AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಓರ್ವ ಆಟಗಾರ ಡೌಟ್: ಇಬ್ಬರ ನಡುವೆ ಪೈಪೋಟಿ

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈಗಾಗಲೇ ಭಾರತ ತಂಡವು 15 ಸದಸ್ಯರುಗಳ ಬಲಿಷ್ಠ ಪಡೆಯನ್ನು ರೂಪಿಸಿದ್ದು, ಈ ತಂಡದಿಂದ ಓರ್ವ ಆಟಗಾರ ಹೊರಗುಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 27, 2026 | 11:53 AM

Share
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರಕ್ಕೆ ಈಗಾಗಲೇ ಎಲ್ಲಾ ತಂಡಗಳು ಸಜ್ಜಾಗಿವೆ. ಈ ಸಜ್ಜಾಗುವಿಕೆಯ ನಡುವೆ ಟೀಮ್ ಇಂಡಿಯಾ ಆಟಗಾರನೋರ್ವ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರಕ್ಕೆ ಈಗಾಗಲೇ ಎಲ್ಲಾ ತಂಡಗಳು ಸಜ್ಜಾಗಿವೆ. ಈ ಸಜ್ಜಾಗುವಿಕೆಯ ನಡುವೆ ಟೀಮ್ ಇಂಡಿಯಾ ಆಟಗಾರನೋರ್ವ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

1 / 5
ಭಾರತ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದರು. ಆದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಅವರು ಗಾಯಗೊಂಡಿದ್ದರು. ಎಡ ಪೆಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದ ಕಾರಣ ಅವರು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದರು. ಆದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಅವರು ಗಾಯಗೊಂಡಿದ್ದರು. ಎಡ ಪೆಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದ ಕಾರಣ ಅವರು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

2 / 5
ಇನ್ನು ಟಿ20 ವಿಶ್ವಕಪ್​ಗೆ ಉಳಿದಿರುವುದು ಕೆಲ ದಿನಗಳು ಮಾತ್ರ. ಇದಾಗ್ಯೂ ವಾಷಿಂಗ್ಟನ್ ಸುಂದರ್ ಸಂಪೂರ್ಣ ಫಿಟ್​ ಆಗಿರುವ ವರದಿ ಬಂದಿಲ್ಲ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇನ್ನು ಟಿ20 ವಿಶ್ವಕಪ್​ಗೆ ಉಳಿದಿರುವುದು ಕೆಲ ದಿನಗಳು ಮಾತ್ರ. ಇದಾಗ್ಯೂ ವಾಷಿಂಗ್ಟನ್ ಸುಂದರ್ ಸಂಪೂರ್ಣ ಫಿಟ್​ ಆಗಿರುವ ವರದಿ ಬಂದಿಲ್ಲ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

3 / 5
ಇತ್ತ ವಾಷಿಂಗ್ಟನ್ ಸುಂದರ್​ ಹೊರಗುಳಿದರೆ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಿಯಾನ್ ಪರಾಗ್ ಅಥವಾ ರವಿ ಬಿಷ್ಣೋಯ್. ಸುಂದರ್​ ಬದಲಿಗೆ ಸ್ಪಿನ್ನರ್​ನನ್ನು ಆಯ್ಕೆ ಮಾಡಲು ಮುಂದಾದರೆ ರವಿ ಬಿಷ್ಣೋಯ್​ಗೆ ಚಾನ್ಸ್ ಸಿಗಲಿದೆ. ಇನ್ನು ಆಲ್​ರೌಂಡರ್​ ಆಯ್ಕೆಗೆ ಮುಂದಾದರೆ ರಿಯಾನ್ ಪರಾಗ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ. 

ಇತ್ತ ವಾಷಿಂಗ್ಟನ್ ಸುಂದರ್​ ಹೊರಗುಳಿದರೆ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಿಯಾನ್ ಪರಾಗ್ ಅಥವಾ ರವಿ ಬಿಷ್ಣೋಯ್. ಸುಂದರ್​ ಬದಲಿಗೆ ಸ್ಪಿನ್ನರ್​ನನ್ನು ಆಯ್ಕೆ ಮಾಡಲು ಮುಂದಾದರೆ ರವಿ ಬಿಷ್ಣೋಯ್​ಗೆ ಚಾನ್ಸ್ ಸಿಗಲಿದೆ. ಇನ್ನು ಆಲ್​ರೌಂಡರ್​ ಆಯ್ಕೆಗೆ ಮುಂದಾದರೆ ರಿಯಾನ್ ಪರಾಗ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ. 

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ (ಅನುಮಾನ).

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ (ಅನುಮಾನ).

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ