AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಉಲ್ಟಾ ಪಲ್ಟಾ..!

WTC Final Qualification Scenarios: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತ ತಂಡಕ್ಕೆ ಇನ್ನೂ ಐದು ಪಂದ್ಯಗಳಿವೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 4-0 ಅಂತರದಿಂದ ಗೆಲ್ಲಬೇಕು. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಒಂದೇ ಒಂದು ಸೋಲು ಕಾಣಬಾರದು.

TV9 Web
| Updated By: ಝಾಹಿರ್ ಯೂಸುಫ್

Updated on: Nov 03, 2024 | 5:04 PM

ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

1 / 6
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

3 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

4 / 6
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

5 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024):  1-ಆಸ್ಟ್ರೇಲಿಯಾ,  2-ಭಾರತ,  3-ಶ್ರೀಲಂಕಾ,  4-ನ್ಯೂಝಿಲೆಂಡ್,  5-ಸೌತ್ ಆಫ್ರಿಕಾ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024): 1-ಆಸ್ಟ್ರೇಲಿಯಾ, 2-ಭಾರತ, 3-ಶ್ರೀಲಂಕಾ, 4-ನ್ಯೂಝಿಲೆಂಡ್, 5-ಸೌತ್ ಆಫ್ರಿಕಾ.

6 / 6
Follow us
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ