AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ಎಬಿಡಿ ಬಳಿಕ ಕ್ರಿಸ್ ಗೇಲ್ ಟ್ವೀಟ್: ನಿವೃತ್ತಿ ಬಗ್ಗೆ ಯೂನಿವರ್ಸ್​ ಬಾಸ್ ಏನಂದ್ರು?

'Universe Boss' Chris Gayle: 22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು.

TV9 Web
| Edited By: |

Updated on: Nov 22, 2021 | 7:41 PM

Share
ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೆಲ ದಿನಗಳ ಹಿಂದೆಯಷ್ಟೇ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ಎಬಿಡಿ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. 37 ವರ್ಷದ ಎಬಿಡಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದ್ದವು.

ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೆಲ ದಿನಗಳ ಹಿಂದೆಯಷ್ಟೇ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ಎಬಿಡಿ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. 37 ವರ್ಷದ ಎಬಿಡಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದ್ದವು.

1 / 5
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

2 / 5
 ಹೌದು, ಎಬಿ ಡಿವಿಲಿಯರ್ಸ್​ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಸ್ ಗೇಲ್ ಟ್ವೀಟ್ ಮಾಡಿದ್ದಾರೆ. ನಾನು ತೊರೆಯುವುದಿಲ್ಲ ಎಂದು ಗೇಲ್ ಟ್ವೀಟ್ ಮಾಡಿ, ಸದ್ಯಕ್ಕೆ ನಿವೃತ್ತಿಯಿಲ್ಲ ಎಂದಿದ್ದಾರೆ. ಹೀಗಾಗಿ ಕ್ರಿಸ್ ಗೇಲ್ ಹೆಸರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹೌದು, ಎಬಿ ಡಿವಿಲಿಯರ್ಸ್​ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಸ್ ಗೇಲ್ ಟ್ವೀಟ್ ಮಾಡಿದ್ದಾರೆ. ನಾನು ತೊರೆಯುವುದಿಲ್ಲ ಎಂದು ಗೇಲ್ ಟ್ವೀಟ್ ಮಾಡಿ, ಸದ್ಯಕ್ಕೆ ನಿವೃತ್ತಿಯಿಲ್ಲ ಎಂದಿದ್ದಾರೆ. ಹೀಗಾಗಿ ಕ್ರಿಸ್ ಗೇಲ್ ಹೆಸರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

4 / 5
22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

5 / 5
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ