Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ-ರೋಹಿತ್​ಗಿಂತ ಹೆಚ್ಚು ವೇತನ ಪಡೆದ ಟೀಮ್ ಇಂಡಿಯಾ ಆಟಗಾರ

Team India: ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 24, 2023 | 10:02 AM

2023 ವರ್ಷಾಂತ್ಯಕ್ಕೆ ಬಂದು ನಿಂತಿದೆ. ಈ ವರ್ಷ ಟೀಮ್ ಇಂಡಿಯಾ (Team India) ಒಟ್ಟು 35 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 27 ಪಂದ್ಯಗಳಲ್ಲಿ ಜಯ ಸಾಧಿಸಿ ದಾಖಲೆ ಬರೆದಿದೆ. ಈ ವರ್ಷ ಟೀಮ್ ಇಂಡಿಯಾ ಆಡಿದ 8 ದ್ವಿಪಕ್ಷೀಯ ಸರಣಿಗಳಲ್ಲಿ ಈ ಬಾರಿ 7 ಸರಣಿಗಳನ್ನು ಗೆದ್ದುಕೊಂಡಿರುವುದು ವಿಶೇಷ.

2023 ವರ್ಷಾಂತ್ಯಕ್ಕೆ ಬಂದು ನಿಂತಿದೆ. ಈ ವರ್ಷ ಟೀಮ್ ಇಂಡಿಯಾ (Team India) ಒಟ್ಟು 35 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 27 ಪಂದ್ಯಗಳಲ್ಲಿ ಜಯ ಸಾಧಿಸಿ ದಾಖಲೆ ಬರೆದಿದೆ. ಈ ವರ್ಷ ಟೀಮ್ ಇಂಡಿಯಾ ಆಡಿದ 8 ದ್ವಿಪಕ್ಷೀಯ ಸರಣಿಗಳಲ್ಲಿ ಈ ಬಾರಿ 7 ಸರಣಿಗಳನ್ನು ಗೆದ್ದುಕೊಂಡಿರುವುದು ವಿಶೇಷ.

1 / 7
ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

2 / 7
ವಿಶೇಷ ಎಂದರೆ ಈ ಬಾರಿ ಅತ್ಯಧಿಕ ಏಕದಿನ ಪಂದ್ಯಗಳನ್ನಾಡುವ ಮೂಲಕ ಕುಲ್ದೀಪ್ ಯಾದವ್ ಬಿಸಿಸಿಐ ಕಡೆಯಿಂದಲೂ ಅತೀ ಹೆಚ್ಚು ವೇತನ ಪಡೆದಿದ್ದಾರೆ. ಅಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಹೆಚ್ಚಿನ ಸಂಭಾವನೆಯನ್ನು ಜೇಬಿಗಿಳಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿ ಅತ್ಯಧಿಕ ಏಕದಿನ ಪಂದ್ಯಗಳನ್ನಾಡುವ ಮೂಲಕ ಕುಲ್ದೀಪ್ ಯಾದವ್ ಬಿಸಿಸಿಐ ಕಡೆಯಿಂದಲೂ ಅತೀ ಹೆಚ್ಚು ವೇತನ ಪಡೆದಿದ್ದಾರೆ. ಅಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಹೆಚ್ಚಿನ ಸಂಭಾವನೆಯನ್ನು ಜೇಬಿಗಿಳಿಸಿಕೊಂಡಿದ್ದಾರೆ.

3 / 7
ಬಿಸಿಸಿಐ ಒಪ್ಪಂದದ ಪ್ರಕಾರ, ಏಕದಿನ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ 6 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿ 30 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕುಲ್ದೀಪ್ ಯಾದವ್ ಬರೋಬ್ಬರಿ 1.80 ಕೋಟಿ ರೂ. ವೇತನ ಪಡೆದಿದ್ದಾರೆ.

ಬಿಸಿಸಿಐ ಒಪ್ಪಂದದ ಪ್ರಕಾರ, ಏಕದಿನ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ 6 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿ 30 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕುಲ್ದೀಪ್ ಯಾದವ್ ಬರೋಬ್ಬರಿ 1.80 ಕೋಟಿ ರೂ. ವೇತನ ಪಡೆದಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶುಭ್​ಮನ್ ಗಿಲ್. ಈ ವರ್ಷ ಟೀಮ್ ಇಂಡಿಯಾ ಪರ 29 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 1.74 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶುಭ್​ಮನ್ ಗಿಲ್. ಈ ವರ್ಷ ಟೀಮ್ ಇಂಡಿಯಾ ಪರ 29 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 1.74 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

5 / 7
ಮತ್ತೊಂದೆಡೆ ಈ ವರ್ಷ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡಿರುವುದು 27 ಏಕದಿನ ಪಂದ್ಯಗಳನ್ನು ಮಾತ್ರ. ಅದರಂತೆ ಅವರು ಪಡೆದಿರುವ ಒಟ್ಟು ಸಂಭಾವನೆ ಮೊತ್ತ 1.62 ಕೋಟಿ ರೂ.

ಮತ್ತೊಂದೆಡೆ ಈ ವರ್ಷ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡಿರುವುದು 27 ಏಕದಿನ ಪಂದ್ಯಗಳನ್ನು ಮಾತ್ರ. ಅದರಂತೆ ಅವರು ಪಡೆದಿರುವ ಒಟ್ಟು ಸಂಭಾವನೆ ಮೊತ್ತ 1.62 ಕೋಟಿ ರೂ.

6 / 7
ಹಾಗೆಯೇ ವಿರಾಟ್ ಕೊಹ್ಲಿ ಕೂಡ ಈ ವರ್ಷ 27 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದಾರೆ. ಪ್ರತಿ ಪಂದ್ಯಕ್ಕೆ 6 ಲಕ್ಷ ರೂ.ನಂತೆ 2023 ರಲ್ಲಿ ಕಿಂಗ್ ಕೊಹ್ಲಿ 1.62 ಕೋಟಿ ರೂ. ಪಡೆದಿದ್ದಾರೆ.

ಹಾಗೆಯೇ ವಿರಾಟ್ ಕೊಹ್ಲಿ ಕೂಡ ಈ ವರ್ಷ 27 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದಾರೆ. ಪ್ರತಿ ಪಂದ್ಯಕ್ಕೆ 6 ಲಕ್ಷ ರೂ.ನಂತೆ 2023 ರಲ್ಲಿ ಕಿಂಗ್ ಕೊಹ್ಲಿ 1.62 ಕೋಟಿ ರೂ. ಪಡೆದಿದ್ದಾರೆ.

7 / 7
Follow us
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ