AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs PBKS: ಇದು ಹೇಗೆ ಸಾಧ್ಯ?: ರೋಹಿತ್, ಕ್ರಿಸ್ ಗೇಲ್ ದಾಖಲೆ ಪುಡಿಗಟ್ಟಿದ ಬೌಲರ್ ಉಮೇಶ್ ಯಾದವ್

Umesh Yadav, IPL 2022: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಉಮೇಶ್ ಯಾದವ್ ಬೆಂಕಿಯ ಚೆಂಡು ಉಗುಳಿ 4 ವಿಕೆಟ್ ಪಡೆದರು. ಇದರ ಜೊತೆಗೆ ಉಮೇಶ್ ಅವರು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಐಪಿಎಲ್​ನ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.

Vinay Bhat
|

Updated on:Apr 02, 2022 | 12:57 PM

ಐಪಿಎಲ್ 2022 ಆರಂಭಕ್ಕೂ ಮುನ್ನ ಆರ್ ಸಿಬಿ ಕೈಬಿಟ್ಟ ಪರಿಣಾಮ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿರುವ ಉಮೇಶ್ ಯಾದವ್ ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಈವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ 8 ವಿಕೆಟ್ ಕಬಳಿಸಿ ಈ ಬಾರಿ ಅತಿ ಹೆಚ್ಚು ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಬೆಂಕಿಯ ಚೆಂಡು ಉಗುಳಿ 4 ವಿಕೆಟ್ ಪಡೆದರು. ಇದರ ಜೊತೆಗೆ ಉಮೇಶ್ ಅವರು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಐಪಿಎಲ್ ನ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.

1 / 5
ಉಮೇಶ್ ಯಾದವ್ ಬೌಲರ್. ಮತ್ತೊಂದೆಡೆ, ರೋಹಿತ್ ಮತ್ತು ಗೇಲ್ ಬ್ಯಾಟರ್ ಗಳು. ಹಾಗಾದರೆ ಒಬ್ಬ ಬೌಲರ್ ಇಬ್ಬರು ಬ್ಯಾಟರ್ ಗಳ ದಾಖಲೆಯನ್ನು ಹೇಗೆ ಮುರಿಯಬಹುದು? ಎಂದು ಯೋಚಿಸುತ್ತೀರಿ ಅಲ್ವ. ಈ ದಾಖಲೆಯನ್ನು ಪಂದ್ಯಶ್ರೇಷ್ಠ ಪ್ರಶಸ್ತಿ ಮೂಲಕ ಪುಡಿ ಮಾಡಬಹುದು. ಹೌದು, ಉಮೇಶ್ ಯಾದವ್ ಐಪಿಎಲ್ ನಲ್ಲಿ ಒಂದು ಎದುರಾಳಿ ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಮತ್ತು ಯೂಸುಫ್ ಪಠಾಣ್ ದಾಖಲೆಯನ್ನು ಪುಡಿ ಮಾಡಿದ್ದಾರೆ.

2 / 5
ಉಮೇಶ್ ಯಾದವ್ ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರನೇ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು. ರೋಹಿತ್, ಗೇಲ್ ಮತ್ತು ಯೂಸುಫ್ ಪಠಾಣ್ ಯಾವುದೇ ಎದುರಾಳಿಯ ಒಂದು ಐಪಿಎಲ್ ತಂಡದ ವಿರುದ್ಧ 5 ಬಾರಿ ಪಂದ್ಯ ಶ್ರೇಷ್ಠರಾಗಿದ್ದಾರಷ್ಟೆ.

3 / 5
ರೋಹಿತ್ ಶರ್ಮಾ ಕೆಕೆಆರ್ ವಿರುದ್ಧ 5 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಕ್ರಿಸ್ ಗೇಲ್ ಕೂಡ ಕೆಕೆಆರ್ ವಿರುದ್ಧ 5 ಬಾರಿ ಮತ್ತು ಯೂಸುಫ್ ಪಠಾಣ್ ಡೆಕ್ಕನ್ ಚಾರ್ಜರ್ಸ್ ವಿರುದ್ಧ 5 ಬಾರಿ ಪಂದ್ಯ ಶ್ರೇಷ್ಠ ತಮ್ಮದಾಗಿಸಿದ್ದರು. ಇದೀಗ ಉಮೇಶ್ ಪಂಜಾಬ್ ವಿರುದ್ಧ ಆರನೇ ಬಾರಿ ಪಂದ್ಯಶ್ರೇಷ್ಠ ಬಾಜಿಕೊಂಡು ಎಲ್ಲ ದಾಖಲೆ ಅಳಿಸಿ ಹಾಕಿದ್ದಾರೆ.

4 / 5
ಈ ಮೂವರು ಆಟಗಾರರ ದಾಖಲೆ ಮುರಿದಿದ್ದಲ್ಲದೆ ಉಮೇಶ್ ಯಾದವ್ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ವೇಗಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 4 ಓವರ್ ಗಳಲ್ಲಿ 4 ವಿಕೆಟ್ ಗಳನ್ನು ಕಬಳಿಸಿ ಮಿಂಚಿದ್ದರು.

5 / 5

Published On - 11:06 am, Sat, 2 April 22

Follow us
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ