AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಾಂಖೆಡೆಯಲ್ಲಿ ಬೌಲ್ಟ್ ಬಿರುಗಾಳಿಗೆ ಹೊಸ ಇತಿಹಾಸ ಸೃಷ್ಟಿ..!

IPL 2024: ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Apr 01, 2024 | 9:47 PM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 126 ರನ್ ಕಲೆಹಾಕಿದೆ. ಇನ್ನಿಂಗ್ಸ್ ಆರಂಭದಿಂದಲೇ ಮುಂಬೈ ಬ್ಯಾಟರ್​ಗಳ ಮೇಲೆ ಸವಾರಿ ಮಾಡುವಲ್ಲಿ ರಾಜಸ್ಥಾನ್ ವೇಗಿಗಳು ಯಶಸ್ವಿಯಾದರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 126 ರನ್ ಕಲೆಹಾಕಿದೆ. ಇನ್ನಿಂಗ್ಸ್ ಆರಂಭದಿಂದಲೇ ಮುಂಬೈ ಬ್ಯಾಟರ್​ಗಳ ಮೇಲೆ ಸವಾರಿ ಮಾಡುವಲ್ಲಿ ರಾಜಸ್ಥಾನ್ ವೇಗಿಗಳು ಯಶಸ್ವಿಯಾದರು.

1 / 8
ಅದರಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸುವ ಕಲೆಯನ್ನು ಕರಗತ ಮಾಡಿಕೊಂಡಿರುವ ರಾಜಸ್ಥಾನ್ ವೇಗಿ ಟ್ರೆಂಟ್ ಬೌಲ್ಟ್ ಮುಂಬೈ ವಿರುದ್ಧದ ಪಂದ್ಯದಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಪ್ರಮುಖ 2 ವಿಕೆಟ್​ಗಳನ್ನು ಶೂನ್ಯಕ್ಕೆ ಉರುಳಿಸಿದರು.

ಅದರಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸುವ ಕಲೆಯನ್ನು ಕರಗತ ಮಾಡಿಕೊಂಡಿರುವ ರಾಜಸ್ಥಾನ್ ವೇಗಿ ಟ್ರೆಂಟ್ ಬೌಲ್ಟ್ ಮುಂಬೈ ವಿರುದ್ಧದ ಪಂದ್ಯದಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಪ್ರಮುಖ 2 ವಿಕೆಟ್​ಗಳನ್ನು ಶೂನ್ಯಕ್ಕೆ ಉರುಳಿಸಿದರು.

2 / 8
ಮುಂಬೈ ಪರ ಇನ್ನಿಂಗ್ಸ್ ಆರಂಭಿಸಲು ಬಂದಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಬೌಲ್ಟ್ ಎಸೆದ ಇನ್ನಿಂಗ್ಸ್​ನ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ರೋಹಿತ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.

ಮುಂಬೈ ಪರ ಇನ್ನಿಂಗ್ಸ್ ಆರಂಭಿಸಲು ಬಂದಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಬೌಲ್ಟ್ ಎಸೆದ ಇನ್ನಿಂಗ್ಸ್​ನ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ರೋಹಿತ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.

3 / 8
ರೋಹಿತ್ ನಂತರ ಬಂದ ನಮನ್ ದೀರ್ ಕೂಡ ಮುಂದಿನ ಎಸೆತದಲ್ಲಿ ಅಂದರೆ ಮೊದಲ ಓವರ್​ನ 6ನೇ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಇದರೊಂದಿಗೆ ಬೌಲ್ಟ್ ತಾವು ಎಸೆದ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಇಬ್ಬರು ಬ್ಯಾಟರ್​ಗಳನ್ನು ಪೆವಿಲಿಯನ್‌ಗಟ್ಟಿದರು. ಈ ಮೂಲಕ ಐಪಿಎಲ್​ನಲ್ಲಿ ವಿಶಿಷ್ಠ ದಾಖಲೆ ಕೂಡ ನಿರ್ಮಿಸಿದರು.

ರೋಹಿತ್ ನಂತರ ಬಂದ ನಮನ್ ದೀರ್ ಕೂಡ ಮುಂದಿನ ಎಸೆತದಲ್ಲಿ ಅಂದರೆ ಮೊದಲ ಓವರ್​ನ 6ನೇ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಇದರೊಂದಿಗೆ ಬೌಲ್ಟ್ ತಾವು ಎಸೆದ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಇಬ್ಬರು ಬ್ಯಾಟರ್​ಗಳನ್ನು ಪೆವಿಲಿಯನ್‌ಗಟ್ಟಿದರು. ಈ ಮೂಲಕ ಐಪಿಎಲ್​ನಲ್ಲಿ ವಿಶಿಷ್ಠ ದಾಖಲೆ ಕೂಡ ನಿರ್ಮಿಸಿದರು.

4 / 8
ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

5 / 8
ಬೌಲ್ಟ್ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲಿ ಇದುವರೆಗೆ ತಲಾ 25 ವಿಕೆಟ್​​ಗಳನ್ನು ಉರುಳಿಸಿದ್ದಾರೆ. ಆದರೆ ಈ ಸಾಧನೆ ಮಾಡಲು ಇಬ್ಬರು ವೇಗಿಗಳು ತೆಗೆದುಕೊಂಡಿರುವ ಇನ್ನಿಂಗ್ಸ್​ಗಳನ್ನು ನೋಡುವುದಾದರೆ.. ಬೌಲ್ಟ್ ಮೇಲುಗೈ ಸಾಧಿಸಿದ್ದಾರೆ.

ಬೌಲ್ಟ್ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲಿ ಇದುವರೆಗೆ ತಲಾ 25 ವಿಕೆಟ್​​ಗಳನ್ನು ಉರುಳಿಸಿದ್ದಾರೆ. ಆದರೆ ಈ ಸಾಧನೆ ಮಾಡಲು ಇಬ್ಬರು ವೇಗಿಗಳು ತೆಗೆದುಕೊಂಡಿರುವ ಇನ್ನಿಂಗ್ಸ್​ಗಳನ್ನು ನೋಡುವುದಾದರೆ.. ಬೌಲ್ಟ್ ಮೇಲುಗೈ ಸಾಧಿಸಿದ್ದಾರೆ.

6 / 8
ಬೌಲ್ಟ್ 80 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಉರುಳಿಸಿದ ದಾಖಲೆ ಬರೆದರೆ, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 116 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ಬೌಲ್ಟ್ 80 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಉರುಳಿಸಿದ ದಾಖಲೆ ಬರೆದರೆ, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 116 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

7 / 8
ಇದಲ್ಲದೆ ಈ ಪಂದ್ಯದ ಮೊದಲ ಓವರ್​ನಲ್ಲಿ 2 ವಿಕೆಟ್ ಪಡೆದ ಬೌಲ್ಟ್ ಮೊದಲ ಓವರ್​ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳ ಪೈಕಿ ತಮ್ಮ ಅಗ್ರಸ್ಥಾನವನ್ನು ಮತ್ತಷ್ಟು ಬಲಿಷ್ಠಗೊಳಿಸಿಕೊಂಡಿದ್ದಾರೆ. ಬೌಲ್ಟ್ ಇದುವರೆಗೆ 5 ಬಾರಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್‌ನ ಮೊದಲ ಓವರ್‌ನಲ್ಲಿ ಡೇಲ್ ಸ್ಟೇಯ್ನ್, ಪ್ರವೀಣ್ ಕುಮಾರ್ ಮತ್ತು ಉಮೇಶ್ ಯಾದವ್ ತಲಾ 2 ಬಾರಿ 2 ವಿಕೆಟ್ ಪಡೆದಿದ್ದರು.

ಇದಲ್ಲದೆ ಈ ಪಂದ್ಯದ ಮೊದಲ ಓವರ್​ನಲ್ಲಿ 2 ವಿಕೆಟ್ ಪಡೆದ ಬೌಲ್ಟ್ ಮೊದಲ ಓವರ್​ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳ ಪೈಕಿ ತಮ್ಮ ಅಗ್ರಸ್ಥಾನವನ್ನು ಮತ್ತಷ್ಟು ಬಲಿಷ್ಠಗೊಳಿಸಿಕೊಂಡಿದ್ದಾರೆ. ಬೌಲ್ಟ್ ಇದುವರೆಗೆ 5 ಬಾರಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್‌ನ ಮೊದಲ ಓವರ್‌ನಲ್ಲಿ ಡೇಲ್ ಸ್ಟೇಯ್ನ್, ಪ್ರವೀಣ್ ಕುಮಾರ್ ಮತ್ತು ಉಮೇಶ್ ಯಾದವ್ ತಲಾ 2 ಬಾರಿ 2 ವಿಕೆಟ್ ಪಡೆದಿದ್ದರು.

8 / 8
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ