AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: ತಿಲಕ್ ಶತಕ, ಶ್ರೇಯಸ್ 87 ರನ್; ದಕ್ಷಿಣ ವಲಯ ಮೇಲುಗೈ

Duleep Trophy 2026: ದುಲೀಪ್ ಟ್ರೋಫಿ ಸೆಮಿಫೈನಲ್‌ನಲ್ಲಿ ತಿಲಕ್ ವರ್ಮಾ ಭರ್ಜರಿ ಶತಕ ಸಿಡಿಸಿ ದಕ್ಷಿಣ ವಲಯವನ್ನು ಸಂಕಷ್ಟದಿಂದ ಪಾರು ಮಾಡಿದರು. ಶ್ರೇಯಸ್ ಗೋಪಾಲ್ ಜೊತೆಗೂಡಿ 175 ರನ್‌ಗಳ ಮಹತ್ವದ ಪಾಲುದಾರಿಕೆ ನೀಡಿದರು. 23 ವರ್ಷದ ತಿಲಕ್ ಈಗಾಗಲೇ 19 ಶತಕಗಳನ್ನು ಬಾರಿಸಿದ್ದು, ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಪೃಥ್ವಿಶಂಕರ
|

Updated on: Aug 31, 2026 | 7:04 PM

Share
ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ಹಾಗೂ ಉತ್ತರ ವಲಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರ ವಲಯ ತಂಡ 195 ರನ್​​ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ವಲಯ ತಂಡದ ಪರ ನಾಯಕ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ.

ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ಹಾಗೂ ಉತ್ತರ ವಲಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರ ವಲಯ ತಂಡ 195 ರನ್​​ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ವಲಯ ತಂಡದ ಪರ ನಾಯಕ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ.

1 / 5
 ತಿಲಕ್ ವರ್ಮಾ ಶತಕ ಬಾರಿಸಿದಲ್ಲದೆ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಏಕೆಂದರೆ ಒಂದು ಹಂತದಲ್ಲಿ ದಕ್ಷಿಣ ವಲಯ ತಂಡವು 80 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಉತ್ತರ ವಲಯದ ವೇಗದ ಬೌಲರ್ ಗುರ್ನೂರ್ ಬ್ರಾರ್ ನಾಲ್ಕು ವಿಕೆಟ್‌ಗಳನ್ನು ಪಡೆದು ಎದುರಾಳಿ ತಂಡದ ಬೆವರಿಳಿಸಿದ್ದರು. ಆದರೆ ತಿಲಕ್, ಶ್ರೇಯಸ್ ಗೋಪಾಲ್ ಜೊತೆಗೂಡಿ ತಮ್ಮ ತಂಡವನ್ನು ಹಿನ್ನಡೆಯಿಂದ ಪಾರು ಮಾಡಿದರು.

ತಿಲಕ್ ವರ್ಮಾ ಶತಕ ಬಾರಿಸಿದಲ್ಲದೆ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಏಕೆಂದರೆ ಒಂದು ಹಂತದಲ್ಲಿ ದಕ್ಷಿಣ ವಲಯ ತಂಡವು 80 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಉತ್ತರ ವಲಯದ ವೇಗದ ಬೌಲರ್ ಗುರ್ನೂರ್ ಬ್ರಾರ್ ನಾಲ್ಕು ವಿಕೆಟ್‌ಗಳನ್ನು ಪಡೆದು ಎದುರಾಳಿ ತಂಡದ ಬೆವರಿಳಿಸಿದ್ದರು. ಆದರೆ ತಿಲಕ್, ಶ್ರೇಯಸ್ ಗೋಪಾಲ್ ಜೊತೆಗೂಡಿ ತಮ್ಮ ತಂಡವನ್ನು ಹಿನ್ನಡೆಯಿಂದ ಪಾರು ಮಾಡಿದರು.

2 / 5
ತಿಲಕ್ ವರ್ಮಾ 92 ನೇ ಓವರ್‌ನಲ್ಲಿ ಗುರ್ನೂರ್ ಬ್ರಾರ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದರು. 218 ಎಸೆತಗಳಲ್ಲಿ ಶತಕ ತಲುಪಿದ ತಿಲಕ್ ಅವರ ಈ ತಾಳ್ಮೆಯ ಇನ್ನಿಂಗ್ಸ್ ಉತ್ತರ ವಲಯದ ಭರವಸೆಯನ್ನು ಭಗ್ನಗೊಳಿಸಿತು. ಹಾಗೆಯೇ ಶ್ರೇಯಸ್ ಗೋಪಾಲ್ ಅವರ 88 ರನ್​ಗಳ ಇನ್ನಿಂಗ್ಸ್ ಕೂಡ ತಂಡಕ್ಕೆ ನೆರವಾಯಿತು. ಜೊತೆಗೆ ಇವರಿಬ್ಬರು 175 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರ ಜೊತೆಯಾಟದಿಂದಾಗಿ ದಕ್ಷಿಣ ವಲಯ ತಂಡ ಎರಡನೇ ದಿನದಾಟದಂತ್ಯಕ್ಕೆ 9 ವಿಕೆಟ್‌ಗಳನ್ನು ಕಳೆದುಕೊಂಡು 285 ರನ್ ಕಲೆಹಾಕಿದೆ.

ತಿಲಕ್ ವರ್ಮಾ 92 ನೇ ಓವರ್‌ನಲ್ಲಿ ಗುರ್ನೂರ್ ಬ್ರಾರ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದರು. 218 ಎಸೆತಗಳಲ್ಲಿ ಶತಕ ತಲುಪಿದ ತಿಲಕ್ ಅವರ ಈ ತಾಳ್ಮೆಯ ಇನ್ನಿಂಗ್ಸ್ ಉತ್ತರ ವಲಯದ ಭರವಸೆಯನ್ನು ಭಗ್ನಗೊಳಿಸಿತು. ಹಾಗೆಯೇ ಶ್ರೇಯಸ್ ಗೋಪಾಲ್ ಅವರ 88 ರನ್​ಗಳ ಇನ್ನಿಂಗ್ಸ್ ಕೂಡ ತಂಡಕ್ಕೆ ನೆರವಾಯಿತು. ಜೊತೆಗೆ ಇವರಿಬ್ಬರು 175 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರ ಜೊತೆಯಾಟದಿಂದಾಗಿ ದಕ್ಷಿಣ ವಲಯ ತಂಡ ಎರಡನೇ ದಿನದಾಟದಂತ್ಯಕ್ಕೆ 9 ವಿಕೆಟ್‌ಗಳನ್ನು ಕಳೆದುಕೊಂಡು 285 ರನ್ ಕಲೆಹಾಕಿದೆ.

3 / 5
 23 ವರ್ಷ ವಯಸ್ಸಿನ ತಿಲಕ್ ವರ್ಮಾ ಈಗಾಗಲೇ 19 ಶತಕಗಳನ್ನು ಬಾರಿಸಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಎಂಟು, ಲಿಸ್ಟ್ ಎ ನಲ್ಲಿ ಆರು ಮತ್ತು ಟಿ20 ಕ್ರಿಕೆಟ್‌ನಲ್ಲಿ ಐದು ಶತಕಗಳನ್ನು ಸಿಡಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ತಿಲಕ್ ಅವರ ಪ್ರದರ್ಶನವನ್ನು ನೋಡಿದರೆ ಅವರು ದೀರ್ಘಕಾಲದವರೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಆಳುತ್ತಾರೆ ಎನ್ನಬಹುದು.

23 ವರ್ಷ ವಯಸ್ಸಿನ ತಿಲಕ್ ವರ್ಮಾ ಈಗಾಗಲೇ 19 ಶತಕಗಳನ್ನು ಬಾರಿಸಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಎಂಟು, ಲಿಸ್ಟ್ ಎ ನಲ್ಲಿ ಆರು ಮತ್ತು ಟಿ20 ಕ್ರಿಕೆಟ್‌ನಲ್ಲಿ ಐದು ಶತಕಗಳನ್ನು ಸಿಡಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ತಿಲಕ್ ಅವರ ಪ್ರದರ್ಶನವನ್ನು ನೋಡಿದರೆ ಅವರು ದೀರ್ಘಕಾಲದವರೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಆಳುತ್ತಾರೆ ಎನ್ನಬಹುದು.

4 / 5
ತಿಲಕ್ ವರ್ಮಾ ಶೀಘ್ರದಲ್ಲೇ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 13 ರಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ತಿಲಕ್ ವರ್ಮಾ ಟಿ20 ತಂಡದ ಉಪನಾಯಕರಾಗಿದ್ದು ಅವರು ಈ ಸರಣಿಯಲ್ಲಿ ಆಡುವುದು ಖಚಿತ. ಆದಾಗ್ಯೂ ತಿಲಕ್ ವರ್ಮಾ ಅವರ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹೀಗಾಗಿ ತಿಲಕ್ ಟೀಕಾಕಾರರಿಗೆ ಹೇಗೆ ಪ್ರತಿಕ್ರಿಯಿಸುತ್ತಾನೆ ಎಂಬುದನ್ನು ಕಾದು ನೋಡಬೇಕಾಗಿದೆ.

ತಿಲಕ್ ವರ್ಮಾ ಶೀಘ್ರದಲ್ಲೇ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 13 ರಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ತಿಲಕ್ ವರ್ಮಾ ಟಿ20 ತಂಡದ ಉಪನಾಯಕರಾಗಿದ್ದು ಅವರು ಈ ಸರಣಿಯಲ್ಲಿ ಆಡುವುದು ಖಚಿತ. ಆದಾಗ್ಯೂ ತಿಲಕ್ ವರ್ಮಾ ಅವರ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹೀಗಾಗಿ ತಿಲಕ್ ಟೀಕಾಕಾರರಿಗೆ ಹೇಗೆ ಪ್ರತಿಕ್ರಿಯಿಸುತ್ತಾನೆ ಎಂಬುದನ್ನು ಕಾದು ನೋಡಬೇಕಾಗಿದೆ.

5 / 5
Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ