AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಅದೃಷ್ಟ… ಡಕ್ ವೈಭವ್ ಸೂರ್ಯವಂಶಿ ಗೋಲ್ಡನ್ ಡಕ್..!

Australia U19 vs India U19: ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭಾರತ ಅಂಡರ್-19 ತಂಡ ಭರ್ಜರಿ ಜಯ ಸಾಧಿಸಿದೆ. ಮೆಕೆನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​ಗಳಿಸಿದರೆ, ಭಾ್ತ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಬೆನ್ನತ್ತುವ ಮೂಲಕ ಭಾರತ ತಂಡ 7 ವಿಕೆಟ್​​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 08, 2025 | 12:53 PM

Share
ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

1 / 5
ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

2 / 5
ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

3 / 5
ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

4 / 5
ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

5 / 5
Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ