Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸಾಧನೆ: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಯುಎಸ್​​ಎ

ICC Cricket World Cup League-2: ಐಸಿಸಿ ಕ್ರಿಕೆಟ್ ವರ್ಲ್ಡ್​ಕಪ್ ಲೀಗ್-2 ಪಂದ್ಯದಲ್ಲಿ ಯುಎಸ್​ಎ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಅದು ಕೂಡ ಒಮಾನ್ ತಂಡವನ್ನು ಬರೋಬ್ಬರಿ 57 ರನ್​ಗಳಿಂದ ಸೋಲಿಸುವ ಮೂಲಕ. ಈ ಗೆಲುವಿನೊಂದಿಗೆ ಯುಎಸ್​ಎ ತಂಡ ಟೀಮ್ ಇಂಡಿಯಾ ಹೆಸರಿನಲ್ಲಿದ್ದ 40 ವರ್ಷಗಳ ಹಳೆಯ ದಾಖಲೆಯನ್ನು ಸಹ ಮುರಿದಿದೆ.

ಝಾಹಿರ್ ಯೂಸುಫ್
|

Updated on: Feb 20, 2025 | 9:04 AM

ಏಕದಿನ ಕ್ರಿಕೆಟ್​ನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (USA) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾ ಹೆಸರಿನಲ್ಲಿದ್ದ 40 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಇಂತಹದೊಂದು ವಿಶ್ವ ದಾಖಲೆ ನಿರ್ಮಾಣವಾಗಿದ್ದು ಐಸಿಸಿ ವಿಶ್ವಕಪ್ ಲೀಗ್-2 ಪಂದ್ಯದಲ್ಲಿ.

ಏಕದಿನ ಕ್ರಿಕೆಟ್​ನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (USA) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾ ಹೆಸರಿನಲ್ಲಿದ್ದ 40 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಇಂತಹದೊಂದು ವಿಶ್ವ ದಾಖಲೆ ನಿರ್ಮಾಣವಾಗಿದ್ದು ಐಸಿಸಿ ವಿಶ್ವಕಪ್ ಲೀಗ್-2 ಪಂದ್ಯದಲ್ಲಿ.

1 / 6
ಅಲ್ ಅಮಿರಾತ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಯುಎಸ್​ಎ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಪರ ಮಿಲಿಂದ್ ಕುಮಾರ್ 47 ರನ್ ಬಾರಿಸಿದರು. ಈ 47 ರನ್​ಗಳ ನೆರವಿನಿಂದ ಯುಎಸ್​ಎ ತಂಡ 35.3 ಓವರ್​ಗಳಲ್ಲಿ ಕೇವಲ 122 ರನ್​ಗಳಿಸಿ ಆಲೌಟ್ ಆಯಿತು.

ಅಲ್ ಅಮಿರಾತ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಯುಎಸ್​ಎ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಪರ ಮಿಲಿಂದ್ ಕುಮಾರ್ 47 ರನ್ ಬಾರಿಸಿದರು. ಈ 47 ರನ್​ಗಳ ನೆರವಿನಿಂದ ಯುಎಸ್​ಎ ತಂಡ 35.3 ಓವರ್​ಗಳಲ್ಲಿ ಕೇವಲ 122 ರನ್​ಗಳಿಸಿ ಆಲೌಟ್ ಆಯಿತು.

2 / 6
122 ರನ್​ಗಳ ಸುಲಭ ಗುರಿ ಬೆನ್ನತ್ತಿದ ಒಮಾನ್ ತಂಡವು ನೋಸ್ತುಷ್ ಕೆಂಜಿಗೆ ಅವರ ಸ್ಪಿನ್ ಮೋಡಿಗೆ ತತ್ತರಿಸಿದೆ. 7.3 ಓವರ್​ಗಳನ್ನು ಎಸೆದ ನೋಸ್ತುಷ್ ಕೇವಲ 11 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಪರಿಣಾಮ ಒಮಾನ್ ತಂಡವು 25.3 ಓವರ್​ಗಳಲ್ಲಿ ಕೇವಲ 65 ರನ್​ಗಳಿಸಿ ಸರ್ವಪತನ ಕಂಡಿತು. ಈ ಮೂಲಕ ಯುಎಸ್​ಎ ತಂಡ 57 ರನ್​ಗಳ ಭರ್ಜರಿ ಜಯ ಸಾಧಿಸಿತು.

122 ರನ್​ಗಳ ಸುಲಭ ಗುರಿ ಬೆನ್ನತ್ತಿದ ಒಮಾನ್ ತಂಡವು ನೋಸ್ತುಷ್ ಕೆಂಜಿಗೆ ಅವರ ಸ್ಪಿನ್ ಮೋಡಿಗೆ ತತ್ತರಿಸಿದೆ. 7.3 ಓವರ್​ಗಳನ್ನು ಎಸೆದ ನೋಸ್ತುಷ್ ಕೇವಲ 11 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಪರಿಣಾಮ ಒಮಾನ್ ತಂಡವು 25.3 ಓವರ್​ಗಳಲ್ಲಿ ಕೇವಲ 65 ರನ್​ಗಳಿಸಿ ಸರ್ವಪತನ ಕಂಡಿತು. ಈ ಮೂಲಕ ಯುಎಸ್​ಎ ತಂಡ 57 ರನ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ರನ್​ಗಳಿಸಿ ಗೆದ್ದ ತಂಡವೆಂಬ ವಿಶ್ವ ದಾಖಲೆ ಯುಎಸ್​ಎ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ 1985 ರಲ್ಲಿ ಅತ್ಯಲ್ಪ ಮೊತ್ತಗಳಿಸಿ ವಿಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ರನ್​ಗಳಿಸಿ ಗೆದ್ದ ತಂಡವೆಂಬ ವಿಶ್ವ ದಾಖಲೆ ಯುಎಸ್​ಎ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ 1985 ರಲ್ಲಿ ಅತ್ಯಲ್ಪ ಮೊತ್ತಗಳಿಸಿ ವಿಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

4 / 6
1985 ರಲ್ಲಿ ನಡೆದ ರೋಥ್‌ಮನ್ ಫೋರ್-ನೇಷನ್ ಕಪ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 125 ರನ್​ ಮಾತ್ರ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು ಕೇವಲ 87 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 38 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಲ್ಪ ರನ್​ಗಳಿಸಿ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತ್ತು.

1985 ರಲ್ಲಿ ನಡೆದ ರೋಥ್‌ಮನ್ ಫೋರ್-ನೇಷನ್ ಕಪ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 125 ರನ್​ ಮಾತ್ರ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು ಕೇವಲ 87 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 38 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಲ್ಪ ರನ್​ಗಳಿಸಿ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತ್ತು.

5 / 6
ಆದರೀಗ ಯುಎಸ್​ಎ ತಂಡವು 122 ರನ್​ಗಳಿಸಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದೆ. ಅಲ್ಲದೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತೀ ಕಡಿಮೆ ರನ್​ಗಳಿಸಿ 50 ಕ್ಕಿಂತ ಅಧಿಕ ರನ್​ಗಳಿಂದ ಗೆದ್ದ ವಿಶ್ವದ ಏಕೈಕ ತಂಡ ಎಂಬ ದಾಖಲೆಯನ್ನು ಸಹ ಯುಎಸ್​ಎ ನಿರ್ಮಿಸಿದೆ.

ಆದರೀಗ ಯುಎಸ್​ಎ ತಂಡವು 122 ರನ್​ಗಳಿಸಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದೆ. ಅಲ್ಲದೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತೀ ಕಡಿಮೆ ರನ್​ಗಳಿಸಿ 50 ಕ್ಕಿಂತ ಅಧಿಕ ರನ್​ಗಳಿಂದ ಗೆದ್ದ ವಿಶ್ವದ ಏಕೈಕ ತಂಡ ಎಂಬ ದಾಖಲೆಯನ್ನು ಸಹ ಯುಎಸ್​ಎ ನಿರ್ಮಿಸಿದೆ.

6 / 6
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್