AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs PBKS: ಇದು ಹೇಗೆ ಸಾಧ್ಯ?: ರೋಹಿತ್, ಕ್ರಿಸ್ ಗೇಲ್ ದಾಖಲೆ ಪುಡಿಗಟ್ಟಿದ ಬೌಲರ್ ಉಮೇಶ್ ಯಾದವ್

Umesh Yadav, IPL 2022: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಉಮೇಶ್ ಯಾದವ್ ಬೆಂಕಿಯ ಚೆಂಡು ಉಗುಳಿ 4 ವಿಕೆಟ್ ಪಡೆದರು. ಇದರ ಜೊತೆಗೆ ಉಮೇಶ್ ಅವರು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಐಪಿಎಲ್​ನ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.

Vinay Bhat
|

Updated on:Apr 02, 2022 | 12:57 PM

Share
ಐಪಿಎಲ್ 2022 ಆರಂಭಕ್ಕೂ ಮುನ್ನ ಆರ್ ಸಿಬಿ ಕೈಬಿಟ್ಟ ಪರಿಣಾಮ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿರುವ ಉಮೇಶ್ ಯಾದವ್ ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಈವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ 8 ವಿಕೆಟ್ ಕಬಳಿಸಿ ಈ ಬಾರಿ ಅತಿ ಹೆಚ್ಚು ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಬೆಂಕಿಯ ಚೆಂಡು ಉಗುಳಿ 4 ವಿಕೆಟ್ ಪಡೆದರು. ಇದರ ಜೊತೆಗೆ ಉಮೇಶ್ ಅವರು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಐಪಿಎಲ್ ನ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.

1 / 5
ಉಮೇಶ್ ಯಾದವ್ ಬೌಲರ್. ಮತ್ತೊಂದೆಡೆ, ರೋಹಿತ್ ಮತ್ತು ಗೇಲ್ ಬ್ಯಾಟರ್ ಗಳು. ಹಾಗಾದರೆ ಒಬ್ಬ ಬೌಲರ್ ಇಬ್ಬರು ಬ್ಯಾಟರ್ ಗಳ ದಾಖಲೆಯನ್ನು ಹೇಗೆ ಮುರಿಯಬಹುದು? ಎಂದು ಯೋಚಿಸುತ್ತೀರಿ ಅಲ್ವ. ಈ ದಾಖಲೆಯನ್ನು ಪಂದ್ಯಶ್ರೇಷ್ಠ ಪ್ರಶಸ್ತಿ ಮೂಲಕ ಪುಡಿ ಮಾಡಬಹುದು. ಹೌದು, ಉಮೇಶ್ ಯಾದವ್ ಐಪಿಎಲ್ ನಲ್ಲಿ ಒಂದು ಎದುರಾಳಿ ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಮತ್ತು ಯೂಸುಫ್ ಪಠಾಣ್ ದಾಖಲೆಯನ್ನು ಪುಡಿ ಮಾಡಿದ್ದಾರೆ.

2 / 5
ಉಮೇಶ್ ಯಾದವ್ ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರನೇ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು. ರೋಹಿತ್, ಗೇಲ್ ಮತ್ತು ಯೂಸುಫ್ ಪಠಾಣ್ ಯಾವುದೇ ಎದುರಾಳಿಯ ಒಂದು ಐಪಿಎಲ್ ತಂಡದ ವಿರುದ್ಧ 5 ಬಾರಿ ಪಂದ್ಯ ಶ್ರೇಷ್ಠರಾಗಿದ್ದಾರಷ್ಟೆ.

3 / 5
ರೋಹಿತ್ ಶರ್ಮಾ ಕೆಕೆಆರ್ ವಿರುದ್ಧ 5 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಕ್ರಿಸ್ ಗೇಲ್ ಕೂಡ ಕೆಕೆಆರ್ ವಿರುದ್ಧ 5 ಬಾರಿ ಮತ್ತು ಯೂಸುಫ್ ಪಠಾಣ್ ಡೆಕ್ಕನ್ ಚಾರ್ಜರ್ಸ್ ವಿರುದ್ಧ 5 ಬಾರಿ ಪಂದ್ಯ ಶ್ರೇಷ್ಠ ತಮ್ಮದಾಗಿಸಿದ್ದರು. ಇದೀಗ ಉಮೇಶ್ ಪಂಜಾಬ್ ವಿರುದ್ಧ ಆರನೇ ಬಾರಿ ಪಂದ್ಯಶ್ರೇಷ್ಠ ಬಾಜಿಕೊಂಡು ಎಲ್ಲ ದಾಖಲೆ ಅಳಿಸಿ ಹಾಕಿದ್ದಾರೆ.

4 / 5
ಈ ಮೂವರು ಆಟಗಾರರ ದಾಖಲೆ ಮುರಿದಿದ್ದಲ್ಲದೆ ಉಮೇಶ್ ಯಾದವ್ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ವೇಗಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 4 ಓವರ್ ಗಳಲ್ಲಿ 4 ವಿಕೆಟ್ ಗಳನ್ನು ಕಬಳಿಸಿ ಮಿಂಚಿದ್ದರು.

5 / 5

Published On - 11:06 am, Sat, 2 April 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!