AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಶರ್ಮಾಗೆ ಸಿಕ್ಕ ಕಾರು ಭಾರತಕ್ಕೆ ತರುವಂತಿಲ್ಲ..!

Abhishek Sharma: ಈ ಬಾರಿಯ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ಗಳಿಸಿದ್ದು ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ. 7 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಅಭಿ 314 ರನ್​ ಗಳಿಸುವ ಮೂಲಕ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್​ ಪ್ರಶಸ್ತಿ ಪಡೆದಿದ್ದರು.

ಝಾಹಿರ್ ಯೂಸುಫ್
|

Updated on: Oct 07, 2025 | 11:30 AM

Share
ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ (Abhishek Sharma) ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಆಟಗಾರನಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ನೀಡಲಾಗಿತ್ತು. ಆದರೀಗ ಈ ಐಷಾರಾಮಿ ಕಾರನ್ನು ಭಾರತಕ್ಕೆ ತರಲು ಬಿಕ್ಕಟ್ಟು ಎದುರಾಗಿದೆ. 

ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ (Abhishek Sharma) ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಆಟಗಾರನಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ನೀಡಲಾಗಿತ್ತು. ಆದರೀಗ ಈ ಐಷಾರಾಮಿ ಕಾರನ್ನು ಭಾರತಕ್ಕೆ ತರಲು ಬಿಕ್ಕಟ್ಟು ಎದುರಾಗಿದೆ. 

1 / 5
ಹೌದು, ಅಭಿಷೇಕ್ ಶರ್ಮಾಗೆ ಸಿಕ್ಕ  HAVAL H9 SUV ಕಾರನ್ನು ಭಾರತಕ್ಕೆ ತರಲು ಕಾನೂನಿನ ತೊಡಕು ಉಂಟಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತೀಯ ರಸ್ತೆ ನಿಯಮ. ಅಂದರೆ ಭಾರತದಲ್ಲಿ ಬಲಗೈ ಡ್ರೈವ್ (RHD) ವಾಹನಗಳನ್ನು ಮಾತ್ರ  ಓಡಿಸಲು ಅನುಮತಿಸಲಾಗಿದೆ.

ಹೌದು, ಅಭಿಷೇಕ್ ಶರ್ಮಾಗೆ ಸಿಕ್ಕ  HAVAL H9 SUV ಕಾರನ್ನು ಭಾರತಕ್ಕೆ ತರಲು ಕಾನೂನಿನ ತೊಡಕು ಉಂಟಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತೀಯ ರಸ್ತೆ ನಿಯಮ. ಅಂದರೆ ಭಾರತದಲ್ಲಿ ಬಲಗೈ ಡ್ರೈವ್ (RHD) ವಾಹನಗಳನ್ನು ಮಾತ್ರ  ಓಡಿಸಲು ಅನುಮತಿಸಲಾಗಿದೆ.

2 / 5
ಅತ್ತ ಅಭಿಷೇಕ್ ಶರ್ಮಾಗೆ ಸಿಕ್ಕಿರುವುದು ಎಡಗೈ ಡ್ರೈವ್ (LHD) ಕಾರ್. ಹವಾಲ್ H9 SUV ಕಾರಿನ ಸ್ಟೇರಿಂಗ್ ಎಡ ಭಾಗದಲ್ಲಿದೆ. ಹೀಗಾಗಿ ಈ ಕಾರನ್ನು ಭಾರತದಲ್ಲಿ ನೋಂದಾಯಿಸಲು ಹಾಗೂ ಓಡಿಸಲು ಅವಕಾಶವಿಲ್ಲ. ಇದೇ ಕಾರಣದಿಂದಾಗಿ ಅಭಿಷೇಕ್ ಶರ್ಮಾ ಇನ್ನೂ ಸಹ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಕಾರನ್ನು ಭಾರತಕ್ಕೆ ತಂದಿಲ್ಲ ಎಂದು ತಿಳಿದು ಬಂದಿದೆ.

ಅತ್ತ ಅಭಿಷೇಕ್ ಶರ್ಮಾಗೆ ಸಿಕ್ಕಿರುವುದು ಎಡಗೈ ಡ್ರೈವ್ (LHD) ಕಾರ್. ಹವಾಲ್ H9 SUV ಕಾರಿನ ಸ್ಟೇರಿಂಗ್ ಎಡ ಭಾಗದಲ್ಲಿದೆ. ಹೀಗಾಗಿ ಈ ಕಾರನ್ನು ಭಾರತದಲ್ಲಿ ನೋಂದಾಯಿಸಲು ಹಾಗೂ ಓಡಿಸಲು ಅವಕಾಶವಿಲ್ಲ. ಇದೇ ಕಾರಣದಿಂದಾಗಿ ಅಭಿಷೇಕ್ ಶರ್ಮಾ ಇನ್ನೂ ಸಹ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಕಾರನ್ನು ಭಾರತಕ್ಕೆ ತಂದಿಲ್ಲ ಎಂದು ತಿಳಿದು ಬಂದಿದೆ.

3 / 5
ಇದಾಗ್ಯೂ GWM  ಕಂಪೆನಿಯು ನವೆಂಬರ್ 2025 ರ ವೇಳೆಗೆ ಭಾರತದಲ್ಲಿ ಬಲಗೈ ಡ್ರೈವ್ ಆವೃತ್ತಿಯಲ್ಲಿ HAVAL SUV ಅನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಅಭಿಷೇಕ್ ಶರ್ಮಾ ಅವರಿಗೆ ಭಾರತದಲ್ಲಿ ಬಳಸಬಹುದಾದ ಹೊಸ ಮಾದರಿಯ ಬಲಗೈ ಡ್ರೈವ್ (RHD) ಹವಾಲ್ H9 SUV ಕಾರ್ ನೀಡುವ ಸಾಧ್ಯತೆಯಿದೆ.

ಇದಾಗ್ಯೂ GWM  ಕಂಪೆನಿಯು ನವೆಂಬರ್ 2025 ರ ವೇಳೆಗೆ ಭಾರತದಲ್ಲಿ ಬಲಗೈ ಡ್ರೈವ್ ಆವೃತ್ತಿಯಲ್ಲಿ HAVAL SUV ಅನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಅಭಿಷೇಕ್ ಶರ್ಮಾ ಅವರಿಗೆ ಭಾರತದಲ್ಲಿ ಬಳಸಬಹುದಾದ ಹೊಸ ಮಾದರಿಯ ಬಲಗೈ ಡ್ರೈವ್ (RHD) ಹವಾಲ್ H9 SUV ಕಾರ್ ನೀಡುವ ಸಾಧ್ಯತೆಯಿದೆ.

4 / 5
ಹೀಗಾಗಿ ಏಷ್ಯಾಕಪ್​ನಲ್ಲಿ ಗೆದ್ದಂತಹ ಕಾರನ್ನು ಪಡೆಯಲು ಅಭಿಷೇಕ್ ಶರ್ಮಾ ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಸದ್ಯ ವಿಶ್ರಾಂತಿಯಲ್ಲಿರುವ ಯುವ ಎಡಗೈ ದಾಂಡಿಗ ಅಕ್ಟೋಬರ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ಮತ್ತೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಇದು ಅಭಿಷೇಕ್ ಶರ್ಮಾ ಅವರ ಮೊದಲ ಆಸೀಸ್ ಪ್ರವಾಸವಾಗಿದ್ದು, ಈ ಸರಣಿಯಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹೀಗಾಗಿ ಏಷ್ಯಾಕಪ್​ನಲ್ಲಿ ಗೆದ್ದಂತಹ ಕಾರನ್ನು ಪಡೆಯಲು ಅಭಿಷೇಕ್ ಶರ್ಮಾ ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಸದ್ಯ ವಿಶ್ರಾಂತಿಯಲ್ಲಿರುವ ಯುವ ಎಡಗೈ ದಾಂಡಿಗ ಅಕ್ಟೋಬರ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ಮತ್ತೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಇದು ಅಭಿಷೇಕ್ ಶರ್ಮಾ ಅವರ ಮೊದಲ ಆಸೀಸ್ ಪ್ರವಾಸವಾಗಿದ್ದು, ಈ ಸರಣಿಯಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!