AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwin: ಅಶ್ವಿನ್​ಗೆ 500 ಚಿನ್ನದ ನಾಣ್ಯ, 1 ಕೋಟಿ ರೂ. ನೀಡಿದ TNCA

ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಅವರನ್ನು ತಮಿಳುನಾಡು ಕ್ರಿಕೆಟ್ ಸಂಸ್ಥೆ ಸನ್ಮಾನಿಸಿದೆ. ಚೆನ್ನೈನಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಭಾರತ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರಾದ ಎನ್​. ಶ್ರೀನಿವಾಸನ್ ಸೇರಿದಂತೆ ಪ್ರಮುಖರು ಹಾಜರಿದ್ದರು.

TV9 Web
| Edited By: |

Updated on: Mar 17, 2024 | 7:10 AM

Share
ಭಾರತದ ಪರ ಒಂದೇ ಸರಣಿಯಲ್ಲಿ ಎರಡು ಸಾಧನೆ ಮಾಡಿದ ಟೀಮ್ ಇಂಡಿಯಾ (Team India) ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಅವರನ್ನು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ (TNCA) ಗೌರವಿಸಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ್ದ ಅಶ್ವಿನ್, ಇದೇ ಸರಣಿಯಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

ಭಾರತದ ಪರ ಒಂದೇ ಸರಣಿಯಲ್ಲಿ ಎರಡು ಸಾಧನೆ ಮಾಡಿದ ಟೀಮ್ ಇಂಡಿಯಾ (Team India) ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಅವರನ್ನು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ (TNCA) ಗೌರವಿಸಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ್ದ ಅಶ್ವಿನ್, ಇದೇ ಸರಣಿಯಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

1 / 6
ಈ ಎರಡು ಮೈಲುಗಲ್ಲನ್ನು ದಾಟಿದ ತಮಿಳುನಾಡು ಆಟಗಾರನಿಗಾಗಿ ಟಿಎನ್​ಸಿಎ ವಿಶೇಷ ಕಾರ್ಯಕ್ರಮ ಏರ್ಪಡಿಸಿತ್ತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಅಶ್ವಿನ್ ಅವರಿಗೆ 500 ಚಿನ್ನದ ನಾಣ್ಯಗಳ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಎರಡು ಮೈಲುಗಲ್ಲನ್ನು ದಾಟಿದ ತಮಿಳುನಾಡು ಆಟಗಾರನಿಗಾಗಿ ಟಿಎನ್​ಸಿಎ ವಿಶೇಷ ಕಾರ್ಯಕ್ರಮ ಏರ್ಪಡಿಸಿತ್ತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಅಶ್ವಿನ್ ಅವರಿಗೆ 500 ಚಿನ್ನದ ನಾಣ್ಯಗಳ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

2 / 6
500 ವಿಕೆಟ್​ಗಳ ಸಾಧನೆಯನ್ನು ಗೌರವಿಸಿ 500 ಚಿನ್ನದ ನಾಣ್ಯಗಳನ್ನು ನೀಡಲಾಗಿರುವುದು ವಿಶೇಷ. ಇದರ ಜೊತೆಗೆ ಪ್ರೋತ್ಸಾಹಕ ಮೊತ್ತವಾಗಿ 1 ಕೋಟಿ ರೂ. ನೀಡಲಾಯಿತು. ಇನ್ನು ಈ ಸಾಧನೆಯ ಸ್ಮರಣಾರ್ಥ ರವಿಚಂದ್ರನ್ ಅಶ್ವಿನ್ ಅವರ ಅಂಚೆಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಹಾಗೆಯೇ ವಿಶೇಷ ಕಾಣಿಕೆಯಾಗಿ ರಾಜದಂಡವನ್ನು  ನೀಡಲಾಯಿತು.

500 ವಿಕೆಟ್​ಗಳ ಸಾಧನೆಯನ್ನು ಗೌರವಿಸಿ 500 ಚಿನ್ನದ ನಾಣ್ಯಗಳನ್ನು ನೀಡಲಾಗಿರುವುದು ವಿಶೇಷ. ಇದರ ಜೊತೆಗೆ ಪ್ರೋತ್ಸಾಹಕ ಮೊತ್ತವಾಗಿ 1 ಕೋಟಿ ರೂ. ನೀಡಲಾಯಿತು. ಇನ್ನು ಈ ಸಾಧನೆಯ ಸ್ಮರಣಾರ್ಥ ರವಿಚಂದ್ರನ್ ಅಶ್ವಿನ್ ಅವರ ಅಂಚೆಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಹಾಗೆಯೇ ವಿಶೇಷ ಕಾಣಿಕೆಯಾಗಿ ರಾಜದಂಡವನ್ನು ನೀಡಲಾಯಿತು.

3 / 6
ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದರು. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದರು.

ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದರು. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದರು.

4 / 6
ಹಾಗೆಯೇ ಧರ್ಮಶಾಲಾದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೂ ಅಶ್ವಿನ್ ಸೇರ್ಪಡೆಯಾಗಿದ್ದರು. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.

ಹಾಗೆಯೇ ಧರ್ಮಶಾಲಾದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೂ ಅಶ್ವಿನ್ ಸೇರ್ಪಡೆಯಾಗಿದ್ದರು. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.

5 / 6
ಈ ಸಾಧನೆಗಳನ್ನು ಗೌರವಿಸಿ ಇದೀಗ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಅಶ್ವಿನ್ ಅವರಿಗೆ 500 ಚಿನ್ನದ ನಾಣ್ಯಗಳು ಮತ್ತು ಒಂದು ಕೋಟಿ ರೂ. ನೀಡಿ ಸನ್ಮಾನಿಸಿದೆ. ಈ ಮೂಲಕ ಸಾಧನೆಯ ಶಿಖರವನ್ನೇರಿರುವ ಟೀಮ್ ಇಂಡಿಯಾ ಆಟಗಾರನಿಗೆ TNCA ವಿಶೇಷ ಗೌರವ ಸಲ್ಲಿಸಿದೆ.

ಈ ಸಾಧನೆಗಳನ್ನು ಗೌರವಿಸಿ ಇದೀಗ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಅಶ್ವಿನ್ ಅವರಿಗೆ 500 ಚಿನ್ನದ ನಾಣ್ಯಗಳು ಮತ್ತು ಒಂದು ಕೋಟಿ ರೂ. ನೀಡಿ ಸನ್ಮಾನಿಸಿದೆ. ಈ ಮೂಲಕ ಸಾಧನೆಯ ಶಿಖರವನ್ನೇರಿರುವ ಟೀಮ್ ಇಂಡಿಯಾ ಆಟಗಾರನಿಗೆ TNCA ವಿಶೇಷ ಗೌರವ ಸಲ್ಲಿಸಿದೆ.

6 / 6
Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್