Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ರಣಜಿಯಲ್ಲಿ ಸತತ ಎರಡನೇ ಶತಕ ಸಿಡಿಸಿದ ತಿಲಕ್ ವರ್ಮಾ

Ranji Trophy 2024: ಸಿಕ್ಕಿಂ ವಿರುದ್ಧದ ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ನಾಯಕ ತಿಲಕ್ ವರ್ಮಾ 111 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಪೃಥ್ವಿಶಂಕರ
|

Updated on: Jan 20, 2024 | 3:49 PM

ನಡೆಯುತ್ತಿರುವ ರಣಜಿ ಟ್ರೋಫಿ 2024ರ ಸೀಸನ್​ನಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಈ ಆವೃತ್ತಿಯ ಸತತ ಎರಡನೇ ಶತಕ ಸಿಡಿಸಿದ್ದಾರೆ.

ನಡೆಯುತ್ತಿರುವ ರಣಜಿ ಟ್ರೋಫಿ 2024ರ ಸೀಸನ್​ನಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಈ ಆವೃತ್ತಿಯ ಸತತ ಎರಡನೇ ಶತಕ ಸಿಡಿಸಿದ್ದಾರೆ.

1 / 7
ಹೈದರಾಬಾದ್ ತಂಡ ಈ ಬಾರಿಯ ರಣಜಿ ಟ್ರೋಫಿಯ ಮೂರನೇ ಪಂದ್ಯವನ್ನು ಸಿಕ್ಕಿಂ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಸಿಕ್ಕಿಂ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 79 ರನ್‌ಗಳಿಗೆ ಆಲೌಟ್ ಆಯಿತು. ಇದರ ನಂತರ, ಮೊದಲ ಇನ್ನಿಂಗ್ಸ್ ಆರಂಭಿಸಿದ ಹೈದರಾಬಾದ್ ತಂಡ 463 ರನ್​ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

ಹೈದರಾಬಾದ್ ತಂಡ ಈ ಬಾರಿಯ ರಣಜಿ ಟ್ರೋಫಿಯ ಮೂರನೇ ಪಂದ್ಯವನ್ನು ಸಿಕ್ಕಿಂ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಸಿಕ್ಕಿಂ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 79 ರನ್‌ಗಳಿಗೆ ಆಲೌಟ್ ಆಯಿತು. ಇದರ ನಂತರ, ಮೊದಲ ಇನ್ನಿಂಗ್ಸ್ ಆರಂಭಿಸಿದ ಹೈದರಾಬಾದ್ ತಂಡ 463 ರನ್​ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

2 / 7
ಸಿಕ್ಕಿಂ ವಿರುದ್ಧದ ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ನಾಯಕ ತಿಲಕ್ ವರ್ಮಾ 111 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಸಿಕ್ಕಿಂ ವಿರುದ್ಧದ ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ನಾಯಕ ತಿಲಕ್ ವರ್ಮಾ 111 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

3 / 7
ಇವರಲ್ಲದೇ, ತನ್ಮಯ್ ಅಗರ್ವಾಲ್ ಕೂಡ ಹೈದರಾಬಾದ್‌ ಪರ 137 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರೆ, ರಾಹುಲ್ ಸಿಂಗ್ 83 ರನ್‌ಗಳ ಇನಿಂಗ್ಸ್ ಆಡಿದರು. ಹೀಗಾಗಿ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಸಿಕ್ಕಿಂ ವಿರುದ್ಧ ಭಾರಿ ಮುನ್ನಡೆ ಕಾಯ್ದುಕೊಂಡಿದೆ.

ಇವರಲ್ಲದೇ, ತನ್ಮಯ್ ಅಗರ್ವಾಲ್ ಕೂಡ ಹೈದರಾಬಾದ್‌ ಪರ 137 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರೆ, ರಾಹುಲ್ ಸಿಂಗ್ 83 ರನ್‌ಗಳ ಇನಿಂಗ್ಸ್ ಆಡಿದರು. ಹೀಗಾಗಿ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಸಿಕ್ಕಿಂ ವಿರುದ್ಧ ಭಾರಿ ಮುನ್ನಡೆ ಕಾಯ್ದುಕೊಂಡಿದೆ.

4 / 7
ಇನ್ನು ರಣಜಿಯಲ್ಲಿ ತಿಲಕ್ ವರ್ಮಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್​ನ ಮೊದಲ ಪಂದ್ಯದಲ್ಲಿ ಅಂದರೆ ನಾಗಾಲ್ಯಾಂಡ್ ವಿರುದ್ಧದ ಪಂದ್ಯದಲ್ಲೂ ತಿಲಕ್ 100 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಆದರೆ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿದ್ದ ಟಿ20 ಸರಣಿಯಲ್ಲಿ ಭಾರತ ತಂಡದ ಭಾಗವಾಗಿದ್ದ ಕಾರಣ ತಿಲಕ್‌ಗೆ ಎರಡನೇ ರಣಜಿ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

ಇನ್ನು ರಣಜಿಯಲ್ಲಿ ತಿಲಕ್ ವರ್ಮಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್​ನ ಮೊದಲ ಪಂದ್ಯದಲ್ಲಿ ಅಂದರೆ ನಾಗಾಲ್ಯಾಂಡ್ ವಿರುದ್ಧದ ಪಂದ್ಯದಲ್ಲೂ ತಿಲಕ್ 100 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಆದರೆ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿದ್ದ ಟಿ20 ಸರಣಿಯಲ್ಲಿ ಭಾರತ ತಂಡದ ಭಾಗವಾಗಿದ್ದ ಕಾರಣ ತಿಲಕ್‌ಗೆ ಎರಡನೇ ರಣಜಿ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

5 / 7
ಪ್ರಸ್ತುತ ರಣಜಿಯಲ್ಲಿ ಶತಕ ಸಿಡಿಸಿರುವ ತಿಲಕ್ ವರ್ಮಾ ಭಾರತ ಟಿ20 ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧದ 3ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಲಾಯಿತು

ಪ್ರಸ್ತುತ ರಣಜಿಯಲ್ಲಿ ಶತಕ ಸಿಡಿಸಿರುವ ತಿಲಕ್ ವರ್ಮಾ ಭಾರತ ಟಿ20 ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧದ 3ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಲಾಯಿತು

6 / 7
ಈ ಸರಣಿಗೂ ಮುನ್ನ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ತಿಲಕ್ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಹೀಗಾಗಿ ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ತಿಲಕ್​ಗೆ ಈ ಎರಡು ಬ್ಯಾಕ್​ ಟು ಬ್ಯಾಕ್ ಶತಕಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲಿವೆ.

ಈ ಸರಣಿಗೂ ಮುನ್ನ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲೂ ತಿಲಕ್ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಹೀಗಾಗಿ ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ತಿಲಕ್​ಗೆ ಈ ಎರಡು ಬ್ಯಾಕ್​ ಟು ಬ್ಯಾಕ್ ಶತಕಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲಿವೆ.

7 / 7
Follow us
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್
ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್
VIDEO: ಚಾಂಪಿಯನ್ಸ್ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ
VIDEO: ಚಾಂಪಿಯನ್ಸ್ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ
ವಿಧಾನಮಂಡಲದ ಕಲಾಪದಲ್ಲಿ ನಾಯಕರು ಬಳಸುವ ಭಾಷೆ ಶಾಲಾಮಕ್ಕಳಿಗೆ ಮಾದರಿಯಾಗಬೇಕು!
ವಿಧಾನಮಂಡಲದ ಕಲಾಪದಲ್ಲಿ ನಾಯಕರು ಬಳಸುವ ಭಾಷೆ ಶಾಲಾಮಕ್ಕಳಿಗೆ ಮಾದರಿಯಾಗಬೇಕು!
ಟೀಮ್ ಇಂಡಿಯಾ ಗೆಲುವಿಗೆ ಕುಣಿದು ಕುಪ್ಪಳಿಸಿದ ಸುನಿಲ್ ಗವಾಸ್ಕರ್
ಟೀಮ್ ಇಂಡಿಯಾ ಗೆಲುವಿಗೆ ಕುಣಿದು ಕುಪ್ಪಳಿಸಿದ ಸುನಿಲ್ ಗವಾಸ್ಕರ್
ತಮ್ಮಟೆ ಬಾರಿಸುತ್ತ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಜನ
ತಮ್ಮಟೆ ಬಾರಿಸುತ್ತ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಜನ
‘ರಶ್ಮಿಕಾಗೆ ಭದ್ರತೆ ನೀಡಿ’; ಕೇಂದ್ರಕ್ಕೆ ಮನವಿ ಮಾಡಿದ ಕೊಡವ ಸಮುದಾಯ
‘ರಶ್ಮಿಕಾಗೆ ಭದ್ರತೆ ನೀಡಿ’; ಕೇಂದ್ರಕ್ಕೆ ಮನವಿ ಮಾಡಿದ ಕೊಡವ ಸಮುದಾಯ
VIDEO: ಗೆದ್ದ ಖುಷಿಯಲ್ಲಿ ಹಾರ್ದಿಕ್ ಪಾಂಡ್ಯ ಅಪ್ಪಿಕೋ ಬಿಗಿದಪ್ಪಿಕೋ ಸಂಭ್ರಮ
VIDEO: ಗೆದ್ದ ಖುಷಿಯಲ್ಲಿ ಹಾರ್ದಿಕ್ ಪಾಂಡ್ಯ ಅಪ್ಪಿಕೋ ಬಿಗಿದಪ್ಪಿಕೋ ಸಂಭ್ರಮ
ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಎಪಿಎಂಸಿ ಮಾರುಕಟ್ಟೆಗೆ ದಾಳಿ
ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಎಪಿಎಂಸಿ ಮಾರುಕಟ್ಟೆಗೆ ದಾಳಿ