Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಮಹಿಳೆಯರ ಅಬ್ಬರಕ್ಕೆ ಪುರುಷರ ದಾಖಲೆಯೇ ಉಡೀಸ್

India Women vs Ireland Women: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮಹಿಳಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ಮಹಿಳಾ ತಂಡ 31.4 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 304 ರನ್ ಗಳ ಅಮೋಘ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jan 16, 2025 | 7:48 AM

ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯ ಮಹಿಳಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ರನ್ ರಾಶಿಯನ್ನೇ ಪೇರಿಸುವ ಮೂಲಕ... ಹೌದು, ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಬರೋಬ್ಬರಿ 435 ರನ್ ಕಲೆಹಾಕಿದೆ.

ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯ ಮಹಿಳಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ರನ್ ರಾಶಿಯನ್ನೇ ಪೇರಿಸುವ ಮೂಲಕ... ಹೌದು, ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಬರೋಬ್ಬರಿ 435 ರನ್ ಕಲೆಹಾಕಿದೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಶತಕ ಸಿಡಿಸಿದರು. 80 ಎಸೆತಗಳನ್ನು ಎದರುರಿಸಿದ ಸ್ಮೃತಿ 135 ರನ್ ಬಾರಿಸಿದರೆ, ಪ್ರತೀಕಾ ರಾವಲ್ 129 ಎಸೆತಗಳಲ್ಲಿ 154 ರನ್ ಸಿಡಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ 42 ಎಸೆತಗಳಲ್ಲಿ 59 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಶತಕ ಸಿಡಿಸಿದರು. 80 ಎಸೆತಗಳನ್ನು ಎದರುರಿಸಿದ ಸ್ಮೃತಿ 135 ರನ್ ಬಾರಿಸಿದರೆ, ಪ್ರತೀಕಾ ರಾವಲ್ 129 ಎಸೆತಗಳಲ್ಲಿ 154 ರನ್ ಸಿಡಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ 42 ಎಸೆತಗಳಲ್ಲಿ 59 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು.

2 / 5
ಇದರೊಂದಿಗೆ ಭಾರತೀಯ ಏಕದಿಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಪೇರಿಸಿದ ದಾಖಲೆ ಟೀಮ್ ಇಂಡಿಯಾ ಮಹಿಳಾ ತಂಡದ ಪಾಲಾಯಿತು. ಅಂದರೆ ಈ ಹಿಂದೆ ಭಾರತೀಯ ಪುರುಷರ ತಂಡ ಒನ್ ಡೇ ಕ್ರಿಕೆಟ್‌ನಲ್ಲಿ ಬರೆದಿದ್ದ ಗರಿಷ್ಠ ಸ್ಕೋರ್​ ದಾಖಲೆಯನ್ನು ಮಹಿಳಾ ತಂಡ ಅಳಿಸಿ ಹಾಕಿದೆ.

ಇದರೊಂದಿಗೆ ಭಾರತೀಯ ಏಕದಿಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಪೇರಿಸಿದ ದಾಖಲೆ ಟೀಮ್ ಇಂಡಿಯಾ ಮಹಿಳಾ ತಂಡದ ಪಾಲಾಯಿತು. ಅಂದರೆ ಈ ಹಿಂದೆ ಭಾರತೀಯ ಪುರುಷರ ತಂಡ ಒನ್ ಡೇ ಕ್ರಿಕೆಟ್‌ನಲ್ಲಿ ಬರೆದಿದ್ದ ಗರಿಷ್ಠ ಸ್ಕೋರ್​ ದಾಖಲೆಯನ್ನು ಮಹಿಳಾ ತಂಡ ಅಳಿಸಿ ಹಾಕಿದೆ.

3 / 5
ಭಾರತ ಪುರುಷರ ತಂಡ ಏಕದಿನ ಕ್ರಿಕೆಟ್‌ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 418 ರನ್​ಗಳು. 2011 ರಲ್ಲಿ ಇಂದೋರ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವೀರೇಂದ್ರ ಸೆಹ್ವಾಗ್ (219) ದ್ವಿಶತಕ ಸಿಡಿಸಿದ್ದರು. ಈ ಡಬಲ್ ಸೆಂಚುರಿಯ ನೆರವಿನಿಂದ ಭಾರತ ತಂಡವು 418 ರನ್ ಬಾರಿಸಿ ಇತಿಹಾಸ ನಿರ್ಮಿಸಿತ್ತು.

ಭಾರತ ಪುರುಷರ ತಂಡ ಏಕದಿನ ಕ್ರಿಕೆಟ್‌ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 418 ರನ್​ಗಳು. 2011 ರಲ್ಲಿ ಇಂದೋರ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವೀರೇಂದ್ರ ಸೆಹ್ವಾಗ್ (219) ದ್ವಿಶತಕ ಸಿಡಿಸಿದ್ದರು. ಈ ಡಬಲ್ ಸೆಂಚುರಿಯ ನೆರವಿನಿಂದ ಭಾರತ ತಂಡವು 418 ರನ್ ಬಾರಿಸಿ ಇತಿಹಾಸ ನಿರ್ಮಿಸಿತ್ತು.

4 / 5
ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಭಾರತೀಯ ಮಹಿಳಾ ತಂಡ ಯಶಸ್ವಿಯಾಗಿದೆ. ಐರ್ಲೆಂಡ್ ವಿರುದ್ಧ 435 ರನ್ ಪೇರಿಸಿ, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಹಿರಿಮೆಯನ್ನು ಟೀಮ್ ಇಂಡಿಯಾ ಮಹಿಳಾ ತಂಡ ತನ್ನದಾಗಿಸಿಕೊಂಡಿದೆ.

ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಭಾರತೀಯ ಮಹಿಳಾ ತಂಡ ಯಶಸ್ವಿಯಾಗಿದೆ. ಐರ್ಲೆಂಡ್ ವಿರುದ್ಧ 435 ರನ್ ಪೇರಿಸಿ, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಹಿರಿಮೆಯನ್ನು ಟೀಮ್ ಇಂಡಿಯಾ ಮಹಿಳಾ ತಂಡ ತನ್ನದಾಗಿಸಿಕೊಂಡಿದೆ.

5 / 5

Published On - 7:24 am, Thu, 16 January 25

Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ