AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಾಂಖೆಡೆಯಲ್ಲಿ ಬೌಲ್ಟ್ ಬಿರುಗಾಳಿಗೆ ಹೊಸ ಇತಿಹಾಸ ಸೃಷ್ಟಿ..!

IPL 2024: ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Apr 01, 2024 | 9:47 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 126 ರನ್ ಕಲೆಹಾಕಿದೆ. ಇನ್ನಿಂಗ್ಸ್ ಆರಂಭದಿಂದಲೇ ಮುಂಬೈ ಬ್ಯಾಟರ್​ಗಳ ಮೇಲೆ ಸವಾರಿ ಮಾಡುವಲ್ಲಿ ರಾಜಸ್ಥಾನ್ ವೇಗಿಗಳು ಯಶಸ್ವಿಯಾದರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 126 ರನ್ ಕಲೆಹಾಕಿದೆ. ಇನ್ನಿಂಗ್ಸ್ ಆರಂಭದಿಂದಲೇ ಮುಂಬೈ ಬ್ಯಾಟರ್​ಗಳ ಮೇಲೆ ಸವಾರಿ ಮಾಡುವಲ್ಲಿ ರಾಜಸ್ಥಾನ್ ವೇಗಿಗಳು ಯಶಸ್ವಿಯಾದರು.

1 / 8
ಅದರಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸುವ ಕಲೆಯನ್ನು ಕರಗತ ಮಾಡಿಕೊಂಡಿರುವ ರಾಜಸ್ಥಾನ್ ವೇಗಿ ಟ್ರೆಂಟ್ ಬೌಲ್ಟ್ ಮುಂಬೈ ವಿರುದ್ಧದ ಪಂದ್ಯದಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಪ್ರಮುಖ 2 ವಿಕೆಟ್​ಗಳನ್ನು ಶೂನ್ಯಕ್ಕೆ ಉರುಳಿಸಿದರು.

ಅದರಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸುವ ಕಲೆಯನ್ನು ಕರಗತ ಮಾಡಿಕೊಂಡಿರುವ ರಾಜಸ್ಥಾನ್ ವೇಗಿ ಟ್ರೆಂಟ್ ಬೌಲ್ಟ್ ಮುಂಬೈ ವಿರುದ್ಧದ ಪಂದ್ಯದಲ್ಲೂ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಪ್ರಮುಖ 2 ವಿಕೆಟ್​ಗಳನ್ನು ಶೂನ್ಯಕ್ಕೆ ಉರುಳಿಸಿದರು.

2 / 8
ಮುಂಬೈ ಪರ ಇನ್ನಿಂಗ್ಸ್ ಆರಂಭಿಸಲು ಬಂದಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಬೌಲ್ಟ್ ಎಸೆದ ಇನ್ನಿಂಗ್ಸ್​ನ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ರೋಹಿತ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.

ಮುಂಬೈ ಪರ ಇನ್ನಿಂಗ್ಸ್ ಆರಂಭಿಸಲು ಬಂದಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಬೌಲ್ಟ್ ಎಸೆದ ಇನ್ನಿಂಗ್ಸ್​ನ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ರೋಹಿತ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.

3 / 8
ರೋಹಿತ್ ನಂತರ ಬಂದ ನಮನ್ ದೀರ್ ಕೂಡ ಮುಂದಿನ ಎಸೆತದಲ್ಲಿ ಅಂದರೆ ಮೊದಲ ಓವರ್​ನ 6ನೇ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಇದರೊಂದಿಗೆ ಬೌಲ್ಟ್ ತಾವು ಎಸೆದ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಇಬ್ಬರು ಬ್ಯಾಟರ್​ಗಳನ್ನು ಪೆವಿಲಿಯನ್‌ಗಟ್ಟಿದರು. ಈ ಮೂಲಕ ಐಪಿಎಲ್​ನಲ್ಲಿ ವಿಶಿಷ್ಠ ದಾಖಲೆ ಕೂಡ ನಿರ್ಮಿಸಿದರು.

ರೋಹಿತ್ ನಂತರ ಬಂದ ನಮನ್ ದೀರ್ ಕೂಡ ಮುಂದಿನ ಎಸೆತದಲ್ಲಿ ಅಂದರೆ ಮೊದಲ ಓವರ್​ನ 6ನೇ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಇದರೊಂದಿಗೆ ಬೌಲ್ಟ್ ತಾವು ಎಸೆದ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಇಬ್ಬರು ಬ್ಯಾಟರ್​ಗಳನ್ನು ಪೆವಿಲಿಯನ್‌ಗಟ್ಟಿದರು. ಈ ಮೂಲಕ ಐಪಿಎಲ್​ನಲ್ಲಿ ವಿಶಿಷ್ಠ ದಾಖಲೆ ಕೂಡ ನಿರ್ಮಿಸಿದರು.

4 / 8
ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಪಂದ್ಯದ ಮೊದಲ ಓವರ್​ನಲ್ಲಿ ಎರಡು ವಿಕೆಟ್ ಪಡೆದ ಬೌಲ್ಟ್ ಇನ್ನಿಂಗ್ಸ್​ನ ಮೊದಲ ಓವರ್​ನಲ್ಲಿ ಅಧಿಕ ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅವರೊಂದಗೆ ಜಂಟಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

5 / 8
ಬೌಲ್ಟ್ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲಿ ಇದುವರೆಗೆ ತಲಾ 25 ವಿಕೆಟ್​​ಗಳನ್ನು ಉರುಳಿಸಿದ್ದಾರೆ. ಆದರೆ ಈ ಸಾಧನೆ ಮಾಡಲು ಇಬ್ಬರು ವೇಗಿಗಳು ತೆಗೆದುಕೊಂಡಿರುವ ಇನ್ನಿಂಗ್ಸ್​ಗಳನ್ನು ನೋಡುವುದಾದರೆ.. ಬೌಲ್ಟ್ ಮೇಲುಗೈ ಸಾಧಿಸಿದ್ದಾರೆ.

ಬೌಲ್ಟ್ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲಿ ಇದುವರೆಗೆ ತಲಾ 25 ವಿಕೆಟ್​​ಗಳನ್ನು ಉರುಳಿಸಿದ್ದಾರೆ. ಆದರೆ ಈ ಸಾಧನೆ ಮಾಡಲು ಇಬ್ಬರು ವೇಗಿಗಳು ತೆಗೆದುಕೊಂಡಿರುವ ಇನ್ನಿಂಗ್ಸ್​ಗಳನ್ನು ನೋಡುವುದಾದರೆ.. ಬೌಲ್ಟ್ ಮೇಲುಗೈ ಸಾಧಿಸಿದ್ದಾರೆ.

6 / 8
ಬೌಲ್ಟ್ 80 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಉರುಳಿಸಿದ ದಾಖಲೆ ಬರೆದರೆ, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 116 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ಬೌಲ್ಟ್ 80 ಇನ್ನಿಂಗ್ಸ್‌ಗಳಲ್ಲಿ 25 ವಿಕೆಟ್ ಉರುಳಿಸಿದ ದಾಖಲೆ ಬರೆದರೆ, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 116 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

7 / 8
ಇದಲ್ಲದೆ ಈ ಪಂದ್ಯದ ಮೊದಲ ಓವರ್​ನಲ್ಲಿ 2 ವಿಕೆಟ್ ಪಡೆದ ಬೌಲ್ಟ್ ಮೊದಲ ಓವರ್​ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳ ಪೈಕಿ ತಮ್ಮ ಅಗ್ರಸ್ಥಾನವನ್ನು ಮತ್ತಷ್ಟು ಬಲಿಷ್ಠಗೊಳಿಸಿಕೊಂಡಿದ್ದಾರೆ. ಬೌಲ್ಟ್ ಇದುವರೆಗೆ 5 ಬಾರಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್‌ನ ಮೊದಲ ಓವರ್‌ನಲ್ಲಿ ಡೇಲ್ ಸ್ಟೇಯ್ನ್, ಪ್ರವೀಣ್ ಕುಮಾರ್ ಮತ್ತು ಉಮೇಶ್ ಯಾದವ್ ತಲಾ 2 ಬಾರಿ 2 ವಿಕೆಟ್ ಪಡೆದಿದ್ದರು.

ಇದಲ್ಲದೆ ಈ ಪಂದ್ಯದ ಮೊದಲ ಓವರ್​ನಲ್ಲಿ 2 ವಿಕೆಟ್ ಪಡೆದ ಬೌಲ್ಟ್ ಮೊದಲ ಓವರ್​ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್​ಗಳ ಪೈಕಿ ತಮ್ಮ ಅಗ್ರಸ್ಥಾನವನ್ನು ಮತ್ತಷ್ಟು ಬಲಿಷ್ಠಗೊಳಿಸಿಕೊಂಡಿದ್ದಾರೆ. ಬೌಲ್ಟ್ ಇದುವರೆಗೆ 5 ಬಾರಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್‌ನ ಮೊದಲ ಓವರ್‌ನಲ್ಲಿ ಡೇಲ್ ಸ್ಟೇಯ್ನ್, ಪ್ರವೀಣ್ ಕುಮಾರ್ ಮತ್ತು ಉಮೇಶ್ ಯಾದವ್ ತಲಾ 2 ಬಾರಿ 2 ವಿಕೆಟ್ ಪಡೆದಿದ್ದರು.

8 / 8
Follow us
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ