AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಯುವ ಆರಂಭಿಕ ಆಟಗಾರನ ಅಬ್ಬರ: ಕೆಎಲ್ ರಾಹುಲ್​ಗೆ ನಡುಕ ಶುರು..!

Team India: 2023ರ ಏಕದಿನ ವಿಶ್ವಕಪ್​ಗೆ ಇನ್ನು ತಿಂಗಳುಗಳು ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ರೂಪಿಸಿ ವರ್ಲ್ಡ್​ಕಪ್​​ಗಾಗಿ ಭರ್ಜರಿ ತಯಾರಿ ನಡೆಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Updated By: ಝಾಹಿರ್ ಯೂಸುಫ್|

Updated on: Nov 27, 2022 | 7:30 PM

Share
ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೊರಬೀಳುತ್ತಿದ್ದಂತೆ ಆರಂಭಿಕರ ಬಗ್ಗೆ ಅಪವಾದಗಳು ಕೇಳಿ ಬಂದಿದ್ದವು. ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಳಪೆ ಆರಂಭ ನೀಡಿದ್ದೇ ತಂಡದ ಸೋಲಿಗೆ ಕಾರಣ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಕೆಲ ಮಾಜಿ ಆಟಗಾರರು ಕೂಡ ಆರಂಭಿಕರ ಬದಲಾವಣೆ ಬಗ್ಗೆ ಸಲಹೆಗಳನ್ನು ನೀಡಿದ್ದರು. ಇದೀಗ ಟೀಮ್ ಇಂಡಿಯಾದ ಹೊಸ ಆಯ್ಕೆ ಸಮಿತಿ ಯುವ ಆಟಗಾರರಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹೊರಬೀಳುತ್ತಿದ್ದಂತೆ ಆರಂಭಿಕರ ಬಗ್ಗೆ ಅಪವಾದಗಳು ಕೇಳಿ ಬಂದಿದ್ದವು. ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಳಪೆ ಆರಂಭ ನೀಡಿದ್ದೇ ತಂಡದ ಸೋಲಿಗೆ ಕಾರಣ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಕೆಲ ಮಾಜಿ ಆಟಗಾರರು ಕೂಡ ಆರಂಭಿಕರ ಬದಲಾವಣೆ ಬಗ್ಗೆ ಸಲಹೆಗಳನ್ನು ನೀಡಿದ್ದರು. ಇದೀಗ ಟೀಮ್ ಇಂಡಿಯಾದ ಹೊಸ ಆಯ್ಕೆ ಸಮಿತಿ ಯುವ ಆಟಗಾರರಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.

1 / 7
ಏಕೆಂದರೆ ತಂಡದಲ್ಲಿರುವ ಕೆಲ ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ಮುಂಬರುವ ಏಕದಿನ ವಿಶ್ವಕಪ್​ಗಾಗಿ ಹೊಸ ಆರಂಭಿಕರನ್ನು ರೂಪಿಸಲು ಆಸಕ್ತಿ ಹೊಂದಲಿದ್ದಾರೆ. ಹೀಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆಯ ಗಾಳಿ ಬೀಸಿದರೆ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ.

ಏಕೆಂದರೆ ತಂಡದಲ್ಲಿರುವ ಕೆಲ ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ಮುಂಬರುವ ಏಕದಿನ ವಿಶ್ವಕಪ್​ಗಾಗಿ ಹೊಸ ಆರಂಭಿಕರನ್ನು ರೂಪಿಸಲು ಆಸಕ್ತಿ ಹೊಂದಲಿದ್ದಾರೆ. ಹೀಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆಯ ಗಾಳಿ ಬೀಸಿದರೆ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ.

2 / 7
ಏಕೆಂದರೆ ಟೀಮ್ ಇಂಡಿಯಾದ ಆರಂಭಿಕರ ರೇಸ್​ನಲ್ಲಿ ಇತ್ತ ಯುವ ಓಪನರ್ ಶುಭ್​ಮನ್ ಗಿಲ್ ಇದ್ದಾರೆ. ಕೆಎಲ್ ರಾಹುಲ್​ ವಿಶ್ರಾಂತಿಯಲ್ಲಿದ್ದಾಗ ಅವಕಾಶ ಪಡೆಯುವ ಗಿಲ್ ಚಾನ್ಸ್​ ಸಿಕ್ಕಾಗೆಲ್ಲಾ  ತಮ್ಮ ಛಾಪು ಮೂಡಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಗಿಲ್ ಅವರ ಅಂಕಿ ಅಂಶಗಳು.

ಏಕೆಂದರೆ ಟೀಮ್ ಇಂಡಿಯಾದ ಆರಂಭಿಕರ ರೇಸ್​ನಲ್ಲಿ ಇತ್ತ ಯುವ ಓಪನರ್ ಶುಭ್​ಮನ್ ಗಿಲ್ ಇದ್ದಾರೆ. ಕೆಎಲ್ ರಾಹುಲ್​ ವಿಶ್ರಾಂತಿಯಲ್ಲಿದ್ದಾಗ ಅವಕಾಶ ಪಡೆಯುವ ಗಿಲ್ ಚಾನ್ಸ್​ ಸಿಕ್ಕಾಗೆಲ್ಲಾ ತಮ್ಮ ಛಾಪು ಮೂಡಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಗಿಲ್ ಅವರ ಅಂಕಿ ಅಂಶಗಳು.

3 / 7
ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 14 ಪಂದ್ಯಗಳನ್ನು ಆಡಿದ್ದಾರೆ. ಈ 14 ಪಂದ್ಯಗಳಲ್ಲಿ ಅವರ ಪ್ರದರ್ಶನವು ಶ್ಲಾಘನೀಯ. ಏಕೆಂದರೆ 14 ಇನಿಂಗ್ಸ್​ಗಳಲ್ಲಿ ಗಿಲ್ 61.27ರ ಸರಾಸರಿಯಲ್ಲಿ 674 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕಗಳು ಸೇರಿವೆ.

ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 14 ಪಂದ್ಯಗಳನ್ನು ಆಡಿದ್ದಾರೆ. ಈ 14 ಪಂದ್ಯಗಳಲ್ಲಿ ಅವರ ಪ್ರದರ್ಶನವು ಶ್ಲಾಘನೀಯ. ಏಕೆಂದರೆ 14 ಇನಿಂಗ್ಸ್​ಗಳಲ್ಲಿ ಗಿಲ್ 61.27ರ ಸರಾಸರಿಯಲ್ಲಿ 674 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕಗಳು ಸೇರಿವೆ.

4 / 7
ಮತ್ತೊಂದೆಡೆ ಕೆಎಲ್ ರಾಹುಲ್ ಅವರ ಏಕದಿನ ಅಂಕಿಅಂಶಗಳನ್ನು ಗಮನಿಸಿದರೆ, ಕಳೆದ 45 ಪಂದ್ಯಗಳಲ್ಲಿ 45 ರ ಸರಾಸರಿಯಲ್ಲಿ 1665 ರನ್ ಗಳಿಸಿದ್ದಾರೆ. ಈ ವೇಳೆ 5 ಶತಕ ಹಾಗೂ 10 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಮತ್ತೊಂದೆಡೆ ಕೆಎಲ್ ರಾಹುಲ್ ಅವರ ಏಕದಿನ ಅಂಕಿಅಂಶಗಳನ್ನು ಗಮನಿಸಿದರೆ, ಕಳೆದ 45 ಪಂದ್ಯಗಳಲ್ಲಿ 45 ರ ಸರಾಸರಿಯಲ್ಲಿ 1665 ರನ್ ಗಳಿಸಿದ್ದಾರೆ. ಈ ವೇಳೆ 5 ಶತಕ ಹಾಗೂ 10 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 7
ಇಲ್ಲಿ ಸರಾಸರಿ ವಿಷಯದಲ್ಲಿ ಕೆಎಲ್ ರಾಹುಲ್​ಗಿಂತ ಶುಭ್​ಮನ್​ ಗಿಲ್ ಮುಂದಿದ್ದಾರೆ. ಇನ್ನು ಗಿಲ್​ 100.44 ಸ್ಟ್ರೈಕ್ ರೇಟ್ ಹೊಂದಿದ್ದರೆ, ಕೆಎಲ್ ರಾಹುಲ್ 87.86. ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್​ಗಿಂತ ಶುಭ್​ಮನ್​ ಗಿಲ್​ಗೆ ಹೆಚ್ಚಿನ ಅವಕಾಶ ನೀಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇಲ್ಲಿ ಸರಾಸರಿ ವಿಷಯದಲ್ಲಿ ಕೆಎಲ್ ರಾಹುಲ್​ಗಿಂತ ಶುಭ್​ಮನ್​ ಗಿಲ್ ಮುಂದಿದ್ದಾರೆ. ಇನ್ನು ಗಿಲ್​ 100.44 ಸ್ಟ್ರೈಕ್ ರೇಟ್ ಹೊಂದಿದ್ದರೆ, ಕೆಎಲ್ ರಾಹುಲ್ 87.86. ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್​ಗಿಂತ ಶುಭ್​ಮನ್​ ಗಿಲ್​ಗೆ ಹೆಚ್ಚಿನ ಅವಕಾಶ ನೀಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿವೆ.

6 / 7
ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ಖಾಯಂ ಆರಂಭಿಕನಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ 2023ರ ಏಕದಿನ ವಿಶ್ವಕಪ್​ಗೆ ಇನ್ನು ತಿಂಗಳುಗಳು ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ರೂಪಿಸಿ ವರ್ಲ್ಡ್​ಕಪ್​​ಗಾಗಿ ಭರ್ಜರಿ ತಯಾರಿ ನಡೆಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ಖಾಯಂ ಆರಂಭಿಕನಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ 2023ರ ಏಕದಿನ ವಿಶ್ವಕಪ್​ಗೆ ಇನ್ನು ತಿಂಗಳುಗಳು ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ರೂಪಿಸಿ ವರ್ಲ್ಡ್​ಕಪ್​​ಗಾಗಿ ಭರ್ಜರಿ ತಯಾರಿ ನಡೆಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

7 / 7
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ