AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಆಟಗಾರ ಕಾಣಿಸಿಕೊಂಡಿರಲಿಲ್ಲ. ಆದರೆ ಈ ಬಾರಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಯಂಗ್ ಸೆನ್ಸೇಷನ್ ಆಟಗಾರನನ್ನು ಖರೀದಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಐಪಿಎಲ್​ ಅಂಗಳದಲ್ಲಿರುವ ವೈಭವ್ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 27, 2025 | 1:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ 14ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. 2011, ಮಾರ್ಚ್ 27 ರಂದು ಬಿಹಾರದಲ್ಲಿ ಜನಿಸಿದ ವೈಭವ್ ಅವರನ್ನು ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 1.10 ಕೋಟಿ ರೂ.ಗೆ ಖರೀದಿಸಿತು. ಈ ಮೂಲಕ ಐಪಿಎಲ್​ಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ಬರೆದಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ 14ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. 2011, ಮಾರ್ಚ್ 27 ರಂದು ಬಿಹಾರದಲ್ಲಿ ಜನಿಸಿದ ವೈಭವ್ ಅವರನ್ನು ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 1.10 ಕೋಟಿ ರೂ.ಗೆ ಖರೀದಿಸಿತು. ಈ ಮೂಲಕ ಐಪಿಎಲ್​ಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ಬರೆದಿದ್ದರು.

1 / 6
ಇದಕ್ಕೂ ಮುನ್ನ ಈ ದಾಖಲೆ ಪ್ರಯಾಸ್ ರೇ ಬರ್ಮನ್ ಹೆಸರಿನಲ್ಲಿತ್ತು. ಐಪಿಎಲ್ 2019 ರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಪ್ರಯಾಸ್ ಅವರನ್ನು 1.5 ಕೋಟಿ ರೂ. ಖರೀದಿಸಿದ್ದರು. ಈ ವೇಳೆ ಅವರ ವಯಸ್ಸು 16 ವರ್ಷ. ಈ ಮೂಲಕ ಐಪಿಎಲ್​​ ಇತಿಹಾಸದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಪ್ರಯಾಸ್ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಪ್ರಯಾಸ್ ರೇ ಬರ್ಮನ್ ಹೆಸರಿನಲ್ಲಿತ್ತು. ಐಪಿಎಲ್ 2019 ರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಪ್ರಯಾಸ್ ಅವರನ್ನು 1.5 ಕೋಟಿ ರೂ. ಖರೀದಿಸಿದ್ದರು. ಈ ವೇಳೆ ಅವರ ವಯಸ್ಸು 16 ವರ್ಷ. ಈ ಮೂಲಕ ಐಪಿಎಲ್​​ ಇತಿಹಾಸದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಪ್ರಯಾಸ್ ನಿರ್ಮಿಸಿದ್ದರು.

2 / 6
ಆದರೆ 13ನೇ ವಯಸ್ಸಿನಲ್ಲಿ ಐಪಿಎಲ್​​ಗೆ ಎಂಟ್ರಿ ಕೊಡುವ ಮೂಲಕ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಅಲ್ಲದೆ ಇದೀಗ ಐಪಿಎಲ್ ನಡುವೆ ತಮ್ಮ 14ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಮೂಲಕ ಯುವ ದಾಂಡಿಗ ಮತ್ತೊಂದು ವಸಂತಕ್ಕೆ ಕಾಲಿಟ್ಟಿದ್ದಾರೆ.

ಆದರೆ 13ನೇ ವಯಸ್ಸಿನಲ್ಲಿ ಐಪಿಎಲ್​​ಗೆ ಎಂಟ್ರಿ ಕೊಡುವ ಮೂಲಕ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಅಲ್ಲದೆ ಇದೀಗ ಐಪಿಎಲ್ ನಡುವೆ ತಮ್ಮ 14ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಮೂಲಕ ಯುವ ದಾಂಡಿಗ ಮತ್ತೊಂದು ವಸಂತಕ್ಕೆ ಕಾಲಿಟ್ಟಿದ್ದಾರೆ.

3 / 6
ಇನ್ನು ಈ ಬಾರಿಯ ಐಪಿಎಲ್​​ನಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಕಣಕ್ಕಿಳಿದರೆ ಟಿ20 ಇತಿಹಾಸದಲ್ಲೇ ಸ್ಪರ್ಧಾತ್ಮಕ ಟೂರ್ನಿ ಆಡಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಆದರೆ ಮೊದಲ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿರುವ ಎಡಗೈ ದಾಂಡಿಗನಿಗೆ ಮುಂದಿನ ಪಂದ್ಯಗಳಲ್ಲಿ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

ಇನ್ನು ಈ ಬಾರಿಯ ಐಪಿಎಲ್​​ನಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಕಣಕ್ಕಿಳಿದರೆ ಟಿ20 ಇತಿಹಾಸದಲ್ಲೇ ಸ್ಪರ್ಧಾತ್ಮಕ ಟೂರ್ನಿ ಆಡಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಆದರೆ ಮೊದಲ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿರುವ ಎಡಗೈ ದಾಂಡಿಗನಿಗೆ ಮುಂದಿನ ಪಂದ್ಯಗಳಲ್ಲಿ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

4 / 6
ಇನ್ನು ವೈಭವ್ ಸೂರ್ಯವಂಶಿ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಯುವ ದಾಂಡಿಗ 2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದರು.

ಇನ್ನು ವೈಭವ್ ಸೂರ್ಯವಂಶಿ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಯುವ ದಾಂಡಿಗ 2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದರು.

5 / 6
ಹಾಗೆಯೇ ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಬಾರಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಇದೀಗ ಐಪಿಎಲ್​ ಅಂಗಳದಲ್ಲಿರುವ 14 ವರ್ಷದ ವೈಭವ್ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಹಾಗೆಯೇ ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಬಾರಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಇದೀಗ ಐಪಿಎಲ್​ ಅಂಗಳದಲ್ಲಿರುವ 14 ವರ್ಷದ ವೈಭವ್ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ