AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: 55 ವರ್ಷಗಳ ಬಳಿಕ ಯಾಕೆ ಹೀಗಾಯ್ತು..!

Team India: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಐತಿಹಾಸಿಕ ಸರಣಿ ಗೆಲುವಿನೊಂದಿಗೆ ಕಿವೀಸ್ ಪಡೆ ತವರಿಗೆ ಹಿಂತಿರುಗಿದರೆ, ಇತ್ತ ಭಾರತ ತಂಡವು ತವರಿನಲ್ಲಿ ಹೀನಾಯ ದಾಖಲೆಯೊಂದನ್ನು ಬರೆದಿದೆ.

ಝಾಹಿರ್ ಯೂಸುಫ್
|

Updated on: Nov 06, 2024 | 8:30 AM

Share
ಕೋಚ್ ಗೌತಮ್ ಗಂಭೀರ್ ಕೇಳಿದ ತಂಡ, ನಾಯಕ ರೋಹಿತ್ ಶರ್ಮಾ ಅವರ ಮಾಸ್ಟರ್ ಪ್ಲ್ಯಾನ್, ತಂಡದಲ್ಲಿ ಅನುಭವಿ/ಯುವ ಆಟಗಾರರ ಸಮತೋಲನ... ಹೀಗಿದ್ದರೂ ತವರಿನಲ್ಲಿ ಭಾರತ ತಂಡ 55 ವರ್ಷಗಳ ಬಳಿಕ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳನ್ನು ಸೋತಿದೆ. ಅಂದರೆ ಕಳೆದ ಐವತ್ತೈದು ವರ್ಷಗಳಲ್ಲಿ ಕಂಡರಿಯದಂತೆ ಟೀಮ್ ಇಂಡಿಯಾ ತವರಿನಲ್ಲಿ ಮುಗ್ಗರಿಸಿದೆ.

ಕೋಚ್ ಗೌತಮ್ ಗಂಭೀರ್ ಕೇಳಿದ ತಂಡ, ನಾಯಕ ರೋಹಿತ್ ಶರ್ಮಾ ಅವರ ಮಾಸ್ಟರ್ ಪ್ಲ್ಯಾನ್, ತಂಡದಲ್ಲಿ ಅನುಭವಿ/ಯುವ ಆಟಗಾರರ ಸಮತೋಲನ... ಹೀಗಿದ್ದರೂ ತವರಿನಲ್ಲಿ ಭಾರತ ತಂಡ 55 ವರ್ಷಗಳ ಬಳಿಕ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳನ್ನು ಸೋತಿದೆ. ಅಂದರೆ ಕಳೆದ ಐವತ್ತೈದು ವರ್ಷಗಳಲ್ಲಿ ಕಂಡರಿಯದಂತೆ ಟೀಮ್ ಇಂಡಿಯಾ ತವರಿನಲ್ಲಿ ಮುಗ್ಗರಿಸಿದೆ.

1 / 6
ಇದಕ್ಕೂ ಮುನ್ನ 1969 ರಲ್ಲಿ ಭಾರತ ತಂಡ ತವರಿನಲ್ಲಿ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಆ ವರ್ಷ ಒಟ್ಟು 8 ಪಂದ್ಯಗಳನ್ನಾಡಿದ್ದ ಟೀಮ್ ಇಂಡಿಯಾ 2 ಮ್ಯಾಚ್ ಗಳಲ್ಲಿ ಗೆದ್ದರೆ, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತ್ತು. ಅಲ್ಲದೆ 4 ಪಂದ್ಯಗಳಲ್ಲಿ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

ಇದಕ್ಕೂ ಮುನ್ನ 1969 ರಲ್ಲಿ ಭಾರತ ತಂಡ ತವರಿನಲ್ಲಿ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಆ ವರ್ಷ ಒಟ್ಟು 8 ಪಂದ್ಯಗಳನ್ನಾಡಿದ್ದ ಟೀಮ್ ಇಂಡಿಯಾ 2 ಮ್ಯಾಚ್ ಗಳಲ್ಲಿ ಗೆದ್ದರೆ, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತ್ತು. ಅಲ್ಲದೆ 4 ಪಂದ್ಯಗಳಲ್ಲಿ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

2 / 6
ಇದಾಗಿ ಬರೋಬ್ಬರಿ 55 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡಿದೆ. ಈ ನಾಲ್ಕು ಪಂದ್ಯಗಳಲ್ಲಿ ಒಂದು ಮ್ಯಾಚ್ ಇಂಗ್ಲೆಂಡ್ ವಿರುದ್ಧ ಸೋತರೆ, ಉಳಿದ ಮೂರು ಪಂದ್ಯಗಳನ್ನು ನ್ಯೂಝಿಲೆಂಡ್ ವಿರುದ್ಧ ಸೋತಿದೆ. ಹೀಗಾಗಿಯೇ ಈ ಬಾರಿ ಭಾರತ ತಂಡದ ಪ್ರದರ್ಶನ ಅತ್ಯಂತ ಕೆಳಮಟ್ಟದಲ್ಲಿತ್ತು ಎಂದು ವಿಶ್ಲೇಷಿಸಲಾಗುತ್ತಿದೆ.

ಇದಾಗಿ ಬರೋಬ್ಬರಿ 55 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷ 4 ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡಿದೆ. ಈ ನಾಲ್ಕು ಪಂದ್ಯಗಳಲ್ಲಿ ಒಂದು ಮ್ಯಾಚ್ ಇಂಗ್ಲೆಂಡ್ ವಿರುದ್ಧ ಸೋತರೆ, ಉಳಿದ ಮೂರು ಪಂದ್ಯಗಳನ್ನು ನ್ಯೂಝಿಲೆಂಡ್ ವಿರುದ್ಧ ಸೋತಿದೆ. ಹೀಗಾಗಿಯೇ ಈ ಬಾರಿ ಭಾರತ ತಂಡದ ಪ್ರದರ್ಶನ ಅತ್ಯಂತ ಕೆಳಮಟ್ಟದಲ್ಲಿತ್ತು ಎಂದು ವಿಶ್ಲೇಷಿಸಲಾಗುತ್ತಿದೆ.

3 / 6
ಈ ವಿಶ್ಲೇಷಣೆ ಸರಿಯಾಗಿದೆ ಎಂಬುದಕ್ಕೆ  ನ್ಯೂಝಿಲೆಂಡ್ ತಂಡದ ಸರಣಿ ಗೆಲುವು ಸಾಕ್ಷಿ. ಏಕೆಂದರೆ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ಒಮ್ಮೆಯೂ ತವರಿನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋತಿರಲಿಲ್ಲ. ಆದರೆ ಈ ಬಾರಿ ಇತಿಹಾಸ ರಚಿಸುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

ಈ ವಿಶ್ಲೇಷಣೆ ಸರಿಯಾಗಿದೆ ಎಂಬುದಕ್ಕೆ ನ್ಯೂಝಿಲೆಂಡ್ ತಂಡದ ಸರಣಿ ಗೆಲುವು ಸಾಕ್ಷಿ. ಏಕೆಂದರೆ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ಒಮ್ಮೆಯೂ ತವರಿನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋತಿರಲಿಲ್ಲ. ಆದರೆ ಈ ಬಾರಿ ಇತಿಹಾಸ ರಚಿಸುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

4 / 6
ಅದು ಕೂಡ 3-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ. ಅಂದರೆ, ಭಾರತ ತಂಡವು ಇದೇ ಮೊದಲ ಬಾರಿಗೆ ತವರಿನಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಮುಖಭಂಗ ಅನುವಿಸಿದೆ. ಹೀಗಾಗಿಯೇ ಎಲ್ಲವೂ ಇದ್ದು, ತವರಿನಲ್ಲಿ ಬೇಕಾದಂತಹ ಪಿಚ್ ಸಹ ಇದ್ದು... 55 ವರ್ಷಗಳ ಬಳಿಕ ಯಾಕೆ ಹೀಗಾಯ್ತು ಎಂಬ ಪ್ರಶ್ನೆ ಎದುರಾಗಿದೆ.

ಅದು ಕೂಡ 3-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ. ಅಂದರೆ, ಭಾರತ ತಂಡವು ಇದೇ ಮೊದಲ ಬಾರಿಗೆ ತವರಿನಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಮುಖಭಂಗ ಅನುವಿಸಿದೆ. ಹೀಗಾಗಿಯೇ ಎಲ್ಲವೂ ಇದ್ದು, ತವರಿನಲ್ಲಿ ಬೇಕಾದಂತಹ ಪಿಚ್ ಸಹ ಇದ್ದು... 55 ವರ್ಷಗಳ ಬಳಿಕ ಯಾಕೆ ಹೀಗಾಯ್ತು ಎಂಬ ಪ್ರಶ್ನೆ ಎದುರಾಗಿದೆ.

5 / 6
ಪ್ರಶ್ನೆಯ ನಡುವೆಯೇ ಇದೀಗ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯ ಮೂಲಕ ಭಾರತದಲ್ಲಿನ ಸೋಲಿಗೆ ಟೀಮ್ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಉತ್ತರ ಕಂಡುಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಪ್ರಶ್ನೆಯ ನಡುವೆಯೇ ಇದೀಗ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯ ಮೂಲಕ ಭಾರತದಲ್ಲಿನ ಸೋಲಿಗೆ ಟೀಮ್ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಉತ್ತರ ಕಂಡುಕೊಳ್ಳಲಿದೆಯಾ ಕಾದು ನೋಡಬೇಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ