AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಶರ್ಮಾಗೆ ಸಿಕ್ಕ ಕಾರು ಭಾರತಕ್ಕೆ ತರುವಂತಿಲ್ಲ..!

Abhishek Sharma: ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ಗಳಿಸಿದ್ದು ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ. 7 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಅಭಿ 314 ರನ್​ ಗಳಿಸುವ ಮೂಲಕ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್​ ಪ್ರಶಸ್ತಿ ಪಡೆದಿದ್ದರು.

ಝಾಹಿರ್ ಯೂಸುಫ್
|

Updated on: Oct 07, 2025 | 11:30 AM

Share
ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ (Abhishek Sharma) ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಆಟಗಾರನಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ನೀಡಲಾಗಿತ್ತು. ಆದರೀಗ ಈ ಐಷಾರಾಮಿ ಕಾರನ್ನು ಭಾರತಕ್ಕೆ ತರಲು ಬಿಕ್ಕಟ್ಟು ಎದುರಾಗಿದೆ. 

ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ (Abhishek Sharma) ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಆಟಗಾರನಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ನೀಡಲಾಗಿತ್ತು. ಆದರೀಗ ಈ ಐಷಾರಾಮಿ ಕಾರನ್ನು ಭಾರತಕ್ಕೆ ತರಲು ಬಿಕ್ಕಟ್ಟು ಎದುರಾಗಿದೆ. 

1 / 5
ಹೌದು, ಅಭಿಷೇಕ್ ಶರ್ಮಾಗೆ ಸಿಕ್ಕ  HAVAL H9 SUV ಕಾರನ್ನು ಭಾರತಕ್ಕೆ ತರಲು ಕಾನೂನಿನ ತೊಡಕು ಉಂಟಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತೀಯ ರಸ್ತೆ ನಿಯಮ. ಅಂದರೆ ಭಾರತದಲ್ಲಿ ಬಲಗೈ ಡ್ರೈವ್ (RHD) ವಾಹನಗಳನ್ನು ಮಾತ್ರ  ಓಡಿಸಲು ಅನುಮತಿಸಲಾಗಿದೆ.

ಹೌದು, ಅಭಿಷೇಕ್ ಶರ್ಮಾಗೆ ಸಿಕ್ಕ  HAVAL H9 SUV ಕಾರನ್ನು ಭಾರತಕ್ಕೆ ತರಲು ಕಾನೂನಿನ ತೊಡಕು ಉಂಟಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತೀಯ ರಸ್ತೆ ನಿಯಮ. ಅಂದರೆ ಭಾರತದಲ್ಲಿ ಬಲಗೈ ಡ್ರೈವ್ (RHD) ವಾಹನಗಳನ್ನು ಮಾತ್ರ  ಓಡಿಸಲು ಅನುಮತಿಸಲಾಗಿದೆ.

2 / 5
ಅತ್ತ ಅಭಿಷೇಕ್ ಶರ್ಮಾಗೆ ಸಿಕ್ಕಿರುವುದು ಎಡಗೈ ಡ್ರೈವ್ (LHD) ಕಾರ್. ಹವಾಲ್ H9 SUV ಕಾರಿನ ಸ್ಟೇರಿಂಗ್ ಎಡ ಭಾಗದಲ್ಲಿದೆ. ಹೀಗಾಗಿ ಈ ಕಾರನ್ನು ಭಾರತದಲ್ಲಿ ನೋಂದಾಯಿಸಲು ಹಾಗೂ ಓಡಿಸಲು ಅವಕಾಶವಿಲ್ಲ. ಇದೇ ಕಾರಣದಿಂದಾಗಿ ಅಭಿಷೇಕ್ ಶರ್ಮಾ ಇನ್ನೂ ಸಹ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಕಾರನ್ನು ಭಾರತಕ್ಕೆ ತಂದಿಲ್ಲ ಎಂದು ತಿಳಿದು ಬಂದಿದೆ.

ಅತ್ತ ಅಭಿಷೇಕ್ ಶರ್ಮಾಗೆ ಸಿಕ್ಕಿರುವುದು ಎಡಗೈ ಡ್ರೈವ್ (LHD) ಕಾರ್. ಹವಾಲ್ H9 SUV ಕಾರಿನ ಸ್ಟೇರಿಂಗ್ ಎಡ ಭಾಗದಲ್ಲಿದೆ. ಹೀಗಾಗಿ ಈ ಕಾರನ್ನು ಭಾರತದಲ್ಲಿ ನೋಂದಾಯಿಸಲು ಹಾಗೂ ಓಡಿಸಲು ಅವಕಾಶವಿಲ್ಲ. ಇದೇ ಕಾರಣದಿಂದಾಗಿ ಅಭಿಷೇಕ್ ಶರ್ಮಾ ಇನ್ನೂ ಸಹ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಕಾರನ್ನು ಭಾರತಕ್ಕೆ ತಂದಿಲ್ಲ ಎಂದು ತಿಳಿದು ಬಂದಿದೆ.

3 / 5
ಇದಾಗ್ಯೂ GWM  ಕಂಪೆನಿಯು ನವೆಂಬರ್ 2025 ರ ವೇಳೆಗೆ ಭಾರತದಲ್ಲಿ ಬಲಗೈ ಡ್ರೈವ್ ಆವೃತ್ತಿಯಲ್ಲಿ HAVAL SUV ಅನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಅಭಿಷೇಕ್ ಶರ್ಮಾ ಅವರಿಗೆ ಭಾರತದಲ್ಲಿ ಬಳಸಬಹುದಾದ ಹೊಸ ಮಾದರಿಯ ಬಲಗೈ ಡ್ರೈವ್ (RHD) ಹವಾಲ್ H9 SUV ಕಾರ್ ನೀಡುವ ಸಾಧ್ಯತೆಯಿದೆ.

ಇದಾಗ್ಯೂ GWM  ಕಂಪೆನಿಯು ನವೆಂಬರ್ 2025 ರ ವೇಳೆಗೆ ಭಾರತದಲ್ಲಿ ಬಲಗೈ ಡ್ರೈವ್ ಆವೃತ್ತಿಯಲ್ಲಿ HAVAL SUV ಅನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಅಭಿಷೇಕ್ ಶರ್ಮಾ ಅವರಿಗೆ ಭಾರತದಲ್ಲಿ ಬಳಸಬಹುದಾದ ಹೊಸ ಮಾದರಿಯ ಬಲಗೈ ಡ್ರೈವ್ (RHD) ಹವಾಲ್ H9 SUV ಕಾರ್ ನೀಡುವ ಸಾಧ್ಯತೆಯಿದೆ.

4 / 5
ಹೀಗಾಗಿ ಏಷ್ಯಾಕಪ್​ನಲ್ಲಿ ಗೆದ್ದಂತಹ ಕಾರನ್ನು ಪಡೆಯಲು ಅಭಿಷೇಕ್ ಶರ್ಮಾ ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಸದ್ಯ ವಿಶ್ರಾಂತಿಯಲ್ಲಿರುವ ಯುವ ಎಡಗೈ ದಾಂಡಿಗ ಅಕ್ಟೋಬರ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ಮತ್ತೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಇದು ಅಭಿಷೇಕ್ ಶರ್ಮಾ ಅವರ ಮೊದಲ ಆಸೀಸ್ ಪ್ರವಾಸವಾಗಿದ್ದು, ಈ ಸರಣಿಯಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹೀಗಾಗಿ ಏಷ್ಯಾಕಪ್​ನಲ್ಲಿ ಗೆದ್ದಂತಹ ಕಾರನ್ನು ಪಡೆಯಲು ಅಭಿಷೇಕ್ ಶರ್ಮಾ ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಸದ್ಯ ವಿಶ್ರಾಂತಿಯಲ್ಲಿರುವ ಯುವ ಎಡಗೈ ದಾಂಡಿಗ ಅಕ್ಟೋಬರ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ಮತ್ತೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಇದು ಅಭಿಷೇಕ್ ಶರ್ಮಾ ಅವರ ಮೊದಲ ಆಸೀಸ್ ಪ್ರವಾಸವಾಗಿದ್ದು, ಈ ಸರಣಿಯಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು