AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಎಸೆತಗಳಲ್ಲಿ ಅರ್ಧಶತಕ; 19 ಎಸೆತಗಳಲ್ಲಿ 63 ರನ್ ಚಚ್ಚಿದ ವೈಭವ್ ಸೂರ್ಯವಂಶಿ

Vaibhav Suryavanshi's Blazing 14-Ball Fifty: ಅಂಡರ್-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿ ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಅಬ್ಬರಿಸಿದ್ದಾರೆ. ಕೇವಲ 14 ವರ್ಷದ ವೈಭವ್, ತಮ್ಮ ಮೊದಲ ಪಂದ್ಯದಲ್ಲೇ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಡಿವೈ ಪಾಟೀಲ್ ಬ್ಲೂ ತಂಡದ ಪರ ಆಡಿ, 19 ಎಸೆತಗಳಲ್ಲಿ 63 ರನ್ ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಯುವ ಆಟಗಾರನ ಸ್ಫೋಟಕ ಪ್ರದರ್ಶನ ಮತ್ತೆ ಸಾಬೀತಾಗಿದೆ.

ಪೃಥ್ವಿಶಂಕರ
|

Updated on:Feb 26, 2026 | 5:51 PM

Share
ಕೆಲವು ದಿನಗಳ ಹಿಂದೆ ನಡೆದಿದ್ದ ಅಂಡರ್ 19 ವಿಶ್ವಕಪ್​ ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಸೂರ್ಯವಂಶಿ ಇದೀಗ ದೇಶಿ ಟೂರ್ನಿಯಲ್ಲಿ ಮತ್ತೊಮ್ಮೆ ರನ್​ಗಳ ಮಳೆ ಹರಿಸಿದ್ದಾರೆ. ಕೇವಲ 14 ವರ್ಷಕ್ಕೆ ವಿಶ್ವ ಕ್ರಿಕೆಟ್​ನಲ್ಲಿ ತಮ್ಮ ಆಟದ ಮೂಲಕವೇ ಸಂಚಲನ ಮೂಡಿಸಿರುವ ವೈಭವ್ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ.

ಕೆಲವು ದಿನಗಳ ಹಿಂದೆ ನಡೆದಿದ್ದ ಅಂಡರ್ 19 ವಿಶ್ವಕಪ್​ ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಸೂರ್ಯವಂಶಿ ಇದೀಗ ದೇಶಿ ಟೂರ್ನಿಯಲ್ಲಿ ಮತ್ತೊಮ್ಮೆ ರನ್​ಗಳ ಮಳೆ ಹರಿಸಿದ್ದಾರೆ. ಕೇವಲ 14 ವರ್ಷಕ್ಕೆ ವಿಶ್ವ ಕ್ರಿಕೆಟ್​ನಲ್ಲಿ ತಮ್ಮ ಆಟದ ಮೂಲಕವೇ ಸಂಚಲನ ಮೂಡಿಸಿರುವ ವೈಭವ್ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ.

1 / 6
ಪ್ರಸ್ತುತ ಭಾರತದಲ್ಲಿ ಡಿವೈ ಪಾಟೀಲ್ ಟೂರ್ನಮೆಂಟ್‌ ನಡೆಯುತ್ತಿದ್ದು, ಈ ಟೂರ್ನಮೆಂಟ್​ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ವೈಭವ್ ಸೂರ್ಯವಂಶಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ನವಿ ಮುಂಬೈನಲ್ಲಿ ನಡೆಯುತ್ತಿರುವ ಟಿ20 ಟೂರ್ನಮೆಂಟ್‌ನಲ್ಲಿ, ಡಿವೈ ಪಾಟೀಲ್ ಬ್ಲೂ ತಂಡದ ಪರ ಆಡುತ್ತಿರುವ ವೈಭವ್ ಸೂರ್ಯವಂಶಿ, ತಮ್ಮ ಮೊದಲ ಪಂದ್ಯದಲ್ಲೇ ಎದುರಾಳಿ ತಂಡದ ಬೌಲರ್‌ಗಳನ್ನು ಹೈರಾಣಾಗಿಸಿದ್ದಾರೆ.

ಪ್ರಸ್ತುತ ಭಾರತದಲ್ಲಿ ಡಿವೈ ಪಾಟೀಲ್ ಟೂರ್ನಮೆಂಟ್‌ ನಡೆಯುತ್ತಿದ್ದು, ಈ ಟೂರ್ನಮೆಂಟ್​ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ವೈಭವ್ ಸೂರ್ಯವಂಶಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ನವಿ ಮುಂಬೈನಲ್ಲಿ ನಡೆಯುತ್ತಿರುವ ಟಿ20 ಟೂರ್ನಮೆಂಟ್‌ನಲ್ಲಿ, ಡಿವೈ ಪಾಟೀಲ್ ಬ್ಲೂ ತಂಡದ ಪರ ಆಡುತ್ತಿರುವ ವೈಭವ್ ಸೂರ್ಯವಂಶಿ, ತಮ್ಮ ಮೊದಲ ಪಂದ್ಯದಲ್ಲೇ ಎದುರಾಳಿ ತಂಡದ ಬೌಲರ್‌ಗಳನ್ನು ಹೈರಾಣಾಗಿಸಿದ್ದಾರೆ.

2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತೀಯ ನೌಕಾಪಡೆ ತಂಡ 4 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಡಿವೈ ಪಾಟೀಲ್ ಬ್ಲೂ ತಂಡದ ಪರ ಓಪನಿಂಗ್ ಮಾಡಿದ ವೈಭವ್, ಏಕಾಂಗಿಯಾಗಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತೀಯ ನೌಕಾಪಡೆ ತಂಡ 4 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಡಿವೈ ಪಾಟೀಲ್ ಬ್ಲೂ ತಂಡದ ಪರ ಓಪನಿಂಗ್ ಮಾಡಿದ ವೈಭವ್, ಏಕಾಂಗಿಯಾಗಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

3 / 6
ಇದರ ಪರಿಣಾಮವಾಗಿ ವೈಭವ್ ಕೇವಲ 14 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ವೈಭವ್ ಬೌಂಡರಿಯೊಂದಿಗೆ ಐವತ್ತರ ಗಡಿ ದಾಟಿದ್ದು, ಸ್ಮರಣೀಯವಾಗಿತ್ತು. ಏಳನೇ ಓವರ್‌ನಲ್ಲಿ ವೈಭವ್ ಔಟಾದರಾದರೂ ಆ ಹೊತ್ತಿಗೆ ತಂಡವನ್ನು 97ರನ್​ಗಳಿಗೆ ಕೊಂಡೊಯ್ದಿದ್ದರು.

ಇದರ ಪರಿಣಾಮವಾಗಿ ವೈಭವ್ ಕೇವಲ 14 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ವೈಭವ್ ಬೌಂಡರಿಯೊಂದಿಗೆ ಐವತ್ತರ ಗಡಿ ದಾಟಿದ್ದು, ಸ್ಮರಣೀಯವಾಗಿತ್ತು. ಏಳನೇ ಓವರ್‌ನಲ್ಲಿ ವೈಭವ್ ಔಟಾದರಾದರೂ ಆ ಹೊತ್ತಿಗೆ ತಂಡವನ್ನು 97ರನ್​ಗಳಿಗೆ ಕೊಂಡೊಯ್ದಿದ್ದರು.

4 / 6
ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 19 ಎಸೆತಗಳನ್ನು ಎದುರಿಸಿ ಬರೋಬ್ಬರಿ 63 ರನ್ ಬಾರಿಸಿದರು. ಆ 19 ಎಸೆತಗಳಲ್ಲಿ 12 ಬೌಂಡರಿಗಳು (7 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳು) ಸೇರಿದ್ದವು. ಅವರ ಸ್ಟ್ರೈಕ್ ರೇಟ್ 331.58 ಆಗಿದ್ದು, ಇದು ಯಶಸ್ವಿ ರನ್ ಚೇಸ್‌ಗೆ ಅಡಿಪಾಯ ಹಾಕಿತು.

ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 19 ಎಸೆತಗಳನ್ನು ಎದುರಿಸಿ ಬರೋಬ್ಬರಿ 63 ರನ್ ಬಾರಿಸಿದರು. ಆ 19 ಎಸೆತಗಳಲ್ಲಿ 12 ಬೌಂಡರಿಗಳು (7 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳು) ಸೇರಿದ್ದವು. ಅವರ ಸ್ಟ್ರೈಕ್ ರೇಟ್ 331.58 ಆಗಿದ್ದು, ಇದು ಯಶಸ್ವಿ ರನ್ ಚೇಸ್‌ಗೆ ಅಡಿಪಾಯ ಹಾಕಿತು.

5 / 6
ಪಂದ್ಯದ ಬಗ್ಗೆ ಹೇಳುವುದಾದರೆ, ವೈಭವ್ ಅವರ ಇನ್ನಿಂಗ್ಸ್ ನಂತರ, ಅರ್ಜುನ್ ತೆಂಡೂಲ್ಕರ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ವಿನಾಶಕಾರಿ ಪ್ರದರ್ಶನ ನೀಡಿ ಕೇವಲ 29 ಎಸೆತಗಳಲ್ಲಿ ಅಜೇಯ 55 ರನ್ ಗಳಿಸಿ ತಂಡವನ್ನು ಕೇವಲ 19.1 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿದರು. ಅರ್ಜುನ್ ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

ಪಂದ್ಯದ ಬಗ್ಗೆ ಹೇಳುವುದಾದರೆ, ವೈಭವ್ ಅವರ ಇನ್ನಿಂಗ್ಸ್ ನಂತರ, ಅರ್ಜುನ್ ತೆಂಡೂಲ್ಕರ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ವಿನಾಶಕಾರಿ ಪ್ರದರ್ಶನ ನೀಡಿ ಕೇವಲ 29 ಎಸೆತಗಳಲ್ಲಿ ಅಜೇಯ 55 ರನ್ ಗಳಿಸಿ ತಂಡವನ್ನು ಕೇವಲ 19.1 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿದರು. ಅರ್ಜುನ್ ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

6 / 6

Published On - 5:50 pm, Thu, 26 February 26

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ