AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ 9 ಆಟಗಾರರಿಗೆ ಮೊದಲ ಸರಣಿ..!

India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್​ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್​ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 29, 2025 | 11:55 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಇಂದು (ಅ.29) ಕ್ಯಾನ್​ಬೆರಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದ ಮೂಲಕ ಐದು ಮ್ಯಾಚ್​ಗಳ ಸರಣಿಗೆ ಚಾಲನೆ ದೊರೆಯಲಿದೆ. ಈ ಸರಣಿಯ ಮೂಲಕ 9 ಆಟಗಾರರು ಚೊಚ್ಚಲ ಬಾರಿ ಕಣಕ್ಕಿಳಿಯುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಇಂದು (ಅ.29) ಕ್ಯಾನ್​ಬೆರಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದ ಮೂಲಕ ಐದು ಮ್ಯಾಚ್​ಗಳ ಸರಣಿಗೆ ಚಾಲನೆ ದೊರೆಯಲಿದೆ. ಈ ಸರಣಿಯ ಮೂಲಕ 9 ಆಟಗಾರರು ಚೊಚ್ಚಲ ಬಾರಿ ಕಣಕ್ಕಿಳಿಯುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

1 / 6
ಅಂದರೆ ಟೀಮ್ ಇಂಡಿಯಾದಲ್ಲಿರುವ 9 ಆಟಗಾರರು ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಇವರಲ್ಲಿ ಇಂದು ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ. ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿರುವ ಆಟಗಾರರು ಯಾರೆಂದರೆ....

ಅಂದರೆ ಟೀಮ್ ಇಂಡಿಯಾದಲ್ಲಿರುವ 9 ಆಟಗಾರರು ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಇವರಲ್ಲಿ ಇಂದು ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ. ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿರುವ ಆಟಗಾರರು ಯಾರೆಂದರೆ....

2 / 6
ಭಾರತ ಟಿ20 ತಂಡದ ಉಪನಾಯಕ ಶುಭ್​​ಮನ್ ಗಿಲ್​ ಇದೇ ಮೊದಲ ಬಾರಿಗೆ ಆಸೀಸ್ ಪಿಚ್​ನಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಹಾಗೆಯೇ ಭಾರತ ತಂಡದ ಸ್ಫೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಕಾಂಗರೂನಾಡಿನಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲಿದ್ದಾರೆ.

ಭಾರತ ಟಿ20 ತಂಡದ ಉಪನಾಯಕ ಶುಭ್​​ಮನ್ ಗಿಲ್​ ಇದೇ ಮೊದಲ ಬಾರಿಗೆ ಆಸೀಸ್ ಪಿಚ್​ನಲ್ಲಿ ಟಿ20 ಪಂದ್ಯವಾಡಲು ಸಜ್ಜಾಗಿದ್ದಾರೆ. ಹಾಗೆಯೇ ಭಾರತ ತಂಡದ ಸ್ಫೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಕಾಂಗರೂನಾಡಿನಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲಿದ್ದಾರೆ.

3 / 6
ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ಗಳಾಗಿ ಸ್ಥಾನ ಪಡೆದಿರುವ ನಿತೀಶ್ ಕುಮಾರ್ ರೆಡ್ಡಿ ಹಾಗೂ ಶಿವಂ ದುಬೆ ಕೂಡ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದಾರೆ. ಅಂದರೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಭಾಗವಾಗಿರುವ ದುಬೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ಗಳಾಗಿ ಸ್ಥಾನ ಪಡೆದಿರುವ ನಿತೀಶ್ ಕುಮಾರ್ ರೆಡ್ಡಿ ಹಾಗೂ ಶಿವಂ ದುಬೆ ಕೂಡ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟಿ20 ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದಾರೆ. ಅಂದರೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಭಾಗವಾಗಿರುವ ದುಬೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

4 / 6
ಇನ್ನು ತಿಲಕ್ ವರ್ಮಾ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ಜಿತೇಶ್ ಶರ್ಮಾಗೂ ಇದು ಮೊದಲ ಆಸ್ಟ್ರೇಲಿಯಾ ಪ್ರವಾಸ. ಹೀಗಾಗಿ ಈ ನಾಲ್ವರೂ ಕೂಡ ಕಾಂಗರೂನಾಡಿನಲ್ಲಿ ಚೊಚ್ಚಲ ಟಿ20  ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಈ ಬಾರಿಯ ಸರಣಿಯ ಮೂಲಕ ಯಾರೆಲ್ಲಾ ಆಸೀಸ್​ ಪಿಚ್​ನಲ್ಲಿ ತಮ್ಮ ಇನಿಂಗ್ಸ್ ಖಾತೆ ತೆರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ತಿಲಕ್ ವರ್ಮಾ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ಜಿತೇಶ್ ಶರ್ಮಾಗೂ ಇದು ಮೊದಲ ಆಸ್ಟ್ರೇಲಿಯಾ ಪ್ರವಾಸ. ಹೀಗಾಗಿ ಈ ನಾಲ್ವರೂ ಕೂಡ ಕಾಂಗರೂನಾಡಿನಲ್ಲಿ ಚೊಚ್ಚಲ ಟಿ20  ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಈ ಬಾರಿಯ ಸರಣಿಯ ಮೂಲಕ ಯಾರೆಲ್ಲಾ ಆಸೀಸ್​ ಪಿಚ್​ನಲ್ಲಿ ತಮ್ಮ ಇನಿಂಗ್ಸ್ ಖಾತೆ ತೆರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ