AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಉಲ್ಟಾ ಪಲ್ಟಾ..!

WTC Final Qualification Scenarios: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತ ತಂಡಕ್ಕೆ ಇನ್ನೂ ಐದು ಪಂದ್ಯಗಳಿವೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 4-0 ಅಂತರದಿಂದ ಗೆಲ್ಲಬೇಕು. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಒಂದೇ ಒಂದು ಸೋಲು ಕಾಣಬಾರದು.

TV9 Web
| Edited By: |

Updated on: Nov 03, 2024 | 5:04 PM

Share
ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

1 / 6
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

3 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

4 / 6
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

5 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024):  1-ಆಸ್ಟ್ರೇಲಿಯಾ,  2-ಭಾರತ,  3-ಶ್ರೀಲಂಕಾ,  4-ನ್ಯೂಝಿಲೆಂಡ್,  5-ಸೌತ್ ಆಫ್ರಿಕಾ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024): 1-ಆಸ್ಟ್ರೇಲಿಯಾ, 2-ಭಾರತ, 3-ಶ್ರೀಲಂಕಾ, 4-ನ್ಯೂಝಿಲೆಂಡ್, 5-ಸೌತ್ ಆಫ್ರಿಕಾ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ