AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ 7 ಆಟಗಾರರು ಗಾಯಾಳು!

ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾ ಕ್ಯಾಂಪ್‌ನಲ್ಲಿ ಗಾಯದ ಆತಂಕ ತೀವ್ರಗೊಂಡಿದೆ. ಏಕಕಾಲದಲ್ಲಿ ತಂಡದ ಪ್ರಮುಖ ಏಳು ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿರುವುದು ಟೀಮ್ ಇಂಡಿಯಾ ಹೊಸ ತಲೆನೋವಾಗಿ ಪರಿಣಮಿಸಿದೆ. ಹೀಗೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Aug 04, 2026 | 8:11 AM

Share
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನವೇ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಜಸ್​ಪ್ರೀತ್ ಬುಮ್ರಾ ಸೇರಿದಂತೆ ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಅದರಲ್ಲೂ ಏಕಕಾಲದಲ್ಲಿ ಟೀಮ್ ಇಂಡಿಯಾದ ಏಳು ಆಟಗಾರರು ಗಾಯಾಳುಗಳ ಪಟ್ಟಿ ಸೇರಿರುವುದು ಬಿಸಿಸಿಐಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಗಾಯಗೊಂಡಿರುವ ಟೀಮ್ ಇಂಡಿಯಾ ಆಟಗಾರರ ವಿವರ ಈ ಕೆಳಗಿನಂತಿದೆ.. (PC: Getty Images)

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನವೇ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಜಸ್​ಪ್ರೀತ್ ಬುಮ್ರಾ ಸೇರಿದಂತೆ ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಅದರಲ್ಲೂ ಏಕಕಾಲದಲ್ಲಿ ಟೀಮ್ ಇಂಡಿಯಾದ ಏಳು ಆಟಗಾರರು ಗಾಯಾಳುಗಳ ಪಟ್ಟಿ ಸೇರಿರುವುದು ಬಿಸಿಸಿಐಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಗಾಯಗೊಂಡಿರುವ ಟೀಮ್ ಇಂಡಿಯಾ ಆಟಗಾರರ ವಿವರ ಈ ಕೆಳಗಿನಂತಿದೆ.. (PC: Getty Images)

1 / 8
ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೌಲಿಂಗ್ ಮಾಡುವಾಗ ಅವರ ದೇಹದ ಸಂಪೂರ್ಣ ತೂಕ ಎಡಗಾಲಿನ ಮೇಲೆಯೇ ಬೀಳುತ್ತದೆ. ಹಾರ್ಡ್ ಗ್ರೌಂಡ್‌ನಿಂದಾಗಿ ಮೊಣಕಾಲಿನ ಜಾಯಿಂಟ್ ಮತ್ತು ಕಾರ್ಟಿಲೆಜ್ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು, ಹೀಗಾಗಿ ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. (PC: Getty Images)

ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೌಲಿಂಗ್ ಮಾಡುವಾಗ ಅವರ ದೇಹದ ಸಂಪೂರ್ಣ ತೂಕ ಎಡಗಾಲಿನ ಮೇಲೆಯೇ ಬೀಳುತ್ತದೆ. ಹಾರ್ಡ್ ಗ್ರೌಂಡ್‌ನಿಂದಾಗಿ ಮೊಣಕಾಲಿನ ಜಾಯಿಂಟ್ ಮತ್ತು ಕಾರ್ಟಿಲೆಜ್ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು, ಹೀಗಾಗಿ ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. (PC: Getty Images)

2 / 8
ವಾಷಿಂಗ್ಟನ್ ಸುಂದರ್: ಭಾರತ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹ್ಯಾಮ್‌ಸ್ಟ್ರಿಂಗ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತೊಡೆಯ ಹಿಂಭಾಗದ ಸ್ನಾಯುಗಳು ಅತಿಯಾಗಿ ಎಳೆಯಲ್ಪಟ್ಟಾಗ ಈ ಸಮಸ್ಯೆಯು ಎದುರಾಗುತ್ತದೆ. ಇದೇ ಕಾರಣದಿಂದಾಗಿ ಸುಂದರ್​ ಕೂಡ ಶ್ರೀಲಂಕಾ ಸರಣಿಗೆ ಆಯ್ಕೆಯಾಗಿಲ್ಲ. (PC: Getty Images)

ವಾಷಿಂಗ್ಟನ್ ಸುಂದರ್: ಭಾರತ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹ್ಯಾಮ್‌ಸ್ಟ್ರಿಂಗ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತೊಡೆಯ ಹಿಂಭಾಗದ ಸ್ನಾಯುಗಳು ಅತಿಯಾಗಿ ಎಳೆಯಲ್ಪಟ್ಟಾಗ ಈ ಸಮಸ್ಯೆಯು ಎದುರಾಗುತ್ತದೆ. ಇದೇ ಕಾರಣದಿಂದಾಗಿ ಸುಂದರ್​ ಕೂಡ ಶ್ರೀಲಂಕಾ ಸರಣಿಗೆ ಆಯ್ಕೆಯಾಗಿಲ್ಲ. (PC: Getty Images)

3 / 8
ಹರ್ಷಿತ್ ರಾಣಾ: ಟೀಮ್ ಇಂಡಿಯಾ ವೇಗಿ ಹರ್ಷಿತ್ ರಾಣಾ ಕೂಡ ವಾಷಿಂಗ್ಟನ್ ಸುಂದರ್ ಅವರಂತೆಯೇ ತೊಡೆಯ ಹಿಂಭಾಗದ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗ್ರೇಡ್ 1 ಹ್ಯಾಮ್‌ಸ್ಟ್ರಿಂಗ್ ಸ್ಟ್ರೈನ್​ಗೆ ಒಳಗಾಗಿರುವ ರಾಣಾಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ. (PC: Getty Images)

ಹರ್ಷಿತ್ ರಾಣಾ: ಟೀಮ್ ಇಂಡಿಯಾ ವೇಗಿ ಹರ್ಷಿತ್ ರಾಣಾ ಕೂಡ ವಾಷಿಂಗ್ಟನ್ ಸುಂದರ್ ಅವರಂತೆಯೇ ತೊಡೆಯ ಹಿಂಭಾಗದ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗ್ರೇಡ್ 1 ಹ್ಯಾಮ್‌ಸ್ಟ್ರಿಂಗ್ ಸ್ಟ್ರೈನ್​ಗೆ ಒಳಗಾಗಿರುವ ರಾಣಾಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ. (PC: Getty Images)

4 / 8
ನಿತೀಶ್ ಕುಮಾರ್ ರೆಡ್ಡಿ: ಭಾರತ ತಂಡದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಎಡ ಕ್ವಾಡ್ರಿಸೆಪ್ಸ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕ್ವಾಡ್ರಿಸೆಪ್ಸ್ ಎಂಬುದು ತೊಡೆಯ ಮುಂಭಾಗದಲ್ಲಿರುವ ನಾಲ್ಕು ದೊಡ್ಡ ಸ್ನಾಯುಗಳ ಸಮೂಹ. ವೇಗದ ಬೌಲಿಂಗ್ ಮತ್ತು ಬ್ಯಾಟಿಂಗ್ ವೇಳೆ ತೀವ್ರವಾಗಿ ಓಡುವುದರಿಂದ ಈ ಸ್ನಾಯುಗಳ ಮೇಲೆ ಒತ್ತಡ ಬಿದ್ದು ಗಾಯಗೊಂಡಿದ್ದಾರೆ. (PC: Getty Images)

ನಿತೀಶ್ ಕುಮಾರ್ ರೆಡ್ಡಿ: ಭಾರತ ತಂಡದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಎಡ ಕ್ವಾಡ್ರಿಸೆಪ್ಸ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕ್ವಾಡ್ರಿಸೆಪ್ಸ್ ಎಂಬುದು ತೊಡೆಯ ಮುಂಭಾಗದಲ್ಲಿರುವ ನಾಲ್ಕು ದೊಡ್ಡ ಸ್ನಾಯುಗಳ ಸಮೂಹ. ವೇಗದ ಬೌಲಿಂಗ್ ಮತ್ತು ಬ್ಯಾಟಿಂಗ್ ವೇಳೆ ತೀವ್ರವಾಗಿ ಓಡುವುದರಿಂದ ಈ ಸ್ನಾಯುಗಳ ಮೇಲೆ ಒತ್ತಡ ಬಿದ್ದು ಗಾಯಗೊಂಡಿದ್ದಾರೆ. (PC: Getty Images)

5 / 8
ಆಕಾಶ್ ದೀಪ್: ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ಬೆನ್ನಿನ ಭಾಗದ ಸ್ಟ್ರೆಸ್ ರಿಯಾಕ್ಷನ್​ನಿಂದ ಬಳಲುತ್ತಿದ್ದಾರೆ. ಇದು ವೇಗದ ಬೌಲರ್‌ಗಳಲ್ಲಿ ಕಂಡುಬರುವ ಅತ್ಯಂತ ಗಂಭೀರ ಸಮಸ್ಯೆ. ಬೆನ್ನುಮೂಳೆಯ ಮೂಳೆಗಳ ಮೇಲೆ ನಿರಂತರ ಒತ್ತಡ ಬಿದ್ದಾಗ ಮೂಳೆಯಲ್ಲಿ ಸಣ್ಣದಾಗಿ ಬಿರುಕು ಬಿಡುವ ಆರಂಭಿಕ ಹಂತವೇ 'ಸ್ಟ್ರೆಸ್ ರಿಯಾಕ್ಷನ್'. (PC: Getty Images)

ಆಕಾಶ್ ದೀಪ್: ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ಬೆನ್ನಿನ ಭಾಗದ ಸ್ಟ್ರೆಸ್ ರಿಯಾಕ್ಷನ್​ನಿಂದ ಬಳಲುತ್ತಿದ್ದಾರೆ. ಇದು ವೇಗದ ಬೌಲರ್‌ಗಳಲ್ಲಿ ಕಂಡುಬರುವ ಅತ್ಯಂತ ಗಂಭೀರ ಸಮಸ್ಯೆ. ಬೆನ್ನುಮೂಳೆಯ ಮೂಳೆಗಳ ಮೇಲೆ ನಿರಂತರ ಒತ್ತಡ ಬಿದ್ದಾಗ ಮೂಳೆಯಲ್ಲಿ ಸಣ್ಣದಾಗಿ ಬಿರುಕು ಬಿಡುವ ಆರಂಭಿಕ ಹಂತವೇ 'ಸ್ಟ್ರೆಸ್ ರಿಯಾಕ್ಷನ್'. (PC: Getty Images)

6 / 8
ವರುಣ್ ಚಕ್ರವರ್ತಿ: ಭಾರತ ತಂಡದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ  ಗ್ರೇಡ್ 2 ಹ್ಯಾಮ್‌ಸ್ಟ್ರಿಂಗ್ ಟೇರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಸಾಮಾನ್ಯ ಸ್ನಾಯು ಸೆಳೆತಕ್ಕಿಂತ ಗಂಭೀರವಾದದ್ದು. ಗ್ರೇಡ್ 2 ಎಂದರೆ ತೊಡೆಯ ಹಿಂಭಾಗದ ಸ್ನಾಯುಗಳು ಭಾಗಶಃ ಹರಿದಿರುತ್ತವೆ. ಇದರಿಂದ ಓಡುವಾಗ ತೀವ್ರವಾದ ನೋವು ಕಾಣಿಸಿಕೊಳ್ಳುತ್ತದೆ. ಸದ್ಯ ಈ ಸಮಸ್ಯೆಗಾಗಿ ವರುಣ್ ಚಕ್ರವರ್ತಿ ಚಿಕಿತ್ಸೆ ಮುಂದುವರೆಸಿದ್ದಾರೆ. (PC: Getty Images)

ವರುಣ್ ಚಕ್ರವರ್ತಿ: ಭಾರತ ತಂಡದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ  ಗ್ರೇಡ್ 2 ಹ್ಯಾಮ್‌ಸ್ಟ್ರಿಂಗ್ ಟೇರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಸಾಮಾನ್ಯ ಸ್ನಾಯು ಸೆಳೆತಕ್ಕಿಂತ ಗಂಭೀರವಾದದ್ದು. ಗ್ರೇಡ್ 2 ಎಂದರೆ ತೊಡೆಯ ಹಿಂಭಾಗದ ಸ್ನಾಯುಗಳು ಭಾಗಶಃ ಹರಿದಿರುತ್ತವೆ. ಇದರಿಂದ ಓಡುವಾಗ ತೀವ್ರವಾದ ನೋವು ಕಾಣಿಸಿಕೊಳ್ಳುತ್ತದೆ. ಸದ್ಯ ಈ ಸಮಸ್ಯೆಗಾಗಿ ವರುಣ್ ಚಕ್ರವರ್ತಿ ಚಿಕಿತ್ಸೆ ಮುಂದುವರೆಸಿದ್ದಾರೆ. (PC: Getty Images)

7 / 8
ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರಿಗೆ ಫಿಟ್‌ನೆಸ್ ಪರೀಕ್ಷೆ ನಡೆಯಲಿದ್ದು, ಅವರು ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: Getty Images)

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರಿಗೆ ಫಿಟ್‌ನೆಸ್ ಪರೀಕ್ಷೆ ನಡೆಯಲಿದ್ದು, ಅವರು ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: Getty Images)

8 / 8
Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ