AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ 9 ಆಟಗಾರರಿಗೆ ಮೊದಲ ಸರಣಿ..!

India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್​ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್​ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 29, 2025 | 11:55 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಇಂದು (ಅ.29) ಕ್ಯಾನ್​ಬೆರಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದ ಮೂಲಕ ಐದು ಮ್ಯಾಚ್​ಗಳ ಸರಣಿಗೆ ಚಾಲನೆ ದೊರೆಯಲಿದೆ. ಈ ಸರಣಿಯ ಮೂಲಕ 9 ಆಟಗಾರರು ಚೊಚ್ಚಲ ಬಾರಿ ಕಣಕ್ಕಿಳಿಯುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಇಂದು (ಅ.29) ಕ್ಯಾನ್​ಬೆರಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದ ಮೂಲಕ ಐದು ಮ್ಯಾಚ್​ಗಳ ಸರಣಿಗೆ ಚಾಲನೆ ದೊರೆಯಲಿದೆ. ಈ ಸರಣಿಯ ಮೂಲಕ 9 ಆಟಗಾರರು ಚೊಚ್ಚಲ ಬಾರಿ ಕಣಕ್ಕಿಳಿಯುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

1 / 6
ಅಂದರೆ ಟೀಮ್ ಇಂಡಿಯಾದಲ್ಲಿರುವ 9 ಆಟಗಾರರು ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಇವರಲ್ಲಿ ಇಂದು ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ. ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿರುವ ಆಟಗಾರರು ಯಾರೆಂದರೆ....

ಅಂದರೆ ಟೀಮ್ ಇಂಡಿಯಾದಲ್ಲಿರುವ 9 ಆಟಗಾರರು ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಇವರಲ್ಲಿ ಇಂದು ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ. ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿರುವ ಆಟಗಾರರು ಯಾರೆಂದರೆ....

2 / 6
ಭಾರತ ಟಿ20 ತಂಡದ ಉಪನಾಯಕ ಶುಭ್​​ಮನ್ ಗಿಲ್​ ಇದೇ ಮೊದಲ ಬಾರಿಗೆ ಆಸೀಸ್ ಪಿಚ್​ನಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಹಾಗೆಯೇ ಭಾರತ ತಂಡದ ಸ್ಫೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಕಾಂಗರೂನಾಡಿನಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲಿದ್ದಾರೆ.

ಭಾರತ ಟಿ20 ತಂಡದ ಉಪನಾಯಕ ಶುಭ್​​ಮನ್ ಗಿಲ್​ ಇದೇ ಮೊದಲ ಬಾರಿಗೆ ಆಸೀಸ್ ಪಿಚ್​ನಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಹಾಗೆಯೇ ಭಾರತ ತಂಡದ ಸ್ಫೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಕಾಂಗರೂನಾಡಿನಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲಿದ್ದಾರೆ.

3 / 6
ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ಗಳಾಗಿ ಸ್ಥಾನ ಪಡೆದಿರುವ ನಿತೀಶ್ ಕುಮಾರ್ ರೆಡ್ಡಿ ಹಾಗೂ ಶಿವಂ ದುಬೆ ಕೂಡ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದಾರೆ. ಅಂದರೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಭಾಗವಾಗಿರುವ ದುಬೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ಗಳಾಗಿ ಸ್ಥಾನ ಪಡೆದಿರುವ ನಿತೀಶ್ ಕುಮಾರ್ ರೆಡ್ಡಿ ಹಾಗೂ ಶಿವಂ ದುಬೆ ಕೂಡ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದಾರೆ. ಅಂದರೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಭಾಗವಾಗಿರುವ ದುಬೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

4 / 6
ಇನ್ನು ತಿಲಕ್ ವರ್ಮಾ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ಜಿತೇಶ್ ಶರ್ಮಾಗೂ ಇದು ಮೊದಲ ಆಸ್ಟ್ರೇಲಿಯಾ ಪ್ರವಾಸ. ಹೀಗಾಗಿ ಈ ನಾಲ್ವರೂ ಕೂಡ ಕಾಂಗರೂನಾಡಿನಲ್ಲಿ ಚೊಚ್ಚಲ ಟಿ20  ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಈ ಬಾರಿಯ ಸರಣಿಯ ಮೂಲಕ ಯಾರೆಲ್ಲಾ ಆಸೀಸ್​ ಪಿಚ್​ನಲ್ಲಿ ತಮ್ಮ ಇನಿಂಗ್ಸ್ ಖಾತೆ ತೆರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ತಿಲಕ್ ವರ್ಮಾ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ಜಿತೇಶ್ ಶರ್ಮಾಗೂ ಇದು ಮೊದಲ ಆಸ್ಟ್ರೇಲಿಯಾ ಪ್ರವಾಸ. ಹೀಗಾಗಿ ಈ ನಾಲ್ವರೂ ಕೂಡ ಕಾಂಗರೂನಾಡಿನಲ್ಲಿ ಚೊಚ್ಚಲ ಟಿ20  ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಈ ಬಾರಿಯ ಸರಣಿಯ ಮೂಲಕ ಯಾರೆಲ್ಲಾ ಆಸೀಸ್​ ಪಿಚ್​ನಲ್ಲಿ ತಮ್ಮ ಇನಿಂಗ್ಸ್ ಖಾತೆ ತೆರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ