಫ್ರಿಕಾ 2007 ರಿಂದ 2010ವರೆಗೆ ಸತತ 7 ಸರಣಿಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

4 / 5
ಆದರೆ ವರ್ಷಗಳ ಹಿಂದೆಯೇ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ದಾಖಲೆಗಳನ್ನು ಮುರಿದಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ 17 ಸರಣಿ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಸತತವಾಗಿ 15+ ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.

ಆದರೆ ವರ್ಷಗಳ ಹಿಂದೆಯೇ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ದಾಖಲೆಗಳನ್ನು ಮುರಿದಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ 17 ಸರಣಿ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಸತತವಾಗಿ 15+ ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.

5 / 5
Follow us
ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ
ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ
ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ಜೈಲಿನಿಂದ ಹೊರಬರ್ತಾರೆ: ಸೂರಜ್ ರೇವಣ್ಣ
ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ಜೈಲಿನಿಂದ ಹೊರಬರ್ತಾರೆ: ಸೂರಜ್ ರೇವಣ್ಣ
ದಿಗಂತ್ ಫೋನ್ ಬಂದಾಗ ಸುಜಾತಾಗೆ ಏನು ಮಾತಾಡುವುದೆಂದು ಗೊತ್ತಾಗಿಲ್ಲ!
ದಿಗಂತ್ ಫೋನ್ ಬಂದಾಗ ಸುಜಾತಾಗೆ ಏನು ಮಾತಾಡುವುದೆಂದು ಗೊತ್ತಾಗಿಲ್ಲ!
ಸಿಎಂ ಸಿದ್ದರಾಮಯ್ಯ 2016ರಲ್ಲೇ ನಿರ್ಧಾರ ಪ್ರಕಟಿಸಿದ್ದರು: ಗೋವಿಂದು
ಸಿಎಂ ಸಿದ್ದರಾಮಯ್ಯ 2016ರಲ್ಲೇ ನಿರ್ಧಾರ ಪ್ರಕಟಿಸಿದ್ದರು: ಗೋವಿಂದು
ಬಜೆಟ್ ರೂಪಿಸುವಾಗ ಉತ್ತರ-ದಕ್ಷಿಣ ತಾರತಮ್ಮ ಬೇಡ: ಮಲ್ಲಿಕಾರ್ಜುನ ಖರ್ಗೆ
ಬಜೆಟ್ ರೂಪಿಸುವಾಗ ಉತ್ತರ-ದಕ್ಷಿಣ ತಾರತಮ್ಮ ಬೇಡ: ಮಲ್ಲಿಕಾರ್ಜುನ ಖರ್ಗೆ
ಶಾಪಿಂಗ್ ಮಾಲ್ ಉದ್ಘಾಟಿಸಲು ಬಂದಿದ್ದ ಜನಪ್ರಿಯ ನಟಿ ಕೀರ್ತಿ ಸುರೇಶ್
ಶಾಪಿಂಗ್ ಮಾಲ್ ಉದ್ಘಾಟಿಸಲು ಬಂದಿದ್ದ ಜನಪ್ರಿಯ ನಟಿ ಕೀರ್ತಿ ಸುರೇಶ್
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ
ಮುಸಲ್ಮಾನರಿಗೆ ಬಿರಿಯಾನಿ ಉಳಿದವರಿಗೆ ನೆಕ್ಕಲು ಉಪ್ಪಿನಕಾಯಿ: ನಿಖಿಲ್
ಮುಸಲ್ಮಾನರಿಗೆ ಬಿರಿಯಾನಿ ಉಳಿದವರಿಗೆ ನೆಕ್ಕಲು ಉಪ್ಪಿನಕಾಯಿ: ನಿಖಿಲ್
ದೇವೇಗೌಡರಿಗೆ ಸಿದ್ದರಾಮಯ್ಯ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸಿದರೆ? ವಿಶ್ವನಾಥ
ದೇವೇಗೌಡರಿಗೆ ಸಿದ್ದರಾಮಯ್ಯ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸಿದರೆ? ವಿಶ್ವನಾಥ