AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ಸಿಕ್ಸ್, 30 ಫೋರ್: ವೈಭವ್ ಆರ್ಭಟಕ್ಕೆ ಗಿಲ್ ದಾಖಲೆ ಧೂಳೀಪಟ

Vaibhav Suryavanshi: ಇಂಗ್ಲೆಂಡ್ ವಿರುದ್ಧ ಯೂತ್ ಒಡಿಐ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 5 ಪಂದ್ಯಗಳಲ್ಲಿ ವೈಭವ್ ಬಾರಿಸಿದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 29, ಹಾಗೆಯೇ 30 ಫೋರ್​ಗಳನ್ನು ಸಹ ಸಿಡಿಸಿದ್ದಾರೆ. ಈ ಮೂಲಕ 5 ಇನಿಂಗ್ಸ್​ಗಳಿಂದ ಕಲೆಹಾಕಿದ್ದು 355 ರನ್​ಗಳು. ಈ ರನ್​ ರಾಶಿಯೊಂದಿಗೆ ವೈಭವ್ ಸೂರ್ಯವಂಶಿ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 09, 2025 | 8:30 AM

Share
ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಅಂಡರ್-19 ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವೈಭವ್ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ಶುಭ್​ಮನ್ ಗಿಲ್ (Shubman Gill) ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಅಂಡರ್-19 ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವೈಭವ್ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ಶುಭ್​ಮನ್ ಗಿಲ್ (Shubman Gill) ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ನಲ್ಲಿ ವೈಭವ್ ಸೂರ್ಯವಂಶಿ 19 ಎಸೆತಗಳಲ್ಲಿ 48 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಚಚ್ಚಿದ್ದರು. ಮೂರನೇ ಮ್ಯಾಚ್​ನಲ್ಲಿ ವೈಭವ್ ಬ್ಯಾಟ್​ನಿಂದ 31 ಎಸೆತಗಳಲ್ಲಿ 86 ರನ್​ಗಳು ಮೂಡಿಬಂದಿದ್ದವು.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ನಲ್ಲಿ ವೈಭವ್ ಸೂರ್ಯವಂಶಿ 19 ಎಸೆತಗಳಲ್ಲಿ 48 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಚಚ್ಚಿದ್ದರು. ಮೂರನೇ ಮ್ಯಾಚ್​ನಲ್ಲಿ ವೈಭವ್ ಬ್ಯಾಟ್​ನಿಂದ 31 ಎಸೆತಗಳಲ್ಲಿ 86 ರನ್​ಗಳು ಮೂಡಿಬಂದಿದ್ದವು.

2 / 5
ಇನ್ನು ನಾಲ್ಕನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 78 ಎಸೆತಗಳಲ್ಲಿ 143 ರನ್​ಗಳ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದರು. ಹಾಗೆಯೇ ಕೊನೆಯ ಪಂದ್ಯದಲ್ಲಿ 42 ಎಸೆತಗಳಲ್ಲಿ 33 ರನ್ ಬಾರಿಸಿದ್ದಾರೆ. ಈ ಮೂಲಕ 5 ಪಂದ್ಯಗಳಿಂದ ವೈಭವ್ ಸೂರ್ಯವಂಶಿ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಈ ಮೂಲಕ ಯೂತ್ ಏಕದಿನ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ನಾಲ್ಕನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 78 ಎಸೆತಗಳಲ್ಲಿ 143 ರನ್​ಗಳ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದರು. ಹಾಗೆಯೇ ಕೊನೆಯ ಪಂದ್ಯದಲ್ಲಿ 42 ಎಸೆತಗಳಲ್ಲಿ 33 ರನ್ ಬಾರಿಸಿದ್ದಾರೆ. ಈ ಮೂಲಕ 5 ಪಂದ್ಯಗಳಿಂದ ವೈಭವ್ ಸೂರ್ಯವಂಶಿ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಈ ಮೂಲಕ ಯೂತ್ ಏಕದಿನ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಶುಭ್​ಮನ್ ಗಿಲ್ ಹೆಸರಿನಲ್ಲಿತ್ತು. 2017 ರಲ್ಲಿ ಇಂಗ್ಲೆಂಡ್ ವಿರುದ್ಧದ ಅಂಡರ್ 19 ಏಕದಿನ ಸರಣಿಯಲ್ಲಿ ಗಿಲ್ 351 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಎಂಟು ವರ್ಷಗಳಿಂದ ಗಿಲ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಕೊನೆಗೂ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಶುಭ್​ಮನ್ ಗಿಲ್ ಹೆಸರಿನಲ್ಲಿತ್ತು. 2017 ರಲ್ಲಿ ಇಂಗ್ಲೆಂಡ್ ವಿರುದ್ಧದ ಅಂಡರ್ 19 ಏಕದಿನ ಸರಣಿಯಲ್ಲಿ ಗಿಲ್ 351 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಎಂಟು ವರ್ಷಗಳಿಂದ ಗಿಲ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಕೊನೆಗೂ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ.

4 / 5
ಇಂಗ್ಲೆಂಡ್ ವಿರುದ್ಧ ಯೂತ್ ಏಕದಿನ ಸರಣಿಯಲ್ಲಿ ಪರಾಕ್ರಮ ಮೆರೆದ 14 ವರ್ಷದ ವೈಭವ್ ಸೂರ್ಯವಂಶಿ 5 ಇನಿಂಗ್ಸ್​ಗಳಿಂದ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಅದು ಕೂಡ 174 ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಯೂತ್ ಒಡಿಐ ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಯೂತ್ ಏಕದಿನ ಸರಣಿಯಲ್ಲಿ ಪರಾಕ್ರಮ ಮೆರೆದ 14 ವರ್ಷದ ವೈಭವ್ ಸೂರ್ಯವಂಶಿ 5 ಇನಿಂಗ್ಸ್​ಗಳಿಂದ ಬರೋಬ್ಬರಿ 355 ರನ್ ಕಲೆಹಾಕಿದ್ದಾರೆ. ಅದು ಕೂಡ 174 ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಯೂತ್ ಒಡಿಐ ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ