AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ಸಿಕ್ಸ್, 30 ಫೋರ್: ವೈಭವ್ ಆರ್ಭಟಕ್ಕೆ ಗಿಲ್ ದಾಖಲೆ ಧೂಳೀಪಟ

Vaibhav Suryavanshi: ಇಂಗ್ಲೆಂಡ್ ವಿರುದ್ಧ ಯೂತ್ ಒಡಿಐ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 5 ಪಂದ್ಯಗಳಲ್ಲಿ ವೈಭವ್ ಬಾರಿಸಿದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 29, ಹಾಗೆಯೇ 30 ಫೋರ್​ಗಳನ್ನು ಸಹ ಸಿಡಿಸಿದ್ದಾರೆ. ಈ ಮೂಲಕ 5 ಇನಿಂಗ್ಸ್​ಗಳಿಂದ ಕಲೆಹಾಕಿದ್ದು 355 ರನ್​ಗಳು. ಈ ರನ್​ ರಾಶಿಯೊಂದಿಗೆ ವೈಭವ್ ಸೂರ್ಯವಂಶಿ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 09, 2025 | 8:30 AM

Share
ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಅಂಡರ್-19 ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವೈಭವ್ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ಶುಭ್​ಮನ್ ಗಿಲ್ (Shubman Gill) ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಅಂಡರ್-19 ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವೈಭವ್ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ಶುಭ್​ಮನ್ ಗಿಲ್ (Shubman Gill) ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ನಲ್ಲಿ ವೈಭವ್ ಸೂರ್ಯವಂಶಿ 19 ಎಸೆತಗಳಲ್ಲಿ 48 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಚಚ್ಚಿದ್ದರು. ಮೂರನೇ ಮ್ಯಾಚ್​ನಲ್ಲಿ ವೈಭವ್ ಬ್ಯಾಟ್​ನಿಂದ 31 ಎಸೆತಗಳಲ್ಲಿ 86 ರನ್​ಗಳು ಮೂಡಿಬಂದಿದ್ದವು.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ನಲ್ಲಿ ವೈಭವ್ ಸೂರ್ಯವಂಶಿ 19 ಎಸೆತಗಳಲ್ಲಿ 48 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಚಚ್ಚಿದ್ದರು. ಮೂರನೇ ಮ್ಯಾಚ್​ನಲ್ಲಿ ವೈಭವ್ ಬ್ಯಾಟ್​ನಿಂದ 31 ಎಸೆತಗಳಲ್ಲಿ 86 ರನ್​ಗಳು ಮೂಡಿಬಂದಿದ್ದವು.

2 / 5
ಇನ್ನು ನಾಲ್ಕನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 78 ಎಸೆತಗಳಲ್ಲಿ 143 ರನ್​ಗಳ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದರು. ಹಾಗೆಯೇ ಕೊನೆಯ ಪಂದ್ಯದಲ್ಲಿ 42 ಎಸೆತಗಳಲ್ಲಿ 33 ರನ್ ಬಾರಿಸಿದ್ದಾರೆ. ಈ ಮೂಲಕ 5 ಪಂದ್ಯಗಳಿಂದ ವೈಭವ್ ಸೂರ್ಯವಂಶಿ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಈ ಮೂಲಕ ಯೂತ್ ಏಕದಿನ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ನಾಲ್ಕನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 78 ಎಸೆತಗಳಲ್ಲಿ 143 ರನ್​ಗಳ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದರು. ಹಾಗೆಯೇ ಕೊನೆಯ ಪಂದ್ಯದಲ್ಲಿ 42 ಎಸೆತಗಳಲ್ಲಿ 33 ರನ್ ಬಾರಿಸಿದ್ದಾರೆ. ಈ ಮೂಲಕ 5 ಪಂದ್ಯಗಳಿಂದ ವೈಭವ್ ಸೂರ್ಯವಂಶಿ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಈ ಮೂಲಕ ಯೂತ್ ಏಕದಿನ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಶುಭ್​ಮನ್ ಗಿಲ್ ಹೆಸರಿನಲ್ಲಿತ್ತು. 2017 ರಲ್ಲಿ ಇಂಗ್ಲೆಂಡ್ ವಿರುದ್ಧದ ಅಂಡರ್ 19 ಏಕದಿನ ಸರಣಿಯಲ್ಲಿ ಗಿಲ್ 351 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಎಂಟು ವರ್ಷಗಳಿಂದ ಗಿಲ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಕೊನೆಗೂ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಶುಭ್​ಮನ್ ಗಿಲ್ ಹೆಸರಿನಲ್ಲಿತ್ತು. 2017 ರಲ್ಲಿ ಇಂಗ್ಲೆಂಡ್ ವಿರುದ್ಧದ ಅಂಡರ್ 19 ಏಕದಿನ ಸರಣಿಯಲ್ಲಿ ಗಿಲ್ 351 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಎಂಟು ವರ್ಷಗಳಿಂದ ಗಿಲ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಕೊನೆಗೂ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ.

4 / 5
ಇಂಗ್ಲೆಂಡ್ ವಿರುದ್ಧ ಯೂತ್ ಏಕದಿನ ಸರಣಿಯಲ್ಲಿ ಪರಾಕ್ರಮ ಮೆರೆದ 14 ವರ್ಷದ ವೈಭವ್ ಸೂರ್ಯವಂಶಿ 5 ಇನಿಂಗ್ಸ್​ಗಳಿಂದ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಅದು ಕೂಡ 174 ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಯೂತ್ ಒಡಿಐ ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಯೂತ್ ಏಕದಿನ ಸರಣಿಯಲ್ಲಿ ಪರಾಕ್ರಮ ಮೆರೆದ 14 ವರ್ಷದ ವೈಭವ್ ಸೂರ್ಯವಂಶಿ 5 ಇನಿಂಗ್ಸ್​ಗಳಿಂದ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಅದು ಕೂಡ 174 ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಯೂತ್ ಒಡಿಐ ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

5 / 5
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!