AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup: 5 ಬಾರಿ ಚಾಂಪಿಯನ್ಸ್​, 3 ಬಾರಿ ರನ್ನರ್ ಅಪ್: ಕಿರಿಯರ ವಿಶ್ವಕಪ್​ನಲ್ಲಿ ಭಾರತದ್ದೇ ಪಾರುಪತ್ಯ

Under-19 World Cup 2024: 15ನೇ ಅಂಡರ್ 19 ವಿಶ್ವಕಪ್​ನಲ್ಲಿ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 2 ವಿಕೆಟ್​ಗಳ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡವು ಸತತವಾಗಿ 5ನೇ ಬಾರಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹಾಗೆಯೇ ಇದು ಟೀಮ್ ಇಂಡಿಯಾದ 9ನೇ ಅಂಡರ್-19 ಫೈನಲ್​ ಪಂದ್ಯ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 07, 2024 | 7:09 AM

Share
ಅಂಡರ್​-19 ವಿಶ್ವಕಪ್​ 2024 ರ ಮೊದಲ ಸೆಮಿಫೈನಲ್​ನಲ್ಲಿ ಗೆದ್ದು ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ವಿಲ್ಲೊಮೂರ್ ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಟೀಮ್ ಇಂಡಿಯಾ ಕಿರಿಯರ ವಿಶ್ವಕಪ್​ನಲ್ಲಿ ಫೈನಲ್​ಗೆ ಪ್ರವೇಶಿಸಿದೆ.

ಅಂಡರ್​-19 ವಿಶ್ವಕಪ್​ 2024 ರ ಮೊದಲ ಸೆಮಿಫೈನಲ್​ನಲ್ಲಿ ಗೆದ್ದು ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ವಿಲ್ಲೊಮೂರ್ ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಟೀಮ್ ಇಂಡಿಯಾ ಕಿರಿಯರ ವಿಶ್ವಕಪ್​ನಲ್ಲಿ ಫೈನಲ್​ಗೆ ಪ್ರವೇಶಿಸಿದೆ.

1 / 8
ವಿಶೇಷ ಎಂದರೆ ಕಳೆದ 14 ಅಂಡರ್ 19 ವಿಶ್ವಕಪ್​​ನಲ್ಲಿ ಭಾರತ ತಂಡವು 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಇನ್ನು 3 ಬಾರಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಅಂದರೆ ಕಿರಿಯರ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದೀಗ ಉದಯ್ ಸಹರಾನ್ ನಾಯಕತ್ವದಲ್ಲಿ ಭಾರತ ತಂಡವು 9ನೇ ಬಾರಿ ಫೈನಲ್ ಆಡಲಿದ್ದು, ಈ ಬಾರಿ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಹಾಗಿದ್ರೆ ಭಾರತ ತಂಡ ಯಾವಾಗ ಅಂಡರ್ 19 ವಿಶ್ವಕಪ್ ಗೆದ್ದಿತ್ತು ಎಂಬುದನ್ನು ನೋಡೋಣ...

ವಿಶೇಷ ಎಂದರೆ ಕಳೆದ 14 ಅಂಡರ್ 19 ವಿಶ್ವಕಪ್​​ನಲ್ಲಿ ಭಾರತ ತಂಡವು 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಇನ್ನು 3 ಬಾರಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಅಂದರೆ ಕಿರಿಯರ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದೀಗ ಉದಯ್ ಸಹರಾನ್ ನಾಯಕತ್ವದಲ್ಲಿ ಭಾರತ ತಂಡವು 9ನೇ ಬಾರಿ ಫೈನಲ್ ಆಡಲಿದ್ದು, ಈ ಬಾರಿ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಹಾಗಿದ್ರೆ ಭಾರತ ತಂಡ ಯಾವಾಗ ಅಂಡರ್ 19 ವಿಶ್ವಕಪ್ ಗೆದ್ದಿತ್ತು ಎಂಬುದನ್ನು ನೋಡೋಣ...

2 / 8
2000: ಮೊಹಮ್ಮದ್ ಕೈಫ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2000 ರಲ್ಲಿ ಮೊದಲ ಬಾರಿ ಅಂಡರ್ 19 ವಿಶ್ವಕಪ್​ನಲ್ಲಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 178 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 180 ರನ್ ಗಳಿಸಿ  ಚೊಚ್ಚಲ ವಿಶ್ವಕಪ್ ಮುಡಿಗೇರಿಕೊಂಡಿತು.

2000: ಮೊಹಮ್ಮದ್ ಕೈಫ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2000 ರಲ್ಲಿ ಮೊದಲ ಬಾರಿ ಅಂಡರ್ 19 ವಿಶ್ವಕಪ್​ನಲ್ಲಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 178 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 180 ರನ್ ಗಳಿಸಿ ಚೊಚ್ಚಲ ವಿಶ್ವಕಪ್ ಮುಡಿಗೇರಿಕೊಂಡಿತು.

3 / 8
2008: 2000 ರಲ್ಲಿ ಭಾರತ ತಂಡ ಮೊದಲ ಅಂಡರ್-19 ವಿಶ್ವಕಪ್ ಗೆದ್ದರೂ ಎರಡನೇ ಬಾರಿಗೆ ಟ್ರೋಫಿ ಗೆಲ್ಲಲು ಬರೋಬ್ಬರಿ 8 ವರ್ಷ ಕಾಯಬೇಕಾಯಿತು. 2008 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಸೌತ್ ಆಫ್ರಿಕಾ ತಂಡವನ್ನು 12 ರನ್​ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 159 ರನ್ ಗಳಿಸಿತ್ತು. ಡಕ್​ವರ್ಥ್ ಲೂಯಿಸ್ ಪ್ರಕಾರ 25 ಓವರ್​ಗಳಲ್ಲಿ 116 ರನ್​ಗಳ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಕೇವಲ 103 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಟೀಮ್ ಇಂಡಿಯಾ 2ನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

2008: 2000 ರಲ್ಲಿ ಭಾರತ ತಂಡ ಮೊದಲ ಅಂಡರ್-19 ವಿಶ್ವಕಪ್ ಗೆದ್ದರೂ ಎರಡನೇ ಬಾರಿಗೆ ಟ್ರೋಫಿ ಗೆಲ್ಲಲು ಬರೋಬ್ಬರಿ 8 ವರ್ಷ ಕಾಯಬೇಕಾಯಿತು. 2008 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ಸೌತ್ ಆಫ್ರಿಕಾ ತಂಡವನ್ನು 12 ರನ್​ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 159 ರನ್ ಗಳಿಸಿತ್ತು. ಡಕ್​ವರ್ಥ್ ಲೂಯಿಸ್ ಪ್ರಕಾರ 25 ಓವರ್​ಗಳಲ್ಲಿ 116 ರನ್​ಗಳ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಕೇವಲ 103 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಟೀಮ್ ಇಂಡಿಯಾ 2ನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

4 / 8
2012: ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು 2012 ರಲ್ಲಿ ಭಾರತಕ್ಕೆ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್‌ನಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಸಾಧಿಸಿತ್ತು.

2012: ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು 2012 ರಲ್ಲಿ ಭಾರತಕ್ಕೆ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್‌ನಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಸಾಧಿಸಿತ್ತು.

5 / 8
2018: ಭಾರತ ತಂಡವು ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಿದ್ದು ಪೃಥ್ವಿ ಶಾ ನಾಯಕತ್ವದಲ್ಲಿ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 216 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 2 ವಿಕೆಟ್ ಕಳೆದುಕೊಂಡು 220 ರನ್ ಬಾರಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.

2018: ಭಾರತ ತಂಡವು ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಿದ್ದು ಪೃಥ್ವಿ ಶಾ ನಾಯಕತ್ವದಲ್ಲಿ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 216 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 2 ವಿಕೆಟ್ ಕಳೆದುಕೊಂಡು 220 ರನ್ ಬಾರಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು.

6 / 8
2022: ಕಳೆದ ಬಾರಿಯ ವಿಶ್ವಕಪ್​ನಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 190 ರನ್​ಗಳ ಗುರಿಯನ್ನು ಟೀಮ್ ಇಂಡಿಯಾ 47.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿತ್ತು. ಈ ಮೂಲಕ ಭಾರತ ತಂಡವು 5ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು.

2022: ಕಳೆದ ಬಾರಿಯ ವಿಶ್ವಕಪ್​ನಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 190 ರನ್​ಗಳ ಗುರಿಯನ್ನು ಟೀಮ್ ಇಂಡಿಯಾ 47.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿತ್ತು. ಈ ಮೂಲಕ ಭಾರತ ತಂಡವು 5ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತು.

7 / 8
ಇನ್ನು 2006, 2016, 2020 ರಲ್ಲಿ ಭಾರತ ತಂಡವು ರನ್ನರ್ ಅಪ್​ ಆಗಿ ಹೊರಹೊಮ್ಮಿತ್ತು.  ಇದೀಗ ಟೀಮ್ ಇಂಡಿಯಾ 6ನೇ ಬಾರಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಸೌತ್ ಆಫ್ರಿಕಾ ವಿರುದ್ಧ ಸೆಮಿಫೈನಲ್​ನಲ್ಲಿ ಗೆದ್ದಿರುವ ಭಾರತ ತಂಡವು ಫೈನಲ್​ನಲ್ಲಿ ಪಾಕಿಸ್ತಾನ್ ಅಥವಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಇನ್ನು 2006, 2016, 2020 ರಲ್ಲಿ ಭಾರತ ತಂಡವು ರನ್ನರ್ ಅಪ್​ ಆಗಿ ಹೊರಹೊಮ್ಮಿತ್ತು. ಇದೀಗ ಟೀಮ್ ಇಂಡಿಯಾ 6ನೇ ಬಾರಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಸೌತ್ ಆಫ್ರಿಕಾ ವಿರುದ್ಧ ಸೆಮಿಫೈನಲ್​ನಲ್ಲಿ ಗೆದ್ದಿರುವ ಭಾರತ ತಂಡವು ಫೈನಲ್​ನಲ್ಲಿ ಪಾಕಿಸ್ತಾನ್ ಅಥವಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ