AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs SLW: 59 ರನ್​ಗೆ ಲಂಕಾ ಕಟ್ಟಿ ಹಾಕಿದ ಶಫಾಲಿ ಪಡೆ: ಅಂಡರ್-19 ವಿಶ್ವಕಪ್​ನಲ್ಲಿ ಭಾರತೀಯ ಮಹಿಳೆಯರ ಭರ್ಜರಿ ಕಮ್​ಬ್ಯಾಕ್

India vs Sri Lanka U19 Women’s T20 World Cup: ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಶಫಾಲಿ ಪಡೆಯ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಹೀನಾಯ ಸೋಲು ಕಂಡಿತು. ಈ ಗೆಲುವಿನ ಮೂಲಕ ಭಾರತ ಸೂಪರ್ 6 ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

TV9 Web
| Edited By: |

Updated on:Jan 23, 2023 | 9:06 AM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ತಂಡ ಗುಂಪು ಹಂತದ ಎಲ್ಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಸೂಪರ್ 6 ಹಂತಕ್ಕೆ ತೇರ್ಗಡೆ ಆಗಿತ್ತು. ಆದರೆ, ಸೂಪರ್ ಸಿಕ್ಸ್​ನ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ಮಹಿಳೆಯರ ವಿರುದ್ಧ ಸೋಲು ಕಂಡು ಹಿನ್ನಡೆ ಅನುಭವಿಸಿತು.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ತಂಡ ಗುಂಪು ಹಂತದ ಎಲ್ಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಸೂಪರ್ 6 ಹಂತಕ್ಕೆ ತೇರ್ಗಡೆ ಆಗಿತ್ತು. ಆದರೆ, ಸೂಪರ್ ಸಿಕ್ಸ್​ನ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ಮಹಿಳೆಯರ ವಿರುದ್ಧ ಸೋಲು ಕಂಡು ಹಿನ್ನಡೆ ಅನುಭವಿಸಿತು.

1 / 9
ಇದೀಗ ಶ್ರೀಲಂಕಾ ವಿರುದ್ಧ ಆಡಿದ ದ್ವಿತೀಯ ಪಂದ್ಯದಲ್ಲಿ ಬೊಂಬಾಟ್ ಕಮ್​ಬ್ಯಾಕ್ ಮಾಡಿರುವ ಭಾರತ ಮಹಿಳಾ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿದೆ.

ಇದೀಗ ಶ್ರೀಲಂಕಾ ವಿರುದ್ಧ ಆಡಿದ ದ್ವಿತೀಯ ಪಂದ್ಯದಲ್ಲಿ ಬೊಂಬಾಟ್ ಕಮ್​ಬ್ಯಾಕ್ ಮಾಡಿರುವ ಭಾರತ ಮಹಿಳಾ ತಂಡ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿದೆ.

2 / 9
ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಶಫಾಲಿ ಪಡೆಯ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಹೀನಾಯ ಸೋಲು ಕಂಡಿತು. ಈ ಗೆಲುವಿನ ಮೂಲಕ ಭಾರತ ಸೂಪರ್ 6 ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಶಫಾಲಿ ಪಡೆಯ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಹೀನಾಯ ಸೋಲು ಕಂಡಿತು. ಈ ಗೆಲುವಿನ ಮೂಲಕ ಭಾರತ ಸೂಪರ್ 6 ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

3 / 9
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಂಕಾ ಅರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಟೈಟಾಸ್ ಸಾಧು ಅವರ ಮೊದಲ ಓವರ್​ನ ಮೊದಲ ಎಸೆತದಲ್ಲೇ ನೆಥ್ಮಿ ಸೇನರತ್ನೆ ಔಟಾದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಂಕಾ ಅರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಟೈಟಾಸ್ ಸಾಧು ಅವರ ಮೊದಲ ಓವರ್​ನ ಮೊದಲ ಎಸೆತದಲ್ಲೇ ನೆಥ್ಮಿ ಸೇನರತ್ನೆ ಔಟಾದರು.

4 / 9
ಇನ್ನಿಂಗ್ಸ್​ನ ದ್ವಿತೀಯ ಓವರ್​ನಲ್ಲಿ ಸುಮುದು ನಿಸಂಸಲ(2) ನಿರ್ಗಮಿಸಿದರು. ತಂಡದ ಪರ ನಾಯಕಿ ವಿಶ್ಮಿ ಗುಣರತ್ನೆ 28 ಎಸೆತಗಳಲ್ಲಿ 25 ರನ್ ಗಳಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್​​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

ಇನ್ನಿಂಗ್ಸ್​ನ ದ್ವಿತೀಯ ಓವರ್​ನಲ್ಲಿ ಸುಮುದು ನಿಸಂಸಲ(2) ನಿರ್ಗಮಿಸಿದರು. ತಂಡದ ಪರ ನಾಯಕಿ ವಿಶ್ಮಿ ಗುಣರತ್ನೆ 28 ಎಸೆತಗಳಲ್ಲಿ 25 ರನ್ ಗಳಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್​​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

5 / 9
ಶ್ರೀಲಂಕಾ ಅಂಡರ್-19 ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 59 ರನ್​ಗಳನ್ನಷ್ಟೆ ಕಲೆಹಾಕಿತು. ಭಾರತ ಪರ ಪಾರ್ಶವಿ ಚೋಪ್ರಾ 4 ಓವರ್​ನಲ್ಲಿ 1 ಮೇಡನ್ ಹಾಗೂ ಕೇವಲ 5 ರನ್ ನೀಡಿ 4 ವಿಕೆಟ್ ಕಿತ್ತರು. ಮನ್ನತ್ ಕಶ್ಯಪ್ 2, ಟೈಟಾಸ್ ಸಾಧು ಹಾಗೂ ಅರ್ಚನಾ ದೇವಿ ತಲಾ 1 ವಿಕೆಟ್ ಪಡೆದರು.

ಶ್ರೀಲಂಕಾ ಅಂಡರ್-19 ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 59 ರನ್​ಗಳನ್ನಷ್ಟೆ ಕಲೆಹಾಕಿತು. ಭಾರತ ಪರ ಪಾರ್ಶವಿ ಚೋಪ್ರಾ 4 ಓವರ್​ನಲ್ಲಿ 1 ಮೇಡನ್ ಹಾಗೂ ಕೇವಲ 5 ರನ್ ನೀಡಿ 4 ವಿಕೆಟ್ ಕಿತ್ತರು. ಮನ್ನತ್ ಕಶ್ಯಪ್ 2, ಟೈಟಾಸ್ ಸಾಧು ಹಾಗೂ ಅರ್ಚನಾ ದೇವಿ ತಲಾ 1 ವಿಕೆಟ್ ಪಡೆದರು.

6 / 9
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ 3 ವಿಕೆಟ್ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹಿನ್ನಡೆ ಆಗಲಿಲ್ಲ. ನಾಯಕಿ ಶಫಾಲಿ ವರ್ಮಾ 15 ರನ್​ಗೆ ಔಟಾದರೆ, ಶ್ವೇತಾ ಸೆಹ್ರಾವತ್ 13 ರನ್ ಗಳಿಸಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ 3 ವಿಕೆಟ್ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹಿನ್ನಡೆ ಆಗಲಿಲ್ಲ. ನಾಯಕಿ ಶಫಾಲಿ ವರ್ಮಾ 15 ರನ್​ಗೆ ಔಟಾದರೆ, ಶ್ವೇತಾ ಸೆಹ್ರಾವತ್ 13 ರನ್ ಗಳಿಸಿದರು.

7 / 9
ರಿಚ್ಚಾ ಘೋಷ್ 4 ರನ್​ಗೆ ನಿರ್ಗಮಿಸಿದರು. ಸೌಮ್ಯ ತಿವಾರಿ 15 ಎಸೆತಗಳಲ್ಲಿ ಅಜೇಯ 28 ರನ್ ಕಲೆಹಾಕಿ ವಿನ್ನಿಂಗ್ ಶಾಟ್ ಹೊಡೆದರು.

ರಿಚ್ಚಾ ಘೋಷ್ 4 ರನ್​ಗೆ ನಿರ್ಗಮಿಸಿದರು. ಸೌಮ್ಯ ತಿವಾರಿ 15 ಎಸೆತಗಳಲ್ಲಿ ಅಜೇಯ 28 ರನ್ ಕಲೆಹಾಕಿ ವಿನ್ನಿಂಗ್ ಶಾಟ್ ಹೊಡೆದರು.

8 / 9
ಭಾರತ ಮಹಿಳಾ ತಂಡ ಕೇವಲ 7.2 ಓವರ್​​ಗಳಲ್ಲೇ 3 ವಿಕೆಟ್ ನಷ್ಟಕ್ಕೆ 60 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಲಂಕಾ ಪರ ದೇವ್​ಮಿ ವಿಹಂಗಾ 3 ವಿಕೆಟ್ ಪಡೆದರು.

ಭಾರತ ಮಹಿಳಾ ತಂಡ ಕೇವಲ 7.2 ಓವರ್​​ಗಳಲ್ಲೇ 3 ವಿಕೆಟ್ ನಷ್ಟಕ್ಕೆ 60 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಲಂಕಾ ಪರ ದೇವ್​ಮಿ ವಿಹಂಗಾ 3 ವಿಕೆಟ್ ಪಡೆದರು.

9 / 9

Published On - 9:06 am, Mon, 23 January 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ