AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

Travis Head Record: ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲೇ ಟ್ರಾವಿಸ್ ಹೆಡ್ ವಿಸ್ಫೋಟಕ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಬರೆದಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 22, 2025 | 3:07 PM

Share
ಟೆಸ್ಟ್ ಕ್ರಿಕೆಟ್​ನಲ್ಲೂ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಶುರುವಾಗಿದೆ. ಅದು ಕೂಡ ಆರಂಭಿಕನಾಗಿ. ಪರ್ತ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯದ ದ್ಬಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಟ್ರಾವಿಸ್ ಹೆಡ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲೂ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಶುರುವಾಗಿದೆ. ಅದು ಕೂಡ ಆರಂಭಿಕನಾಗಿ. ಪರ್ತ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯದ ದ್ಬಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಟ್ರಾವಿಸ್ ಹೆಡ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

1 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 205 ರನ್​ಗಳ ಗುರಿ ಬೆನ್ನತ್ತಲು ಆಗಮಿಸಿದ ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಹೆಡ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 205 ರನ್​ಗಳ ಗುರಿ ಬೆನ್ನತ್ತಲು ಆಗಮಿಸಿದ ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಹೆಡ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 5
ಹಾಫ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಆರಂಭಿಕ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹೆಡ್ ತಮ್ಮದಾಗಿಸಿಕೊಂಡರು.

ಹಾಫ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಆರಂಭಿಕ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹೆಡ್ ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. 2012 ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಾರ್ನರ್ 69 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಟ್ರಾವಿಸ್ ಹೆಡ್ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. 2012 ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಾರ್ನರ್ 69 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಟ್ರಾವಿಸ್ ಹೆಡ್ ಅಗ್ರಸ್ಥಾನಕ್ಕೇರಿದ್ದಾರೆ.

4 / 5
ಅಷ್ಟೇ ಅಲ್ಲದೆ ಆ್ಯಶಸ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಆ್ಯಡಂ ಗಿಲ್​ಕ್ರಿಸ್ಟ್ (57) ಅಗ್ರಸ್ಥಾನದಲ್ಲಿದ್ದು, ಇದೀಗ 69 ಎಸೆತಗಳ ಸೆಂಚುರಿಯೊಂದಿಗೆ ಟ್ರಾವಿಸ್ ಹೆಡ್ ಆ್ಯಶಸ್​ನ ಸ್ಫೋಟಕ ಸೆಂಚುರಿ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.

ಅಷ್ಟೇ ಅಲ್ಲದೆ ಆ್ಯಶಸ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಆ್ಯಡಂ ಗಿಲ್​ಕ್ರಿಸ್ಟ್ (57) ಅಗ್ರಸ್ಥಾನದಲ್ಲಿದ್ದು, ಇದೀಗ 69 ಎಸೆತಗಳ ಸೆಂಚುರಿಯೊಂದಿಗೆ ಟ್ರಾವಿಸ್ ಹೆಡ್ ಆ್ಯಶಸ್​ನ ಸ್ಫೋಟಕ ಸೆಂಚುರಿ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ