AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tim David: ಟಿಮ್ ಡೇವಿಡ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

IPL 2025 RCB vs PBKS: ಐಪಿಎಲ್​ನ  34ನೇ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ನಿಗದಿತ 14 ಓವರ್​ಗಳಲ್ಲಿ 95 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ 12.1 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ. ಈ ಮೂಲಕ ಪಂಜಾಬ್ ಪಡೆ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 19, 2025 | 12:54 PM

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಆರ್​ಸಿಬಿ ದಾಂಡಿಗ ಟಿಮ್ ಡೇವಿಡ್ (Tim David) ಬ್ಯಾಟ್​ನಿಂದ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2025) 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿತ್ತು.

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಆರ್​ಸಿಬಿ ದಾಂಡಿಗ ಟಿಮ್ ಡೇವಿಡ್ (Tim David) ಬ್ಯಾಟ್​ನಿಂದ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2025) 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿತ್ತು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ  ಪಡೆದಿರಲಿಲ್ಲ. ಅಲ್ಲದೆ ಕೇವಲ 41 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ  ಪಡೆದಿರಲಿಲ್ಲ. ಅಲ್ಲದೆ ಕೇವಲ 41 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಆರಂಭದಲ್ಲಿ ರಕ್ಷಣಾತ್ಮಕವಾಗಿ ಬ್ಯಾಟ್ ಬೀಸಿದ ಟಿಮ್ ಡೇವಿಡ್ ಕೊನೆಯ 2 ಓವರ್​ಗಳಿರುವಾಗ ಸಿಡಿಲಬ್ಬರ ಶುರು ಮಾಡಿದರು. ಪರಿಣಾಮ 26 ಎಸೆತಗಳಲ್ಲಿ ಡೇವಿಡ್ ಬ್ಯಾಟ್​ನಿಂದ 50 ರನ್​ಗಳು ಮೂಡಿಬಂತು. ಈ ಅರ್ಧಶತಕದೊಂದಿಗೆ ಟಿಮ್ ಡೇವಿಡ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದರು.

ಆರಂಭದಲ್ಲಿ ರಕ್ಷಣಾತ್ಮಕವಾಗಿ ಬ್ಯಾಟ್ ಬೀಸಿದ ಟಿಮ್ ಡೇವಿಡ್ ಕೊನೆಯ 2 ಓವರ್​ಗಳಿರುವಾಗ ಸಿಡಿಲಬ್ಬರ ಶುರು ಮಾಡಿದರು. ಪರಿಣಾಮ 26 ಎಸೆತಗಳಲ್ಲಿ ಡೇವಿಡ್ ಬ್ಯಾಟ್​ನಿಂದ 50 ರನ್​ಗಳು ಮೂಡಿಬಂತು. ಈ ಅರ್ಧಶತಕದೊಂದಿಗೆ ಟಿಮ್ ಡೇವಿಡ್ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದರು.

3 / 6
ಅಂದರೆ ಪ್ರಥಮ ಇನಿಂಗ್ಸ್​ನಲ್ಲಿ ತಂಡವೊಂದು 100 ಕ್ಕಿಂತ ಕಡಿಮೆ ಸ್ಕೋರ್​ಗಳಿಸಿದರೂ ಬ್ಯಾಟರ್​ ಒಬ್ಬರು ಅರ್ಧಶತಕ ಬಾರಿಸಿದ್ದು ಇದೇ ಮೊದಲು. ಈ ಪಂದ್ಯದಲ್ಲಿ ಆರ್​ಸಿಬಿ ಕಲೆಹಾಕಿದ್ದು 95 ರನ್​ಗಳು. ಇದರಲ್ಲಿ ಟಿಮ್ ಡೇವಿಡ್ ಕೊಡುಗೆ 50 ರನ್​ಗಳು. ಈ ಮೂಲಕ  ಟಿ20 ಕ್ರಿಕೆಟ್​ನ ಪ್ರಥಮ ಇನಿಂಗ್ಸ್​ನಲ್ಲಿ 100ಕ್ಕಿಂತ ಕಡಿಮೆ ಸ್ಕೋರ್​ಗಳಿಸಿದ ತಂಡದ ಪರ ಅರ್ಧಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಟಿಮ್ ಡೇವಿಡ್ ನಿರ್ಮಿಸಿದ್ದಾರೆ. 

ಅಂದರೆ ಪ್ರಥಮ ಇನಿಂಗ್ಸ್​ನಲ್ಲಿ ತಂಡವೊಂದು 100 ಕ್ಕಿಂತ ಕಡಿಮೆ ಸ್ಕೋರ್​ಗಳಿಸಿದರೂ ಬ್ಯಾಟರ್​ ಒಬ್ಬರು ಅರ್ಧಶತಕ ಬಾರಿಸಿದ್ದು ಇದೇ ಮೊದಲು. ಈ ಪಂದ್ಯದಲ್ಲಿ ಆರ್​ಸಿಬಿ ಕಲೆಹಾಕಿದ್ದು 95 ರನ್​ಗಳು. ಇದರಲ್ಲಿ ಟಿಮ್ ಡೇವಿಡ್ ಕೊಡುಗೆ 50 ರನ್​ಗಳು. ಈ ಮೂಲಕ  ಟಿ20 ಕ್ರಿಕೆಟ್​ನ ಪ್ರಥಮ ಇನಿಂಗ್ಸ್​ನಲ್ಲಿ 100ಕ್ಕಿಂತ ಕಡಿಮೆ ಸ್ಕೋರ್​ಗಳಿಸಿದ ತಂಡದ ಪರ ಅರ್ಧಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಟಿಮ್ ಡೇವಿಡ್ ನಿರ್ಮಿಸಿದ್ದಾರೆ. 

4 / 6
ಇದಕ್ಕೂ ಮುನ್ನ ಇಂತಹೊಂದು ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದರು. 2013 ರಲ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 106 ರನ್ ಕಲೆಹಾಕಿತ್ತು. ಈ ವೇಳೆ ಕಿಂಗ್ ಕೊಹ್ಲಿ 56 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ನ ಪ್ರಥಮ ಇನಿಂಗ್ಸ್​ನಲ್ಲಿ ಕನಿಷ್ಠ ಸ್ಕೋರ್​ಗಳಿಕೆಯ ನಡುವೆ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಢಿದ್ದರು.

ಇದಕ್ಕೂ ಮುನ್ನ ಇಂತಹೊಂದು ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದರು. 2013 ರಲ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 106 ರನ್ ಕಲೆಹಾಕಿತ್ತು. ಈ ವೇಳೆ ಕಿಂಗ್ ಕೊಹ್ಲಿ 56 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ನ ಪ್ರಥಮ ಇನಿಂಗ್ಸ್​ನಲ್ಲಿ ಕನಿಷ್ಠ ಸ್ಕೋರ್​ಗಳಿಕೆಯ ನಡುವೆ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಢಿದ್ದರು.

5 / 6
ಇದೀಗ ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಟಿಮ್ ಡೇವಿಡ್ ಯಶಸ್ವಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 50 ರನ್​ ಸಿಡಿಸಿ,  ಪ್ರಥಮ ಇನಿಂಗ್ಸ್​ನಲ್ಲಿ 100 ಕ್ಕಿಂತ ಕಡಿಮೆ ಸ್ಕೋರ್ ದಾಖಲಾದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಢಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಟಿಮ್ ಡೇವಿಡ್ ಯಶಸ್ವಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 50 ರನ್​ ಸಿಡಿಸಿ,  ಪ್ರಥಮ ಇನಿಂಗ್ಸ್​ನಲ್ಲಿ 100 ಕ್ಕಿಂತ ಕಡಿಮೆ ಸ್ಕೋರ್ ದಾಖಲಾದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಢಿದ್ದಾರೆ.

6 / 6
Follow us
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ