AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದಲಿಲ್ಲ ಸ್ಥಾನ; ವಿದೇಶಿ ತಂಡಕ್ಕೆ ಪಾದಾರ್ಪಣೆ ಮಾಡಲಿದ್ದಾನೆ ಸ್ಟಾರ್ ಆಲ್‌ರೌಂಡರ್

Washington Sundar Joins Hampshire: ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗಿರುವ ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನ ಕೊನೆಯ ಎರಡು ಸುತ್ತುಗಳಲ್ಲಿ ಹ್ಯಾಂಪ್‌ಶೈರ್ ಪರ ಆಡಲಿದ್ದಾರೆ. ಇತ್ತೀಚಿನ ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸುಂದರ್, 2022 ರ ನಂತರ ಮತ್ತೆ ಕೌಂಟಿ ಕ್ರಿಕೆಟ್‌ಗೆ ಮರಳಿದ್ದಾರೆ.

ಪೃಥ್ವಿಶಂಕರ
|

Updated on: Sep 11, 2025 | 5:29 PM

Share
ಟೀಂ ಇಂಡಿಯಾ ಪ್ರಸ್ತುತ ಯುಎಇಯಲ್ಲಿ ಏಷ್ಯಾಕಪ್ ಆಡುತ್ತಿದೆ. ಈ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿರುವ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿಯೇ ಆತಿಥೇಯ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಇದೆಲ್ಲದರ ನಡುವೆ, ಟೀಂ ಇಂಡಿಯಾದ ಆಟಗಾರನೊಬ್ಬ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ.

ಟೀಂ ಇಂಡಿಯಾ ಪ್ರಸ್ತುತ ಯುಎಇಯಲ್ಲಿ ಏಷ್ಯಾಕಪ್ ಆಡುತ್ತಿದೆ. ಈ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿರುವ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿಯೇ ಆತಿಥೇಯ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಇದೆಲ್ಲದರ ನಡುವೆ, ಟೀಂ ಇಂಡಿಯಾದ ಆಟಗಾರನೊಬ್ಬ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ.

1 / 6
ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನ ಕೊನೆಯ ಎರಡು ಸುತ್ತುಗಳಲ್ಲಿ ಹ್ಯಾಂಪ್‌ಶೈರ್ ಪರ ಆಡಲಿದ್ದಾರೆ. ಹ್ಯಾಂಪ್‌ಶೈರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದೆ.

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನ ಕೊನೆಯ ಎರಡು ಸುತ್ತುಗಳಲ್ಲಿ ಹ್ಯಾಂಪ್‌ಶೈರ್ ಪರ ಆಡಲಿದ್ದಾರೆ. ಹ್ಯಾಂಪ್‌ಶೈರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದೆ.

2 / 6
ಹ್ಯಾಂಪ್‌ಶೈರ್ ಸೆಪ್ಟೆಂಬರ್ 15 ರಿಂದ 18 ರವರೆಗೆ ಟೌಂಟನ್‌ನ ಕೂಪರ್ ಅಸೋಸಿಯೇಟ್ಸ್ ಕೌಂಟಿ ಮೈದಾನದಲ್ಲಿ ಸೋಮರ್‌ಸೆಟ್ ತಂಡವನ್ನು ಎದುರಿಸಲಿದೆ, ನಂತರ ಸೆಪ್ಟೆಂಬರ್ 24 ರಿಂದ 27 ರವರೆಗೆ ಯುಟಿಲಿಟಾ ಬೌಲ್‌ನಲ್ಲಿ ಹಾಲಿ ಚಾಂಪಿಯನ್ ಸರ್ರೆ ತಂಡವನ್ನು ಎದುರಿಸಲಿದೆ. ಸುಂದರ್ ಈ ಎರಡೂ ಪಂದ್ಯಗಳ ಭಾಗವಾಗಿರಲಿದ್ದಾರೆ.

ಹ್ಯಾಂಪ್‌ಶೈರ್ ಸೆಪ್ಟೆಂಬರ್ 15 ರಿಂದ 18 ರವರೆಗೆ ಟೌಂಟನ್‌ನ ಕೂಪರ್ ಅಸೋಸಿಯೇಟ್ಸ್ ಕೌಂಟಿ ಮೈದಾನದಲ್ಲಿ ಸೋಮರ್‌ಸೆಟ್ ತಂಡವನ್ನು ಎದುರಿಸಲಿದೆ, ನಂತರ ಸೆಪ್ಟೆಂಬರ್ 24 ರಿಂದ 27 ರವರೆಗೆ ಯುಟಿಲಿಟಾ ಬೌಲ್‌ನಲ್ಲಿ ಹಾಲಿ ಚಾಂಪಿಯನ್ ಸರ್ರೆ ತಂಡವನ್ನು ಎದುರಿಸಲಿದೆ. ಸುಂದರ್ ಈ ಎರಡೂ ಪಂದ್ಯಗಳ ಭಾಗವಾಗಿರಲಿದ್ದಾರೆ.

3 / 6
ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದರು. ಈ ಪ್ರವಾಸದಲ್ಲಿ ಅವರು 47 ಸರಾಸರಿಯಲ್ಲಿ 284 ರನ್ ಗಳಿಸಿದರು, ಇದರಲ್ಲಿ ಓಲ್ಡ್ ಟ್ರಾಫರ್ಡ್‌ನಲ್ಲಿ ಅವರ ಮೊದಲ ಶತಕವೂ ಸೇರಿತ್ತು. ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಸುಂದರ್ ಕಮಾಲ್ ಮಾಡಿದ್ದರು.

ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದರು. ಈ ಪ್ರವಾಸದಲ್ಲಿ ಅವರು 47 ಸರಾಸರಿಯಲ್ಲಿ 284 ರನ್ ಗಳಿಸಿದರು, ಇದರಲ್ಲಿ ಓಲ್ಡ್ ಟ್ರಾಫರ್ಡ್‌ನಲ್ಲಿ ಅವರ ಮೊದಲ ಶತಕವೂ ಸೇರಿತ್ತು. ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಸುಂದರ್ ಕಮಾಲ್ ಮಾಡಿದ್ದರು.

4 / 6
2022 ರ ನಂತರ ಸುಂದರ್ ಕೌಂಟಿ ಕ್ರಿಕೆಟ್ ಆಡುತ್ತಿರುವುದು ಇದೇ ಮೊದಲು. ಇದಕ್ಕೂ ಮೊದಲು ಅವರು ಕೌಂಟಿ ಚಾಂಪಿಯನ್‌ಶಿಪ್ ಮತ್ತು ಏಕದಿನ ಕಪ್‌ನಲ್ಲಿ ಲಂಕಾಷೈರ್ ತಂಡವನ್ನು ಪ್ರತಿನಿಧಿಸಿದ್ದರು. ನಾರ್ಥಾಂಪ್ಟನ್‌ಶೈರ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿ ಅವರು ಐದು ವಿಕೆಟ್‌ಗಳನ್ನು ಸಹ ಕಬಳಿಸಿದ್ದರು.

2022 ರ ನಂತರ ಸುಂದರ್ ಕೌಂಟಿ ಕ್ರಿಕೆಟ್ ಆಡುತ್ತಿರುವುದು ಇದೇ ಮೊದಲು. ಇದಕ್ಕೂ ಮೊದಲು ಅವರು ಕೌಂಟಿ ಚಾಂಪಿಯನ್‌ಶಿಪ್ ಮತ್ತು ಏಕದಿನ ಕಪ್‌ನಲ್ಲಿ ಲಂಕಾಷೈರ್ ತಂಡವನ್ನು ಪ್ರತಿನಿಧಿಸಿದ್ದರು. ನಾರ್ಥಾಂಪ್ಟನ್‌ಶೈರ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿ ಅವರು ಐದು ವಿಕೆಟ್‌ಗಳನ್ನು ಸಹ ಕಬಳಿಸಿದ್ದರು.

5 / 6
ವಾಷಿಂಗ್ಟನ್ ಸುಂದರ್ ಇದುವರೆಗೆ 13 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, 44.2 ಸರಾಸರಿಯಲ್ಲಿ 752 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಸೇರಿವೆ. ಹಾಗೆಯೇ ಬೌಲಿಂಗ್​ನಲ್ಲಿ 28.5 ಸರಾಸರಿಯಲ್ಲಿ 32 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಇದರಲ್ಲಿ ಮೂರು ಬಾರಿ 4 ವಿಕೆಟ್‌ಗಳು ಮತ್ತು ಒಮ್ಮೆ ಐದು ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ.

ವಾಷಿಂಗ್ಟನ್ ಸುಂದರ್ ಇದುವರೆಗೆ 13 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, 44.2 ಸರಾಸರಿಯಲ್ಲಿ 752 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಸೇರಿವೆ. ಹಾಗೆಯೇ ಬೌಲಿಂಗ್​ನಲ್ಲಿ 28.5 ಸರಾಸರಿಯಲ್ಲಿ 32 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಇದರಲ್ಲಿ ಮೂರು ಬಾರಿ 4 ವಿಕೆಟ್‌ಗಳು ಮತ್ತು ಒಮ್ಮೆ ಐದು ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!