AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಆರ್ಭಟಕ್ಕೆ ರಸೆಲ್ ರೆಕಾರ್ಡ್ ಉಡೀಸ್

Vaibhav Sooryavanshi Records: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿಯ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಇದೀಗ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ, ಅದು ಕೂಡ ಕೇವಲ 167 ಎಸೆತಗಳಲ್ಲಿ ಎಂಬುದು ವಿಶೇಷ. ಈ ಮೂಲಕ ವೆಸ್ಟ್ ಇಂಡೀಸ್​ನ ಸ್ಫೋಟಕ ದಾಂಡಿಗನ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 29, 2026 | 7:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಆ್ಯಂಡ್ರೆ ರಸೆಲ್ (Andre Russell) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಆ್ಯಂಡ್ರೆ ರಸೆಲ್ (Andre Russell) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ.

1 / 5
ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಕೇವಲ 16 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​​ನೊಂದಿಗೆ 43 ರನ್​ ಚಚ್ಚಿದ್ದರು.

ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಕೇವಲ 16 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​​ನೊಂದಿಗೆ 43 ರನ್​ ಚಚ್ಚಿದ್ದರು.

2 / 5
ಈ 43 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್​ನಲ್ಲಿ 400 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ವೇಗವಾಗಿ 400 ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಸೆಲ್ ಹೆಸರಿನಲ್ಲಿತ್ತು.

ಈ 43 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್​ನಲ್ಲಿ 400 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ವೇಗವಾಗಿ 400 ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಸೆಲ್ ಹೆಸರಿನಲ್ಲಿತ್ತು.

3 / 5
2019 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಡ್ ಪರ ಕಣಕ್ಕಿಳಿದಿದ್ದ ಆ್ಯಂಡ್ರೆ ರಸೆಲ್ ಕೇವಲ 188 ಎಸೆತಗಳಲ್ಲಿ 400 ರನ್​ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತದಲ್ಲಿ 400 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

2019 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಡ್ ಪರ ಕಣಕ್ಕಿಳಿದಿದ್ದ ಆ್ಯಂಡ್ರೆ ರಸೆಲ್ ಕೇವಲ 188 ಎಸೆತಗಳಲ್ಲಿ 400 ರನ್​ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತದಲ್ಲಿ 400 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 9 ಇನಿಂಗ್ಸ್ ಆಡಿರುವ ವೈಭವ್ ಕೇವಲ 167 ಎಸೆತಗಳಲ್ಲಿ 400 ರನ್​ ಪೂರೈಸಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 400 ರನ್​ಗಳ ಗಡಿದಾಟಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವೈಭವ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 9 ಇನಿಂಗ್ಸ್ ಆಡಿರುವ ವೈಭವ್ ಕೇವಲ 167 ಎಸೆತಗಳಲ್ಲಿ 400 ರನ್​ ಪೂರೈಸಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 400 ರನ್​ಗಳ ಗಡಿದಾಟಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವೈಭವ್ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 7:52 am, Wed, 29 April 26

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ