AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಆದರೆ ಭಾರತ ತಂಡದ ಪಂದ್ಯಗಳಿಗೆ ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದೇ ಈಗ ಹೊಸ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಈ ಮೈದಾನದಲ್ಲಿ ಗೆಲ್ಲಬೇಕಿದ್ದರೆ ಅದೃಷ್ಟ ಕೂಡ ಕೈ ಹಿಡಿಯಬೇಕಾಗುತ್ತದೆ.

ಝಾಹಿರ್ ಯೂಸುಫ್
|

Updated on: Dec 25, 2024 | 6:30 AM

Share
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 8 ತಂಡಗಳ ನಡುವಣ ಈ ಕದನವು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 8 ತಂಡಗಳ ನಡುವಣ ಈ ಕದನವು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಹಾಗೆಯೇ ಟೀಮ್ ಇಂಡಿಯಾ ಫೆಬ್ರವರಿ 20 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಹಾಗೆಯೇ ಟೀಮ್ ಇಂಡಿಯಾ ಫೆಬ್ರವರಿ 20 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 7
ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ.

ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ.

3 / 7
ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ.

ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ.

4 / 7
ಅತ್ತ ಭಾರತ ತಂಡವು ದುಬೈನಲ್ಲಿ ಪಂದ್ಯವಾಡಬೇಕಿರುವುದೇ ಈಗ ದೊಡ್ಡ ಚಿಂತೆ. ಏಕೆಂದರೆ ದುಬೈ ಸ್ಟೇಡಿಯಂನಲ್ಲಿ ಟಾಸ್ ನಿರ್ಣಾಯಕ. ಈ ಮೈದಾನದಲ್ಲಿ ಟಾಸ್ ಗೆಲ್ಲುವ ತಂಡ ಮ್ಯಾಚ್ ಗೆಲ್ತಾರೆ ಎಂಬ ಪ್ರತೀತಿ ಇದೆ. ಇದನ್ನೇ ಅಂಕಿ ಅಂಶಗಳು ಕೂಡ ಒತ್ತಿ ಹೇಳುತ್ತಿವೆ. ಇಲ್ಲಿ ಆಡಲಾದ 33 ಏಕದಿನ ಪಂದ್ಯಗಳಲ್ಲಿ 20 ಮ್ಯಾಚ್​ಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿದ ತಂಡವೇ ಗೆದ್ದಿದೆ. ಇನ್ನು ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 12 ಬಾರಿ ಮಾತ್ರ.

ಅತ್ತ ಭಾರತ ತಂಡವು ದುಬೈನಲ್ಲಿ ಪಂದ್ಯವಾಡಬೇಕಿರುವುದೇ ಈಗ ದೊಡ್ಡ ಚಿಂತೆ. ಏಕೆಂದರೆ ದುಬೈ ಸ್ಟೇಡಿಯಂನಲ್ಲಿ ಟಾಸ್ ನಿರ್ಣಾಯಕ. ಈ ಮೈದಾನದಲ್ಲಿ ಟಾಸ್ ಗೆಲ್ಲುವ ತಂಡ ಮ್ಯಾಚ್ ಗೆಲ್ತಾರೆ ಎಂಬ ಪ್ರತೀತಿ ಇದೆ. ಇದನ್ನೇ ಅಂಕಿ ಅಂಶಗಳು ಕೂಡ ಒತ್ತಿ ಹೇಳುತ್ತಿವೆ. ಇಲ್ಲಿ ಆಡಲಾದ 33 ಏಕದಿನ ಪಂದ್ಯಗಳಲ್ಲಿ 20 ಮ್ಯಾಚ್​ಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿದ ತಂಡವೇ ಗೆದ್ದಿದೆ. ಇನ್ನು ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 12 ಬಾರಿ ಮಾತ್ರ.

5 / 7
ನಿಮಗೆ ನೆನಪಿರುವಂತೆ, ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ವಿರುದ್ಧ ಸೋತಿರುವುದು ಕೇವಲ ಒಮ್ಮೆ ಮಾತ್ರ. ಅದು ಕೂಡ ಇದೇ ಮೈದಾನದಲ್ಲಿ ಎಂಬುದು ಉಲ್ಲೇಖಾರ್ಹ. 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನೀಡಿದ 152 ರನ್​ಗಳ ಗುರಿಯನ್ನು ಪಾಕಿಸ್ತಾನ್ ವಿಕೆಟ್ ನಷ್ಟವಿಲ್ಲದೆ ಚೇಸ್ ಮಾಡಿತ್ತು. ಅಂದು ಪಾಕ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಇದೇ ಟೂರ್ನಿಯಲ್ಲಿ ನ್ಯೂಝಿಲೆಂಡ್ ಕೂಡ ಟೀಮ್ ಇಂಡಿಯಾವನ್ನು ಸೋಲಿಸಿತ್ತು.

ನಿಮಗೆ ನೆನಪಿರುವಂತೆ, ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ವಿರುದ್ಧ ಸೋತಿರುವುದು ಕೇವಲ ಒಮ್ಮೆ ಮಾತ್ರ. ಅದು ಕೂಡ ಇದೇ ಮೈದಾನದಲ್ಲಿ ಎಂಬುದು ಉಲ್ಲೇಖಾರ್ಹ. 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನೀಡಿದ 152 ರನ್​ಗಳ ಗುರಿಯನ್ನು ಪಾಕಿಸ್ತಾನ್ ವಿಕೆಟ್ ನಷ್ಟವಿಲ್ಲದೆ ಚೇಸ್ ಮಾಡಿತ್ತು. ಅಂದು ಪಾಕ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಇದೇ ಟೂರ್ನಿಯಲ್ಲಿ ನ್ಯೂಝಿಲೆಂಡ್ ಕೂಡ ಟೀಮ್ ಇಂಡಿಯಾವನ್ನು ಸೋಲಿಸಿತ್ತು.

6 / 7
ಅಂದರೆ ದುಬೈನಲ್ಲಿ ನಡೆದ 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಟಾಸ್ ಸೋತ ಪಂದ್ಯಗಳಲ್ಲಿ ಮುಗ್ಗರಿಸಿತ್ತು. ಅಲ್ಲದೆ ಈ ಮೈದಾನದಲ್ಲಿ ಕಣಕ್ಕಿಳಿದ ಬಹುತೇಕ ತಂಡಗಳು ಚೇಸಿಂಗ್​ ಮೂಲಕ ಗೆಲುವು ದಾಖಲಿಸಿದ ಇತಿಹಾಸವೇ ಇದೆ. ಹೀಗಾಗಿ ಈ ಬಾರಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಿದ್ದರೆ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿರುವುದು ಸ್ಪಷ್ಟ.

ಅಂದರೆ ದುಬೈನಲ್ಲಿ ನಡೆದ 2021ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಟಾಸ್ ಸೋತ ಪಂದ್ಯಗಳಲ್ಲಿ ಮುಗ್ಗರಿಸಿತ್ತು. ಅಲ್ಲದೆ ಈ ಮೈದಾನದಲ್ಲಿ ಕಣಕ್ಕಿಳಿದ ಬಹುತೇಕ ತಂಡಗಳು ಚೇಸಿಂಗ್​ ಮೂಲಕ ಗೆಲುವು ದಾಖಲಿಸಿದ ಇತಿಹಾಸವೇ ಇದೆ. ಹೀಗಾಗಿ ಈ ಬಾರಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಿದ್ದರೆ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿರುವುದು ಸ್ಪಷ್ಟ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!