AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15+5 … ಟೀಮ್ ಇಂಡಿಯಾಗೆ ಆಯ್ಕೆಯಾದ ಹೆಚ್ಚುವರಿ ಐದು ಆಟಗಾರರು ಇವರೇ

Asia Cup 2025 India Squad: ಏಷ್ಯಾಕಪ್​​ ಟೂರ್ನಿಗೆ 15 ಸದಸ್ಯರುಗಳ ಟೀಮ್ ಇಂಡಿಯಾ ಜೊತೆ 5 ಆಟಗಾರರನ್ನು ಹೆಸರಿಸಲಾಗಿದೆ. ಅಂದರೆ 15 ಸದಸ್ಯರುಗಳಲ್ಲಿ ಯಾರಾದರೂ ಗಾಯಗೊಂಡು ಅಥವಾ ಇನ್ನಿತರೆ ಕಾರಣಗಳಿಂದ ಹೊರಬಿದ್ದರೆ, ಅವರ ಸ್ಥಾನಕ್ಕೆ ಈ ಐದು ಆಟಗಾರರಿಂದ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. 

ಝಾಹಿರ್ ಯೂಸುಫ್
|

Updated on: Aug 20, 2025 | 8:09 AM

Share
ಬಹುನಿರೀಕ್ಷಿತ ಏಷ್ಯಾಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ಆಯ್ಕೆಯಾದರೆ, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು 15 ಸದಸ್ಯರುಗಳ ಜೊತೆಗೆ ಐವರು ಹೆಚ್ಚುವರಿ ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಆ ಆಟಗಾರರು ಯಾರೆಂದರೆ...

ಬಹುನಿರೀಕ್ಷಿತ ಏಷ್ಯಾಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ಆಯ್ಕೆಯಾದರೆ, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು 15 ಸದಸ್ಯರುಗಳ ಜೊತೆಗೆ ಐವರು ಹೆಚ್ಚುವರಿ ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಆ ಆಟಗಾರರು ಯಾರೆಂದರೆ...

1 / 7
ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗನಾಗಿ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್ ಈ ಬಾರಿ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಸ್ಥಾನ ಪಡೆದಿದ್ದು, ಹೀಗಾಗಿ ಜೈಸ್ವಾಲ್ ಅವರನ್ನು ಮೀಸಲು ಪಟ್ಟಿಯಲ್ಲಿರಿಸಲಾಗಿದೆ.

ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗನಾಗಿ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್ ಈ ಬಾರಿ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಸ್ಥಾನ ಪಡೆದಿದ್ದು, ಹೀಗಾಗಿ ಜೈಸ್ವಾಲ್ ಅವರನ್ನು ಮೀಸಲು ಪಟ್ಟಿಯಲ್ಲಿರಿಸಲಾಗಿದೆ.

2 / 7
ವಾಷಿಂಗ್ಟನ್ ಸುಂದರ್: ಏಷ್ಯಾಕಪ್​ಗೆ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಈ ಬಾರಿ ಮೀಸಲು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ,

ವಾಷಿಂಗ್ಟನ್ ಸುಂದರ್: ಏಷ್ಯಾಕಪ್​ಗೆ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಈ ಬಾರಿ ಮೀಸಲು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ,

3 / 7
ರಿಯಾನ್ ಪರಾಗ್: ಯುವ ಆಲ್​ರೌಂಡರ್ ರಿಯಾನ್ ಪರಾಗ್ ಅವರನ್ನು ಸಹ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಭಾರತದ ಪರ ಈಗಾಗಲೇ 9 ಟಿ20 ಪಂದ್ಯಗಳನ್ನಾಡಿರುವ ಪರಾಗ್ ಏಷ್ಯಾಕಪ್​ಗೆ ಹೆಚ್ಚುವರಿ ಆಲ್​ರೌಂಡರ್ ಆಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

ರಿಯಾನ್ ಪರಾಗ್: ಯುವ ಆಲ್​ರೌಂಡರ್ ರಿಯಾನ್ ಪರಾಗ್ ಅವರನ್ನು ಸಹ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಭಾರತದ ಪರ ಈಗಾಗಲೇ 9 ಟಿ20 ಪಂದ್ಯಗಳನ್ನಾಡಿರುವ ಪರಾಗ್ ಏಷ್ಯಾಕಪ್​ಗೆ ಹೆಚ್ಚುವರಿ ಆಲ್​ರೌಂಡರ್ ಆಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

4 / 7
ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ಪರ 5 ಟಿ20 ಪಂದ್ಯಗಳನ್ನಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 8 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಕರ್ನಾಟಕದ ವೇಗಿಗೆ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದು. ಹೀಗಾಗಿ ಪ್ರಸಿದ್ಧ್ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ಪರ 5 ಟಿ20 ಪಂದ್ಯಗಳನ್ನಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 8 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಕರ್ನಾಟಕದ ವೇಗಿಗೆ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದು. ಹೀಗಾಗಿ ಪ್ರಸಿದ್ಧ್ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

5 / 7
ಧ್ರುವ್ ಜುರೇಲ್: ಏಷ್ಯಾಕಪ್​ಗೆ ವಿಕೆಟ್​ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಆಯ್ಕೆಯಾಗಿದ್ದಾರೆ. ಹೀಗಾಗಿ ಧ್ರುವ್ ಜುರೇಲ್ ಅವರನ್ನು ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಸಂಜು ಅಥವಾ ಜಿತೇಶ್ ತಂಡದಿಂದ ಹೊರಬಿದ್ದರೆ ಧ್ರುವ್ ಜುರೇಲ್ 15 ಸದಸ್ಯರುಗಳ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ.

ಧ್ರುವ್ ಜುರೇಲ್: ಏಷ್ಯಾಕಪ್​ಗೆ ವಿಕೆಟ್​ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಆಯ್ಕೆಯಾಗಿದ್ದಾರೆ. ಹೀಗಾಗಿ ಧ್ರುವ್ ಜುರೇಲ್ ಅವರನ್ನು ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಸಂಜು ಅಥವಾ ಜಿತೇಶ್ ತಂಡದಿಂದ ಹೊರಬಿದ್ದರೆ ಧ್ರುವ್ ಜುರೇಲ್ 15 ಸದಸ್ಯರುಗಳ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ.

6 / 7
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

7 / 7
ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ