ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾ ಆಟಗಾರ

23 ವರ್ಷದ ಸಾಯಿ ಸುದರ್ಶನ್ ಈಗಾಗಲೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಆಟಗಾರ. ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿರುವ ಸಾಯಿ 2 ಅರ್ಧಶತಕಗಳೊಂದಿಗೆ 127 ರನ್ ಕಲೆಹಾಕಿದ್ದಾರೆ. ಹಾಗೆಯೇ ಒಂದು ಟಿ20 ಪಂದ್ಯದಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಸರ್ಜರಿಗೆ ಒಳಗಾಗಿರುವ ಯುವ ದಾಂಡಿಗ ಐಪಿಎಲ್​ನಲ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 11, 2024 | 2:04 PM

ಭಾರತ ತಂಡದ ಯುವ ಬ್ಯಾಟರ್ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಸಾಯಿ ಇದೀಗ ವಿದೇಶದಲ್ಲಿ ಸರ್ಜರಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ತಂಡದ ಯುವ ಬ್ಯಾಟರ್ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಸಾಯಿ ಇದೀಗ ವಿದೇಶದಲ್ಲಿ ಸರ್ಜರಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇದಕ್ಕೂ ಮುನ್ನ ಸಾಯಿ ಸುದರ್ಶನ್ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಕಾಣಿಸಿಕೊಂಡಿದ್ದರು.

ಇದಕ್ಕೂ ಮುನ್ನ ಸಾಯಿ ಸುದರ್ಶನ್ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಕಾಣಿಸಿಕೊಂಡಿದ್ದರು.

2 / 5
ಇದಾಗ್ಯೂ ಉತ್ತಮ ಫಾರ್ಮ್​ನಲ್ಲಿದ್ದ ಸಾಯಿ ಸುದರ್ಶನ್ ಅವರನ್ನು ಪರ್ತ್​​ ಟೆಸ್ಟ್​​ನಿಂದ ಹೊರಗುಳಿದಿದ್ದ ಶುಭ್​​ಮನ್ ಗಿಲ್ ಅವರ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆ ಎಂದು ತಿಳಿದು ಬಂದಿದೆ.

ಇದಾಗ್ಯೂ ಉತ್ತಮ ಫಾರ್ಮ್​ನಲ್ಲಿದ್ದ ಸಾಯಿ ಸುದರ್ಶನ್ ಅವರನ್ನು ಪರ್ತ್​​ ಟೆಸ್ಟ್​​ನಿಂದ ಹೊರಗುಳಿದಿದ್ದ ಶುಭ್​​ಮನ್ ಗಿಲ್ ಅವರ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆ ಎಂದು ತಿಳಿದು ಬಂದಿದೆ.

3 / 5
ಹೀಗಾಗಿಯೇ ಆಸ್ಟ್ರೇಲಿಯಾದಿಂದ ಹಿಂತಿರುಗಿದ ಬಳಿಕ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಾಯಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ. ಎಲ್ಲಾ ರೀತಿಯ ಬೆಂಬಲಕ್ಕೆ ವೈದ್ಯಕೀಯ ತಂಡ ಹಾಗೂ ಬಿಸಿಸಿಐಗೆ ದೊಡ್ಡ ಧನ್ಯವಾದಗಳು. ಹಾಗೆಯೇ ಗುಜರಾತ್ ಟೈಟಾನ್ಸ್ ಫ್ಯಾಮಿಲಿಯ ಪ್ರೀತಿಗೆ ಮತ್ತು ಬೆಂಬಲಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಹೀಗಾಗಿಯೇ ಆಸ್ಟ್ರೇಲಿಯಾದಿಂದ ಹಿಂತಿರುಗಿದ ಬಳಿಕ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಾಯಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ. ಎಲ್ಲಾ ರೀತಿಯ ಬೆಂಬಲಕ್ಕೆ ವೈದ್ಯಕೀಯ ತಂಡ ಹಾಗೂ ಬಿಸಿಸಿಐಗೆ ದೊಡ್ಡ ಧನ್ಯವಾದಗಳು. ಹಾಗೆಯೇ ಗುಜರಾತ್ ಟೈಟಾನ್ಸ್ ಫ್ಯಾಮಿಲಿಯ ಪ್ರೀತಿಗೆ ಮತ್ತು ಬೆಂಬಲಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

4 / 5
ಅಂದಹಾಗೆ ಈ ಬಾರಿಯ ಐಪಿಎಲ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಫ್ರಾಂಚೈಸಿ ಯುವ ಎಡಗೈ ದಾಂಡಿಗನನ್ನು 8.5 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂಬರುವ ಐಪಿಎಲ್ ಸೀಸನ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಬ್ಯಾಟ್ ಬೀಸಲಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಫ್ರಾಂಚೈಸಿ ಯುವ ಎಡಗೈ ದಾಂಡಿಗನನ್ನು 8.5 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂಬರುವ ಐಪಿಎಲ್ ಸೀಸನ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಬ್ಯಾಟ್ ಬೀಸಲಿದ್ದಾರೆ.

5 / 5
Follow us
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!