AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿ ಸಿಡಿಲಬ್ಬರ… ಭರ್ಜರಿ ದಾಖಲೆ ಜಸ್ಟ್ ಮಿಸ್..!

Vaibhav suryavanshi: ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ರಣಜಿ ಟೂರ್ನಿಯಲ್ಲೂ ಇಂತಹದ್ದೇ ಭರ್ಜರಿ ದಾಖಲೆ ಬರೆಯುವ ಅವಕಾಶವನ್ನು ವೈಭವ್ ಕೈಚೆಲ್ಲಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 05, 2025 | 9:26 AM

Share
ರಣಜಿ ಟೂರ್ನಿಯಲ್ಲೂ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರ ಶುರುವಾಗಿದೆ. ಈ ಸಿಡಿಲಬ್ಬರದೊಂದಿಗೆ ಭರ್ಜರಿ ದಾಖಲೆ ಬರೆಯುವ ಹೊಸ್ತಿಲಿಗೆ ತಲುಪಿದ್ದರು. ಆದರೆ ಶತಕದಂಚಿನಲ್ಲಿ ಎಡವಿ 37 ವರ್ಷಗಳ ಹಳೆಯ ದಾಖಲೆ ಮುರಿಯುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದಾರೆ.

ರಣಜಿ ಟೂರ್ನಿಯಲ್ಲೂ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರ ಶುರುವಾಗಿದೆ. ಈ ಸಿಡಿಲಬ್ಬರದೊಂದಿಗೆ ಭರ್ಜರಿ ದಾಖಲೆ ಬರೆಯುವ ಹೊಸ್ತಿಲಿಗೆ ತಲುಪಿದ್ದರು. ಆದರೆ ಶತಕದಂಚಿನಲ್ಲಿ ಎಡವಿ 37 ವರ್ಷಗಳ ಹಳೆಯ ದಾಖಲೆ ಮುರಿಯುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದಾರೆ.

1 / 6
ಪಾಟ್ನಾದ ಮೊಹಿನುಲ್ ಹಕ್ ಸ್ಟೇಡಿಯಂನಲ್ಲಿ ನಡೆದ ರಣಜಿ ಪ್ಲೇಟ್ ಪಂದ್ಯದಲ್ಲಿ ಮೇಘಾಲಯ ಹಾಗೂ ಬಿಹಾರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಿಹಾರ ಪರ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​​ನಲ್ಲಿ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಪಾಟ್ನಾದ ಮೊಹಿನುಲ್ ಹಕ್ ಸ್ಟೇಡಿಯಂನಲ್ಲಿ ನಡೆದ ರಣಜಿ ಪ್ಲೇಟ್ ಪಂದ್ಯದಲ್ಲಿ ಮೇಘಾಲಯ ಹಾಗೂ ಬಿಹಾರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಿಹಾರ ಪರ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​​ನಲ್ಲಿ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

2 / 6
ಈ ಮ್ಯಾಚ್​​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಮೊದಲ ಓವರ್​​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಹಾಫ್ ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ವೈಭವ್ ಸೂರ್ಯವಂಶಿ 67 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 9 ಫೋರ್​​​ಗಳೊಂದಿಗೆ 93 ರನ್ ಬಾರಿಸಿದರು.

ಈ ಮ್ಯಾಚ್​​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಮೊದಲ ಓವರ್​​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಹಾಫ್ ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ವೈಭವ್ ಸೂರ್ಯವಂಶಿ 67 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 9 ಫೋರ್​​​ಗಳೊಂದಿಗೆ 93 ರನ್ ಬಾರಿಸಿದರು.

3 / 6
ಆದರೆ ಶತಕಕ್ಕೆ ಇನ್ನೇನು 7 ರನ್​​​ಗಳು ಬೇಕಿದ್ದ ವೇಳೆ ಎಲ್​​ಬಿಡಬ್ಲ್ಯೂ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ರಣಜಿ ಟೂರ್ನಿಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ ಬರೆಯುವ ಅವಕಾಶವನ್ನು ವೈಭವ್ ಸೂರ್ಯವಂಶಿ ಕೈಚೆಲ್ಲಿಕೊಂಡರು.

ಆದರೆ ಶತಕಕ್ಕೆ ಇನ್ನೇನು 7 ರನ್​​​ಗಳು ಬೇಕಿದ್ದ ವೇಳೆ ಎಲ್​​ಬಿಡಬ್ಲ್ಯೂ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ರಣಜಿ ಟೂರ್ನಿಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ ಬರೆಯುವ ಅವಕಾಶವನ್ನು ವೈಭವ್ ಸೂರ್ಯವಂಶಿ ಕೈಚೆಲ್ಲಿಕೊಂಡರು.

4 / 6
ಸದ್ಯ ಈ ದಾಖಲೆ ಧ್ರುವ್ ಪಾಂಡೋವ್ ಅವರ ಹೆಸರಿನಲ್ಲಿದೆ. 1988 ರಲ್ಲಿ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಜಮ್ಮು ಕಾಶ್ಮೀರ ಪರ ಕಣಕ್ಕಿಳಿದಿದ್ದ ಧ್ರುವ್ ಪಾಂಡೋವ್ 137 ರನ್ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 14 ವರ್ಷ 293 ದಿನಗಳು. ಈ ಮೂಲಕ ರಣಜಿ ಟೂರ್ನಿ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ದಾಖಲೆ ನಿರ್ಮಿಸಿದ್ದರು.

ಸದ್ಯ ಈ ದಾಖಲೆ ಧ್ರುವ್ ಪಾಂಡೋವ್ ಅವರ ಹೆಸರಿನಲ್ಲಿದೆ. 1988 ರಲ್ಲಿ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಜಮ್ಮು ಕಾಶ್ಮೀರ ಪರ ಕಣಕ್ಕಿಳಿದಿದ್ದ ಧ್ರುವ್ ಪಾಂಡೋವ್ 137 ರನ್ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 14 ವರ್ಷ 293 ದಿನಗಳು. ಈ ಮೂಲಕ ರಣಜಿ ಟೂರ್ನಿ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ 14 ವರ್ಷ 222 ದಿನಗಳಾಗಿರುವ ವೈಭವ್ ಸೂರ್ಯವಂಶಿ ಈ ದಾಖಲೆ ಮುರಿಯುವ ಹೊಸ್ತಿಲಿಗೆ ತಲುಪಿದ್ದರು. ಆದರೆ ಶತಕದಂಚಿನಲ್ಲಿ ವಿಕೆಟ್ ಕೈ ಚೆಲ್ಲುವ ಮೂಲಕ ಭರ್ಜರಿ ರೆಕಾರ್ಡ್​​ ತನ್ನದಾಗಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡರು. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಹೊಸ ಇತಿಹಾಸ ಬರೆಯುವ ಅವಕಾಶ ವೈಭವ್ ಸೂರ್ಯವಂಶಿ ಮುಂದಿದೆ.

ಇದೀಗ 14 ವರ್ಷ 222 ದಿನಗಳಾಗಿರುವ ವೈಭವ್ ಸೂರ್ಯವಂಶಿ ಈ ದಾಖಲೆ ಮುರಿಯುವ ಹೊಸ್ತಿಲಿಗೆ ತಲುಪಿದ್ದರು. ಆದರೆ ಶತಕದಂಚಿನಲ್ಲಿ ವಿಕೆಟ್ ಕೈ ಚೆಲ್ಲುವ ಮೂಲಕ ಭರ್ಜರಿ ರೆಕಾರ್ಡ್​​ ತನ್ನದಾಗಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡರು. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಹೊಸ ಇತಿಹಾಸ ಬರೆಯುವ ಅವಕಾಶ ವೈಭವ್ ಸೂರ್ಯವಂಶಿ ಮುಂದಿದೆ.

6 / 6

Published On - 7:33 am, Wed, 5 November 25

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ