AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 12 ಸಿಕ್ಸ್, 23 ಫೋರ್ ಚಚ್ಚಿದ ವೈಭವ್ ಸೂರ್ಯವಂಶಿ

Vaibhav Suryavanshi: ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಯೂತ್ ಟೆಸ್ಟ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 78 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ವೈಭವ್ ಮತ್ತೊಮ್ಮೆ ಆಸೀಸ್ ಬೌಲರ್​ಗಳ ವಿರುದ್ಧ ಆರ್ಭಟಿಸಿದ್ದಾರೆ. ಅಲ್ಲದೆ ತಮ್ಮ ಕೆರಿಯರ್ ಆರಂಭದಲ್ಲೇ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 06, 2025 | 12:53 PM

Share
ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಆರ್ಭಟ ಮುಂದುವರೆದಿದೆ. ಅದು ಕೂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಅಂದರೆ ಅಂಡರ್-19 ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ವೈಭವ್ ವೈಭವೋಪೇತ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಆರ್ಭಟ ಮುಂದುವರೆದಿದೆ. ಅದು ಕೂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಅಂದರೆ ಅಂಡರ್-19 ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ವೈಭವ್ ವೈಭವೋಪೇತ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

1 / 5
ವೈಭವ್ ಸೂರ್ಯವಂಶಿ ತಮ್ಮ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ ಮೂರು ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ಮೂರು ಪಂದ್ಯಗಳಲ್ಲಿ ವೈಭವ್ ಕಲೆಹಾಕಿರುವುದು 221 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 55.25 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ.

ವೈಭವ್ ಸೂರ್ಯವಂಶಿ ತಮ್ಮ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ ಮೂರು ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ಮೂರು ಪಂದ್ಯಗಳಲ್ಲಿ ವೈಭವ್ ಕಲೆಹಾಕಿರುವುದು 221 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 55.25 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ.

2 / 5
ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ ಈವರೆಗೆ 12 ಸಿಕ್ಸ್ ಹಾಗೂ 23 ಫೋರ್​ಗಳನ್ನು ಸಹ ಬಾರಿಸಿದ್ದಾರೆ. ಅದು ಕೂಡ ಮೂರು ಪಂದ್ಯಗಳಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. 

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ ಈವರೆಗೆ 12 ಸಿಕ್ಸ್ ಹಾಗೂ 23 ಫೋರ್​ಗಳನ್ನು ಸಹ ಬಾರಿಸಿದ್ದಾರೆ. ಅದು ಕೂಡ ಮೂರು ಪಂದ್ಯಗಳಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. 

3 / 5
ಇನ್ನು ಅಂಡರ್-19 ಟೆಸ್ಟ್​ನಲ್ಲಿ ವೈಭವ್ ಸೂರ್ಯವಂಶಿ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಸೆಂಚುರಿಗಳು ಮೂಡಿಬಂದಿರುವುದು ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ. ಒಂದು ಶತಕವು ಭಾರತದಲ್ಲಿ ಮೂಡಿಬಂದರೆ, ಮತ್ತೊಂದು ಸೆಂಚುರಿ ಸಿಡಿಸಿರುವುದು ಆಸ್ಟ್ರೇಲಿಯಾದಲ್ಲಿ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಕೆರಿಯರ್ ಆರಂಭದಲ್ಲೇ ವೈಭವ್ ಸೂರ್ಯವಂಶಿ ಅಬ್ಬರಿಸುತ್ತಿರುವುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

ಇನ್ನು ಅಂಡರ್-19 ಟೆಸ್ಟ್​ನಲ್ಲಿ ವೈಭವ್ ಸೂರ್ಯವಂಶಿ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಸೆಂಚುರಿಗಳು ಮೂಡಿಬಂದಿರುವುದು ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ. ಒಂದು ಶತಕವು ಭಾರತದಲ್ಲಿ ಮೂಡಿಬಂದರೆ, ಮತ್ತೊಂದು ಸೆಂಚುರಿ ಸಿಡಿಸಿರುವುದು ಆಸ್ಟ್ರೇಲಿಯಾದಲ್ಲಿ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಕೆರಿಯರ್ ಆರಂಭದಲ್ಲೇ ವೈಭವ್ ಸೂರ್ಯವಂಶಿ ಅಬ್ಬರಿಸುತ್ತಿರುವುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

4 / 5
ಈ ಅಂಕಿ ಅಂಶಗಳು ಶುಭ ಸೂಚನೆ ಎಂದರೆ ತಪ್ಪಾಗಲಾರದು. ಏಕೆಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೂಡ  ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ ಕೆರಿಯರ್ ಆರಂಭದಿಂದಲೇ ಸಚಿನ್ ಆಸೀಸ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸುತ್ತಾ ಬಂದಿದ್ದರು. ಇದೀಗ ವೈಭವ್ ಸೂರ್ಯವಂಶಿ ಕೂಡ ಅಂಡರ್-19 ಟೂರ್ನಿಗಳಲ್ಲೇ ಆಸ್ಟ್ರೇಲಿಯಾ ವಿರುದ್ಧ ಪಾರುಪತ್ಯ ಮೆರೆಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಶುಭಸೂಚನೆ ಎನ್ನಬಹುದು.

ಈ ಅಂಕಿ ಅಂಶಗಳು ಶುಭ ಸೂಚನೆ ಎಂದರೆ ತಪ್ಪಾಗಲಾರದು. ಏಕೆಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೂಡ  ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ ಕೆರಿಯರ್ ಆರಂಭದಿಂದಲೇ ಸಚಿನ್ ಆಸೀಸ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸುತ್ತಾ ಬಂದಿದ್ದರು. ಇದೀಗ ವೈಭವ್ ಸೂರ್ಯವಂಶಿ ಕೂಡ ಅಂಡರ್-19 ಟೂರ್ನಿಗಳಲ್ಲೇ ಆಸ್ಟ್ರೇಲಿಯಾ ವಿರುದ್ಧ ಪಾರುಪತ್ಯ ಮೆರೆಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಶುಭಸೂಚನೆ ಎನ್ನಬಹುದು.

5 / 5
Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ