AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: 8 ಸಿಕ್ಸ್, 7 ಫೋರ್​: ಅಜಿತೇಶ್ ಸ್ಪೋಟಕ ಶತಕ, ರಾಯಲ್ ಕಿಂಗ್ಸ್​ಗೆ ರೋಚಕ ಜಯ

Ajitesh Guruswamy: ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಜಿತೇಶ್ ತಂಡದ ಮೊತ್ತವನ್ನು 10 ಓವರ್​ಗಳಲ್ಲಿ 70 ರ ಗಡಿದಾಟಿಸಿದ್ದರು. ಇದಾದ ಬಳಿಕ ಬಿರುಸಿನ ಬ್ಯಾಟಿಂಗ್​ ಮೂಲಕ ಅಬ್ಬರಿಸಲಾರಂಭಿಸಿದರು.

TV9 Web
| Edited By: |

Updated on: Jun 17, 2023 | 6:03 PM

Share
TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 7ನೇ ಸೀಸನ್​ನಲ್ಲಿ ಭರ್ಜರಿ ಶತಕ ಸಿಡಿಸಿ ಅಜಿತೇಶ್ ಗುರುಸ್ವಾಮಿ ಅಬ್ಬರಿಸಿದ್ದಾರೆ. ಲೈಕಾ ಕೋವೈ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 7ನೇ ಸೀಸನ್​ನಲ್ಲಿ ಭರ್ಜರಿ ಶತಕ ಸಿಡಿಸಿ ಅಜಿತೇಶ್ ಗುರುಸ್ವಾಮಿ ಅಬ್ಬರಿಸಿದ್ದಾರೆ. ಲೈಕಾ ಕೋವೈ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಬಿ. ಸಚಿನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ನಡೆಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಬಿ. ಸಚಿನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ನಡೆಸಿದರು.

2 / 8
ನೆಲ್ಲೈ ರಾಯಲ್ ಕಿಂಗ್ಸ್ ಬೌಲರ್​ಗಳನ್ನು ಬೆಂಡೆತ್ತಿದ ಸಾಯಿ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 52 ಎಸೆತಗಳಲ್ಲಿ 90 ರನ್ ಬಾರಿಸಿದರು. ಅದರಂತೆ ಲೈಕಾ ಕೋವೈ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 181 ರನ್ ಪೇರಿಸಿತು.

ನೆಲ್ಲೈ ರಾಯಲ್ ಕಿಂಗ್ಸ್ ಬೌಲರ್​ಗಳನ್ನು ಬೆಂಡೆತ್ತಿದ ಸಾಯಿ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 52 ಎಸೆತಗಳಲ್ಲಿ 90 ರನ್ ಬಾರಿಸಿದರು. ಅದರಂತೆ ಲೈಕಾ ಕೋವೈ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 181 ರನ್ ಪೇರಿಸಿತು.

3 / 8
182 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಕೂಡ ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜಿತೇಶ್ ಗುರುಸ್ವಾಮಿ ತಂಡಕ್ಕೆ ಆಸರೆಯಾಗಿ ನಿಂತರು.

182 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಕೂಡ ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜಿತೇಶ್ ಗುರುಸ್ವಾಮಿ ತಂಡಕ್ಕೆ ಆಸರೆಯಾಗಿ ನಿಂತರು.

4 / 8
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಜಿತೇಶ್ ತಂಡದ ಮೊತ್ತವನ್ನು 10 ಓವರ್​ಗಳಲ್ಲಿ 70 ರ ಗಡಿದಾಟಿಸಿದ್ದರು. ಇದಾದ ಬಳಿಕ ಬಿರುಸಿನ ಬ್ಯಾಟಿಂಗ್​ ಮೂಲಕ ಅಬ್ಬರಿಸಲಾರಂಭಿಸಿದರು. ಪರಿಣಾಮ ಕೊನೆಯ 7 ಎಸೆತಗಳಲ್ಲಿ 21 ರನ್​ಗಳ ಅವಶ್ಯಕತೆಯಿತ್ತು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಜಿತೇಶ್ ತಂಡದ ಮೊತ್ತವನ್ನು 10 ಓವರ್​ಗಳಲ್ಲಿ 70 ರ ಗಡಿದಾಟಿಸಿದ್ದರು. ಇದಾದ ಬಳಿಕ ಬಿರುಸಿನ ಬ್ಯಾಟಿಂಗ್​ ಮೂಲಕ ಅಬ್ಬರಿಸಲಾರಂಭಿಸಿದರು. ಪರಿಣಾಮ ಕೊನೆಯ 7 ಎಸೆತಗಳಲ್ಲಿ 21 ರನ್​ಗಳ ಅವಶ್ಯಕತೆಯಿತ್ತು.

5 / 8
ಈ ಹಂತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಅಜಿತೇಶ್ ಗುರುಸ್ವಾಮಿ ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿದರು. ಅದರಂತೆ ಕೊನೆಯ ಓವರ್​ನಲ್ಲಿ 15 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸುವ ಮೂಲಕ ಅಜಿತೇಶ್ ಪಂದ್ಯವನ್ನು ಮತ್ತಷ್ಟು ರೋಚಕತೆಗೆ ಕೊಂಡೊಯ್ದರು.

ಈ ಹಂತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಅಜಿತೇಶ್ ಗುರುಸ್ವಾಮಿ ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿದರು. ಅದರಂತೆ ಕೊನೆಯ ಓವರ್​ನಲ್ಲಿ 15 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸುವ ಮೂಲಕ ಅಜಿತೇಶ್ ಪಂದ್ಯವನ್ನು ಮತ್ತಷ್ಟು ರೋಚಕತೆಗೆ ಕೊಂಡೊಯ್ದರು.

6 / 8
ಆದರೆ 60 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 112 ರನ್ ಬಾರಿಸಿದ್ದ ಅಜಿತೇಶ್ ಗುರುಸ್ವಾಮಿ ಅಂತಿಮ ಹಂತದಲ್ಲಿ ರನೌಟ್ ಆದರು. ಇತ್ತ ಕೊನೆಯ 2 ಎಸೆತಗಳಲ್ಲಿ 7 ರನ್​ಗಳ ಟಾರ್ಗೆಟ್ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ಪರ ಎಂ ಮೊಹಮ್ಮದ್ ಸಿಕ್ಸ್ ಬಾರಿಸಿದರು.

ಆದರೆ 60 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 112 ರನ್ ಬಾರಿಸಿದ್ದ ಅಜಿತೇಶ್ ಗುರುಸ್ವಾಮಿ ಅಂತಿಮ ಹಂತದಲ್ಲಿ ರನೌಟ್ ಆದರು. ಇತ್ತ ಕೊನೆಯ 2 ಎಸೆತಗಳಲ್ಲಿ 7 ರನ್​ಗಳ ಟಾರ್ಗೆಟ್ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ಪರ ಎಂ ಮೊಹಮ್ಮದ್ ಸಿಕ್ಸ್ ಬಾರಿಸಿದರು.

7 / 8
ಅಲ್ಲದೆ ಕೊನೆಯ ಎಸೆತದಲ್ಲಿ 1 ರನ್ ಓಡುವ ಮೂಲಕ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ  ರೋಚಕ ಜಯ ತಂದುಕೊಟ್ಟರು. ಇನ್ನು ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಅಜಿತೇಶ್ ಗುರುಸ್ವಾಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಅಲ್ಲದೆ ಕೊನೆಯ ಎಸೆತದಲ್ಲಿ 1 ರನ್ ಓಡುವ ಮೂಲಕ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಇನ್ನು ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಅಜಿತೇಶ್ ಗುರುಸ್ವಾಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್