- Kannada News Photo gallery Cricket photos three young stars miss out as india finalise 15 member squad for ODI World Cup 2023 says reports
ಭಾರತ ವಿಶ್ವಕಪ್ ತಂಡದಿಂದ ಮೂವರಿಗೆ ಗೇಟ್ಪಾಸ್! ರಾಹುಲ್ಗೆ ಅವಕಾಶ; ವರದಿ
ODI World Cup 2023: ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಆಯ್ಕೆ ಮಾಡಿದ ತಂಡದಲ್ಲಿ, ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿರುವ ನಾಲ್ಕು ಆಟಗಾರರಿಗೆ ವಿಶ್ವಕಪ್ ತಂಡದಿಂದ ಕೋಕ್ ನೀಡಿದೆ ಎಂದು ವರದಿಯಾಗಿದೆ.
Updated on: Sep 03, 2023 | 10:37 AM

ಶನಿವಾರ ಪಲ್ಲೆಕೆಲೆಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯದ ನಂತರ ಬಿಸಿಸಿಐನ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 2023ರ ಏಕದಿನ ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡವನ್ನು ಅಂತಿಮಗೊಳಿಸಿದೆ ಎಂದು ವರದಿಯಾಗಿದೆ.

ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಆಯ್ಕೆ ಮಾಡಿದ ತಂಡದಲ್ಲಿ, ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿರುವ ನಾಲ್ಕು ಆಟಗಾರರಿಗೆ ವಿಶ್ವಕಪ್ ತಂಡದಿಂದ ಕೋಕ್ ನೀಡಿದೆ ಎಂದು ವರದಿಯಾಗಿದೆ.

ಏಷ್ಯಾಕಪ್ಗೆ ಬ್ಯಾಕ್ಅಪ್ ಆಟಗಾರನಾಗಿ ಶ್ರೀಲಂಕಾಕ್ಕೆ ಪ್ರಯಾಣಿಸಿರುವ ಸಂಜು ಸ್ಯಾಮ್ಸನ್ಗೆ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಿಲ್ಲ. ಇವರ ಜೊತೆಗೆ ಹೊಸಬರಾದ ತಿಲಕ್ ವರ್ಮಾ ಮತ್ತು ವೇಗಿ ಪ್ರಸಿದ್ಧ್ ಕೃಷ್ಣಗೂ ವಿಶ್ವಕಪ್ ತಂಡದಿಂದ ಗೇಟ್ ಪಾಸ್ ನೀಡಲಾಗಿದೆ ಎಂದು ವರದಿಯಾಗಿದೆ.

ಆದರೆ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್ ಅವರನ್ನು 15 ಸದಸ್ಯರ ವಿಶ್ವಕಪ್ ತಂಡದಲ್ಲಿ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ 17 ಸದಸ್ಯರ ಏಷ್ಯಾಕಪ್ ತಂಡದ ಭಾಗವಾಗಿರುವ ಕೃಷ್ಣ ಮತ್ತು ತಿಲಕ್ ಅವರನ್ನು ಹೊರಗಿಡಲಾಗಿದೆ.

ಇನ್ನು 2023ರ ಏಕದಿನ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುವ ಮೂಲಕ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಆ ಬಳಿಕ ಅಕ್ಟೋಬರ್ 14 ರಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ನಡೆಯಲ್ಲಿದೆ.

ಹಾಗೆಯೇ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರನ್ನು ನೋಡುವುದಾದರೆ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ತಂಡದಲ್ಲಿರುವ ಇತರ ಸ್ಪೆಷಲಿಸ್ಟ್ ಬ್ಯಾಟರ್ಗಳಾಗಿದ್ದರೆ, ರಾಹುಲ್ ಮತ್ತು ಇಶಾನ್ ಕಿಶನ್ ಇಬ್ಬರು ವಿಕೆಟ್ ಕೀಪರ್ಗಳಾಗಿದ್ದಾರೆ.

ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಆಲ್ ರೌಂಡರ್ಗಳಾಗಿ ಆಯ್ಕೆಯಾಗಿದ್ದು, ಕುಲ್ದೀಪ್ ಯಾದವ್ ಏಕೈಕ ಸ್ಪಿನ್ನರ್ ಆಗಿ ಆಯ್ಕೆದ್ದಾರೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ 50 ಓವರ್ಗಳ ಮೆಗಾವೆಂಟ್ಗೆ ನಾಲ್ಕು ವೇಗಿಗಳಾಗಿ ಆಯ್ಕೆಯಾಗಿದ್ದಾರೆ.

ವರದಿಯ ಪ್ರಕಾರ, ಏಷ್ಯಾಕಪ್ ವೀಕ್ಷಿಸಲು ಶ್ರೀಲಂಕಾಕ್ಕೆ ತೆರಳಿದ್ದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್, ಅಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದಲ್ಲದೆ ರಾಹುಲ್ ಅವರ ಫಿಟ್ನೆಸ್ ಬಗ್ಗೆ ಚರ್ಚೆ ನಡೆದಿದ್ದು, ವೈದ್ಯಕೀಯ ತಂಡವು ಗ್ರೀನ್ ಸಿಗ್ನಲ್ ನೀಡಿದ ನಂತರ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಆಗಸ್ಟ್ 21 ರಂದು ನವದೆಹಲಿಯಲ್ಲಿ ಭಾರತದ ಏಷ್ಯಾಕಪ್ ತಂಡವನ್ನು ಪ್ರಕಟಿಸುವ ಸಂದರ್ಭದಲ್ಲಿ, ಆಯ್ಕೆ ಸಮಿತಿಯು ತನ್ನ 18 ಸದಸ್ಯರ ಏಷ್ಯಾಕಪ್ ತಂಡದಿಂದ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಿದೆ ಎಂದು ಅಗರ್ಕರ್ ಸುಳಿವು ನೀಡಿದ್ದರು. ನಿರೀಕ್ಷೆಯಂತೆ ಈಗ ಆ ತಂಡದಲ್ಲೇ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಾಗಿದೆ.

ಏಕದಿನ ವಿಶ್ವಕಪ್ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), KL ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ.




