AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೋಲಿನ ಬೆನ್ನಲ್ಲೇ ಭಾರತದಿಂದ ಕಾಲ್ಕಿತ್ತ ಇಂಗ್ಲೆಂಡ್ ತಂಡ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಅಂದರೆ ಮೂರನೇ ಪಂದ್ಯಕ್ಕಾಗಿ ಇನ್ನೂ 10 ದಿನಗಳ ಸಮಯವಕಾಶವಿದೆ. ಇದಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ಈ ವಿಶ್ರಾಂತಿಯ ಭಾಗವಾಗಿ ಇದೀಗ ಇಂಗ್ಲೆಂಡ್ ಆಟಗಾರರು ಭಾರತ ತೊರೆದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 06, 2024 | 8:54 AM

Share
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10 ದಿನಗಳ ಅವಕಾಶವಿದೆ. ಇದಕ್ಕೂ ಮುಂಚಿತವಾಗಿ ಅಬುಧಾಬಿಯಲ್ಲಿ ಸಮಯ ಕಳೆಯಲು ಇಂಗ್ಲೆಂಡ್ ತಂಡ ನಿರ್ಧರಿಸಿದೆ.

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10 ದಿನಗಳ ಅವಕಾಶವಿದೆ. ಇದಕ್ಕೂ ಮುಂಚಿತವಾಗಿ ಅಬುಧಾಬಿಯಲ್ಲಿ ಸಮಯ ಕಳೆಯಲು ಇಂಗ್ಲೆಂಡ್ ತಂಡ ನಿರ್ಧರಿಸಿದೆ.

1 / 6
ಇದಕ್ಕೂ ಮುನ್ನ ಅಬುಧಾಬಿಯಲ್ಲಿ ತರಬೇತಿ ಶಿಬಿರ ಮುಗಿಸಿ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್‌ಗೂ ಮೂರು ದಿನಗಳ ಮೊದಲು ಭಾರತಕ್ಕೆ ಆಗಮಿಸಿತ್ತು. ಇದೀಗ ಮತ್ತೊಮ್ಮೆ ಅಬುಧಾಬಿಗೆ ತೆರಳಿರುವ ಇಂಗ್ಲೆಂಡ್ ಅಲ್ಲೇ ಕಿರು ಶಿಬಿರ ನಡೆಸಲಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು-ಮೂರು ದಿನಗಳ ಮೊದಲು ಭಾರತಕ್ಕೆ ಹಿಂತಿರುಗುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ಅಬುಧಾಬಿಯಲ್ಲಿ ತರಬೇತಿ ಶಿಬಿರ ಮುಗಿಸಿ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್‌ಗೂ ಮೂರು ದಿನಗಳ ಮೊದಲು ಭಾರತಕ್ಕೆ ಆಗಮಿಸಿತ್ತು. ಇದೀಗ ಮತ್ತೊಮ್ಮೆ ಅಬುಧಾಬಿಗೆ ತೆರಳಿರುವ ಇಂಗ್ಲೆಂಡ್ ಅಲ್ಲೇ ಕಿರು ಶಿಬಿರ ನಡೆಸಲಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು-ಮೂರು ದಿನಗಳ ಮೊದಲು ಭಾರತಕ್ಕೆ ಹಿಂತಿರುಗುವ ಸಾಧ್ಯತೆಯಿದೆ.

2 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೂ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸರಣಿ 1-1 ಅಂತರದಿಂದ ಸಮಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಮುನ್ನಡೆ ಸಾಧಿಸಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೂ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸರಣಿ 1-1 ಅಂತರದಿಂದ ಸಮಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಮುನ್ನಡೆ ಸಾಧಿಸಲಿದೆ.

3 / 6
ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು. ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 106 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದೇ ಕುತೂಹಲ.

ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು. ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 106 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದೇ ಕುತೂಹಲ.

4 / 6
ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಹಿರಿಯ ಸ್ಪಿನ್ನರ್ ಜ್ಯಾಕ್ ಲೀಚ್ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಲೀಚ್ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಹಿರಿಯ ಸ್ಪಿನ್ನರ್ ಜ್ಯಾಕ್ ಲೀಚ್ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಲೀಚ್ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

5 / 6
ಇತ್ತ ತೊಡೆಸಂಧು ನೋವಿನ ಕಾರಣ ದ್ವಿತೀಯ ಟೆಸ್ಟ್ ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ 3ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಹೀಗಾಗಿ ಮೂರನೇ ಪಂದ್ಯದಲ್ಲೂ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇತ್ತ ತೊಡೆಸಂಧು ನೋವಿನ ಕಾರಣ ದ್ವಿತೀಯ ಟೆಸ್ಟ್ ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ 3ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಹೀಗಾಗಿ ಮೂರನೇ ಪಂದ್ಯದಲ್ಲೂ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 6
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್