AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬ್ಯಾಷ್​ ಲೀಗ್​ನಿಂದ ಹೊರಬಿದ್ದ RCB ಆಟಗಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಕೂಡ ಒಬ್ಬರು. ಇದೀಗ ಟಿಮ್ ಡೇವಿಡ್ ಗಾಯಗೊಂಡಿರುವುದು ಆರ್​ಸಿಬಿ ತಂಡದ ಚಿಂತೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on:Dec 30, 2025 | 7:34 AM

Share
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಿಂದ ಸ್ಟಾರ್ ಆಟಗಾರ ಟಿಮ್ ಡೇವಿಡ್ (Tim David) ಹೊರಬಿದ್ದಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಿಂದ ಸ್ಟಾರ್ ಆಟಗಾರ ಟಿಮ್ ಡೇವಿಡ್ (Tim David) ಹೊರಬಿದ್ದಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

1 / 5
ಇದೀಗ ಈ ಗಾಯದ ಕಾರಣ ಅವರು ಬಿಗ್ ಬ್ಯಾಷ್ ಲೀಗ್ ಅನ್ನು ಅರ್ಧದಲ್ಲೇ ತೊರೆದಿದ್ದಾರೆ. ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೂ ಟಿಮ್ ಡೇವಿಡ್ ಅನುಮಾನ ಎನ್ನಲಾಗಿದೆ.

ಇದೀಗ ಈ ಗಾಯದ ಕಾರಣ ಅವರು ಬಿಗ್ ಬ್ಯಾಷ್ ಲೀಗ್ ಅನ್ನು ಅರ್ಧದಲ್ಲೇ ತೊರೆದಿದ್ದಾರೆ. ಗಾಯವು ಗಂಭೀರವಾಗಿರುವ ಕಾರಣ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೂ ಟಿಮ್ ಡೇವಿಡ್ ಅನುಮಾನ ಎನ್ನಲಾಗಿದೆ.

2 / 5
ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೀಗ ಅವರು ಗಂಭೀರ ಗಾಯಕ್ಕೆ ಒಳಗಾಗಿರುವುದು ಕ್ರಿಕೆಟ್ ಆಸ್ಟ್ರೇಲಿಯಾದ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೀಗ ಅವರು ಗಂಭೀರ ಗಾಯಕ್ಕೆ ಒಳಗಾಗಿರುವುದು ಕ್ರಿಕೆಟ್ ಆಸ್ಟ್ರೇಲಿಯಾದ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

3 / 5
ಅಂದರೆ ಟಿ20 ವಿಶ್ವಕಪ್​​ಗೆ ಇನ್ನೂ ಒಂದು ತಿಂಗಳು ಇರುವ ಕಾರಣ ಟಿಮ್ ಡೇವಿಡ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸದಿದ್ದರೆ ಟೀಮ್​ನಿಂದ ಕೈ ಬಿಡಲು ಕ್ರಿಕೆಟ್ ಆಸ್ಟ್ರೇಲಿಯಾದ ಆಯ್ಕೆ ಸಮಿತಿ ಚರ್ಚಿಸಿದೆ ಎಂದು ವರದಿಯಾಗಿದೆ.

ಅಂದರೆ ಟಿ20 ವಿಶ್ವಕಪ್​​ಗೆ ಇನ್ನೂ ಒಂದು ತಿಂಗಳು ಇರುವ ಕಾರಣ ಟಿಮ್ ಡೇವಿಡ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸದಿದ್ದರೆ ಟೀಮ್​ನಿಂದ ಕೈ ಬಿಡಲು ಕ್ರಿಕೆಟ್ ಆಸ್ಟ್ರೇಲಿಯಾದ ಆಯ್ಕೆ ಸಮಿತಿ ಚರ್ಚಿಸಿದೆ ಎಂದು ವರದಿಯಾಗಿದೆ.

4 / 5
ಒಂದು ವೇಳೆ ಟಿಮ್ ಡೇವಿಡ್ ಟಿ20 ವಿಶ್ವಕಪ್​ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಪ್ರಮುಖ ಟೂರ್ನಿಯಿಂದ ಹೊರಗುಳಿದ ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವರೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಎನ್​ಒಸಿ ನೀಡುವುದಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೆ ಅಲಭ್ಯರಾದರೆ, ಟಿಮ್ ಡೇವಿಡ್ ಆರ್​ಸಿಬಿ ತಂಡದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

ಒಂದು ವೇಳೆ ಟಿಮ್ ಡೇವಿಡ್ ಟಿ20 ವಿಶ್ವಕಪ್​ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಪ್ರಮುಖ ಟೂರ್ನಿಯಿಂದ ಹೊರಗುಳಿದ ಆಟಗಾರರು ಸಂಪೂರ್ಣ ಫಿಟ್​ನೆಸ್ ಸಾಧಿಸುವರೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಎನ್​ಒಸಿ ನೀಡುವುದಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೆ ಅಲಭ್ಯರಾದರೆ, ಟಿಮ್ ಡೇವಿಡ್ ಆರ್​ಸಿಬಿ ತಂಡದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

5 / 5

Published On - 7:33 am, Tue, 30 December 25

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?