AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC points table: ಟೆಸ್ಟ್ ಸರಣಿ ಗೆದ್ದರೂ ಡಬ್ಲ್ಯುಟಿಸಿ ಫೈನಲ್ ರೇಸ್​ನಿಂದ ಹೊರಬೀಳುವ ಆತಂಕದಲ್ಲಿ ಇಂಗ್ಲೆಂಡ್‌

WTC points table: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಒಲಿ ಪೋಪ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡ ಎಂಟು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ.

ಪೃಥ್ವಿಶಂಕರ
|

Updated on: Sep 09, 2024 | 9:53 PM

Share
ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಒಲಿ ಪೋಪ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡ ಎಂಟು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ.

ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಒಲಿ ಪೋಪ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡ ಎಂಟು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ.

1 / 5
ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ, ಶ್ರೀಲಂಕಾವನ್ನು ಸುಲಭವಾಗಿ ಸೋಲಿಸಿತ್ತು. ಆ ಬಳಿಕ ಇಂಗ್ಲೆಂಡ್‌ ತಂಡದ ಗೆಲುವಿನ ಶೇಕಡಾವಾರು 45 ಆಗಿತ್ತು. ಇದರ ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಟಾಪ್ 5ಕ್ಕೆ ಎಂಟ್ರಿಕೊಟ್ಟಿತ್ತು.

ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ, ಶ್ರೀಲಂಕಾವನ್ನು ಸುಲಭವಾಗಿ ಸೋಲಿಸಿತ್ತು. ಆ ಬಳಿಕ ಇಂಗ್ಲೆಂಡ್‌ ತಂಡದ ಗೆಲುವಿನ ಶೇಕಡಾವಾರು 45 ಆಗಿತ್ತು. ಇದರ ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಟಾಪ್ 5ಕ್ಕೆ ಎಂಟ್ರಿಕೊಟ್ಟಿತ್ತು.

2 / 5
ಆದರೆ ಉಭಯ ತಂಡಗಳ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋತಿರುವ ಇಂಗ್ಲೆಂಡ್ ತಂಡದ ಗೆಲುವಿನ ಶೇಕಡಾವಾರು ಇದೀಗ 42.19 ಆಗಿದೆ. ಅಲ್ಲದೆ ತಂಡವು ರ್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೆ ಜಾರಿದೆ.

ಆದರೆ ಉಭಯ ತಂಡಗಳ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋತಿರುವ ಇಂಗ್ಲೆಂಡ್ ತಂಡದ ಗೆಲುವಿನ ಶೇಕಡಾವಾರು ಇದೀಗ 42.19 ಆಗಿದೆ. ಅಲ್ಲದೆ ತಂಡವು ರ್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೆ ಜಾರಿದೆ.

3 / 5
ಇನ್ನು ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಮೂರನೇ ಪಂದ್ಯಕ್ಕೂ ಮುನ್ನ ಶ್ರೀಲಂಕಾದ ಪಿಸಿಟಿ 33.33 ಇದ್ದು, ಈಗ 42.85ಕ್ಕೆ ಏರಿಕೆಯಾಗಿದೆ. ಈ ಮೊದಲು ಏಳನೇ ಸ್ಥಾನದಲ್ಲಿದ್ದ ತಂಡ ಇದೀಗ ಇಂಗ್ಲೆಂಡ್ ತಂಡವನ್ನು ಮಣಿಸಿ ಅಗ್ರ 5ರೊಳಗೆ ಸ್ಥಾನ ಪಡೆದುಕೊಂಡಿದೆ.

ಇನ್ನು ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಮೂರನೇ ಪಂದ್ಯಕ್ಕೂ ಮುನ್ನ ಶ್ರೀಲಂಕಾದ ಪಿಸಿಟಿ 33.33 ಇದ್ದು, ಈಗ 42.85ಕ್ಕೆ ಏರಿಕೆಯಾಗಿದೆ. ಈ ಮೊದಲು ಏಳನೇ ಸ್ಥಾನದಲ್ಲಿದ್ದ ತಂಡ ಇದೀಗ ಇಂಗ್ಲೆಂಡ್ ತಂಡವನ್ನು ಮಣಿಸಿ ಅಗ್ರ 5ರೊಳಗೆ ಸ್ಥಾನ ಪಡೆದುಕೊಂಡಿದೆ.

4 / 5
ಉಳಿದಂತೆ ಟೀಂ ಇಂಡಿಯಾದ ಸ್ಥಾನ ಬಲಿಷ್ಠವಾಗಿದ್ದು, ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತದ PCT ಗರಿಷ್ಠ 68.52 ಆಗಿದೆ. ಈ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ತಂಡವು ಎರಡನೇ ಸ್ಥಾನದಲ್ಲಿದ್ದು, ಈ ಎರಡು ತಂಡಗಳ ನಂತರ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ.

ಉಳಿದಂತೆ ಟೀಂ ಇಂಡಿಯಾದ ಸ್ಥಾನ ಬಲಿಷ್ಠವಾಗಿದ್ದು, ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತದ PCT ಗರಿಷ್ಠ 68.52 ಆಗಿದೆ. ಈ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ತಂಡವು ಎರಡನೇ ಸ್ಥಾನದಲ್ಲಿದ್ದು, ಈ ಎರಡು ತಂಡಗಳ ನಂತರ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ