AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಟಾಪ್-5 ಬ್ಯಾಟರ್​ಗಳು ಫಿಕ್ಸ್

ASIA CUP 2025: ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ. ಏಷ್ಯನ್ ರಾಷ್ಟ್ರಗಳ ನಡುವಣ ಈ ಕ್ರಿಕೆಟ್ ಕದನಕ್ಕಾಗಿ ಯುವ ಪಡೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು, ಹೀಗಾಗಿ ಈ ಬಾರಿಯ ಟೀಮ್ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ಅವಕಾಶ ಸಿಗುವುದಿಲ್ಲ.

ಝಾಹಿರ್ ಯೂಸುಫ್
|

Updated on: Aug 12, 2025 | 8:24 AM

Share
ಬಹುನಿರೀಕ್ಷಿತ ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರೂಪಿಸುತ್ತಿದೆ. ಈ ತಂಡದಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯೊಂದು ಹೊರಬಿದ್ದಿದ್ದು, ಇವರಲ್ಲಿ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಇದಾಗ್ಯೂ ಏಷ್ಯಾಕಪ್​ ತಂಡದಲ್ಲಿ ಗಿಲ್​ಗೆ ಚಾನ್ಸ್​ ಸಿಗುವ ಸಾಧ್ಯತೆಯಿದೆ. ಆದರೆ ಯಶಸ್ವಿ ಜೈಸ್ವಾಲ್ ಬಗ್ಗೆ ಇನ್ನೂ ಸಹ ಖಚಿತ ಮಾಹಿತಿ ಹೊರಬಿದ್ದಿಲ್ಲ.

ಬಹುನಿರೀಕ್ಷಿತ ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರೂಪಿಸುತ್ತಿದೆ. ಈ ತಂಡದಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯೊಂದು ಹೊರಬಿದ್ದಿದ್ದು, ಇವರಲ್ಲಿ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಇದಾಗ್ಯೂ ಏಷ್ಯಾಕಪ್​ ತಂಡದಲ್ಲಿ ಗಿಲ್​ಗೆ ಚಾನ್ಸ್​ ಸಿಗುವ ಸಾಧ್ಯತೆಯಿದೆ. ಆದರೆ ಯಶಸ್ವಿ ಜೈಸ್ವಾಲ್ ಬಗ್ಗೆ ಇನ್ನೂ ಸಹ ಖಚಿತ ಮಾಹಿತಿ ಹೊರಬಿದ್ದಿಲ್ಲ.

1 / 6
ಇಲ್ಲಿ ಟಾಪ್-5 ನಲ್ಲಿ ಆರಂಭಿಕನಾಗಿ ಕಾಣಿಸಿಕೊಂಡಿರುವುದು ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ. ಹಾಗೆಯೇ ಮತ್ತೋರ್ವ ಆರಂಭಿಕನಾಗಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್​ನಲ್ಲೂ ಸಂಜು ಸ್ಯಾಮ್ಸನ್-ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇಲ್ಲಿ ಟಾಪ್-5 ನಲ್ಲಿ ಆರಂಭಿಕನಾಗಿ ಕಾಣಿಸಿಕೊಂಡಿರುವುದು ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ. ಹಾಗೆಯೇ ಮತ್ತೋರ್ವ ಆರಂಭಿಕನಾಗಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್​ನಲ್ಲೂ ಸಂಜು ಸ್ಯಾಮ್ಸನ್-ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

2 / 6
ಇನ್ನು ಮೂರನೇ ಕ್ರಮಾಂಕದಲ್ಲಿ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ತಿಲಕ್ ವರ್ಮಾ ಅವರನ್ನು ಏಷ್ಯಾಕಪ್​ನಲ್ಲೂ ಒನ್​ ಡೌನ್​ನಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ತಿಲಕ್ ವರ್ಮಾ ಅವರನ್ನು ಏಷ್ಯಾಕಪ್​ನಲ್ಲೂ ಒನ್​ ಡೌನ್​ನಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

3 / 6
ಹಾಗೆಯೇ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಕಳೆದ ಕೆಲ ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದ ಸೂರ್ಯಕುಮಾರ್ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದಾರೆ. ಅಲ್ಲದೆ ಬ್ಯಾಟಿಂಗ್ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಹೀಗಾಗಿ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುವುದು ಖಚಿತ.

ಹಾಗೆಯೇ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಕಳೆದ ಕೆಲ ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದ ಸೂರ್ಯಕುಮಾರ್ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದಾರೆ. ಅಲ್ಲದೆ ಬ್ಯಾಟಿಂಗ್ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಹೀಗಾಗಿ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುವುದು ಖಚಿತ.

4 / 6
ಇನ್ನು ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕಾಣಿಸಿಕೊಂಡಿದೆ. ವೇಗದ ಬೌಲಿಂಗ್ ಆಲ್​​ರೌಂಡರ್ ಸ್ಥಾನದಲ್ಲಿ ಪಾಂಡ್ಯ ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಖಚಿತ. ಈ ಮೂಲಕ ಬಲಿಷ್ಠ ಬ್ಯಾಟರ್​ಗಳೊಂದಿಗೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನು ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕಾಣಿಸಿಕೊಂಡಿದೆ. ವೇಗದ ಬೌಲಿಂಗ್ ಆಲ್​​ರೌಂಡರ್ ಸ್ಥಾನದಲ್ಲಿ ಪಾಂಡ್ಯ ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಖಚಿತ. ಈ ಮೂಲಕ ಬಲಿಷ್ಠ ಬ್ಯಾಟರ್​ಗಳೊಂದಿಗೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂದು ಪಿಟಿಐ ವರದಿ ಮಾಡಿದೆ.

5 / 6
ಒಂದು ವೇಳೆ ಶುಭ್​ಮನ್ ಗಿಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರಂಭಿಕ ದಾಂಡಿಗರನ್ನು ಬದಲಿಸಬೇಕಾಗುತ್ತದೆ. ಅಂದರೆ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಗಿಲ್ ಅವರನ್ನು ಓಪನರ್ ಆಗಿ ಆಡಿಸಬೇಕಾಗುತ್ತದೆ. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಹೇಗಿರಲಿದೆ ಎಂಬುದೇ ಈಗ ಕುತೂಹಲ.

ಒಂದು ವೇಳೆ ಶುಭ್​ಮನ್ ಗಿಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರಂಭಿಕ ದಾಂಡಿಗರನ್ನು ಬದಲಿಸಬೇಕಾಗುತ್ತದೆ. ಅಂದರೆ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಗಿಲ್ ಅವರನ್ನು ಓಪನರ್ ಆಗಿ ಆಡಿಸಬೇಕಾಗುತ್ತದೆ. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಹೇಗಿರಲಿದೆ ಎಂಬುದೇ ಈಗ ಕುತೂಹಲ.

6 / 6
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ